AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಪ ಮಹಾಕವಿ ರಸ್ತೆಯ ಹೆಸರನ್ನು ಬದಲಾಯಿಸಲು ಮುಂದಾಯ್ತಾ ? ಕಸಾಪ; ಜೈನ್ ಅಸೋಷಿಯೇಷನ್​ನಿಂದ ವಿರೋಧ

ನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) (Kannada Sahitya Parishat KSP) ಕವಿ ಪಂಪನ ಹೆಸರಿನ ರಸ್ತೆಯ ಹೆಸರನ್ನು ಬದಲಾಯಿಸಲು ಮುಂದಾಯ್ತಾ ? ಎಂಬ ಪ್ರಶ್ನೆ ಉದ್ಭವವಾಗಿದೆ.

ಪಂಪ ಮಹಾಕವಿ ರಸ್ತೆಯ ಹೆಸರನ್ನು ಬದಲಾಯಿಸಲು ಮುಂದಾಯ್ತಾ ? ಕಸಾಪ; ಜೈನ್ ಅಸೋಷಿಯೇಷನ್​ನಿಂದ  ವಿರೋಧ
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿ
TV9 Web
| Updated By: ವಿವೇಕ ಬಿರಾದಾರ|

Updated on:Sep 12, 2022 | 2:55 PM

Share

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) (Kannada Sahitya Parishat KSP) ಕವಿ ಪಂಪನ ಹೆಸರಿನ ರಸ್ತೆಯ ಹೆಸರನ್ನು ಬದಲಾಯಿಸಲು ಮುಂದಾಯ್ತಾ ? ಎಂಬ ಪ್ರಶ್ನೆ ಉದ್ಭವವಾಗಿದೆ. ಪರಿಷತ್​ನ ನಿರ್ಧಾರಕ್ಕೆ ಕರ್ನಾಟಕ ಜೈನ್ ಅಸೋಷಿಯೇಷನ್ ತೀರ್ವ ವಿರೋಧ ವ್ಯಕ್ತಪಡಿಸಿದೆ. ಮಿಂಟೋ ಆಸ್ಪತ್ರೆಯ ಮುಂಬಾಗದಿಂದ ಸಾಗುವ ಪಂಪ ಮಹಾಕವಿ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಅಂತಾ ತಿದ್ದುಪಡಿ ಮಾಡಲು ಕಸಪಾ ಅಧ್ಯಕ್ಷ ಮಹೇಶ್​ ಜೋಶಿ ಮುಂದಾಗಿದ್ದಾರೆ.

ಪರಿಷತ್​ನ ನಿರ್ಧಾರಕ್ಕೆ ಕರ್ನಾಟಕ ಜೈನ್ ಅಸೋಷಿಯೇಷನ್ ತೀರ್ವ ವಿರೋಧ ವ್ಯಕ್ತಪಡಿಸಿದೆ. ಈ ನಿರ್ಧಾರ ಜೈನ್ ಕವಿಗೆ ಮಾಡುವ ಅವಮಾನ ಅಂತಾ ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಹೆಸರಿಗೆ ಸಾಹಿತಿಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ.

ಕನ್ನಡ ಸಾಹಿತ್ಯದಲ್ಲಿ ಆದಿ ಕವಿ ಪಂಪಾ ಅವರಿಗೆ ವಿಶೇಷ ಅಸ್ಮಿತೆ ಇದೆ. ಜೈನ್ ಕವಿ ಪಂಪನ ಹೆಸರು ಬದಲಾಯಿಸುವ ಚಿಂತನೆ ಕೈಬಿಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಜೈನ ಸಮುದಾಯ ಕಸಪಾ ಅಧ್ಯಕ್ಷರ ಜೊತೆ ವಾಗ್ವದಕ್ಕೆ ಮುಂದಾಗಿದೆ.

ಪಂಪನ ಹೆಸರ ಬದಲಾಯಿಸದಂತೆ ಅಧ್ಯಕ್ಷರ ಜೊತೆ ಮಾತಿನ ಚಕುಮಕಿ ನಡೆದಿದ್ದು, ಬೇರೆ ಬೇರೆ ಜಿಲ್ಲಗಳಿಂದ ಬಂದಿರುವ ಜೈನ್ ಸಮುದಾಯದ ಜಿಲ್ಲಾ ಅಧ್ಯಕ್ಷರುಗಳಿಂದ ಯಾವುದೇ ಕಾರಣಕ್ಕೂ ಜೈನ್ ಕವಿ ಪಂಪನ ಹೆಸರಿನ ರಸ್ತೆ ಬದಲಾಯಿಸದಂತೆ ಕಸಾಪ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.

ಹಿನ್ನೆಲೆ

 ‘ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ’ ಎನ್ನುವ ಶ್ರೇಯಸ್ಸು ಪಡೆದಿರುವ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕೇಂದ್ರ ಕಚೇರಿ ಇರುವ ರಸ್ತೆಯ ಹೆಸರು ಬದಲಿಸಬೇಕು ಎಂದು ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್​ ಜೋಶಿ  ಬಿಬಿಎಂಪಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ ವಿದ್ಯಮಾನವು ಇದೀಗ ಕನ್ನಡ ಬೌದ್ಧಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ‘ಹೆಸರು ಬದಲಿಸುವುದು ಸರಿಯಾದ ನಿರ್ಧಾರವಲ್ಲ’ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಚಾಮರಾಜಪೇಟೆಯ ಮಿಂಟೊ ಆಸ್ಪತ್ರೆ ಮತ್ತು ಮಕ್ಕಳ ಕೂಟ ಉದ್ಯಾನದ ನಡುವಣ ರಸ್ತೆಗೆ ‘ಸಾಹಿತ್ಯ ಪರಿಷತ್ ರಸ್ತೆ’ ಎಂದು ಹೊಸ ನಾಮಕರಣ ಮಾಡಬೇಕು ಎಂದು ಮಹೇಶ್​ಜೋಶಿ ಕೋರಿದ್ದಾರೆ. ಈ ಇಡೀ ರಸ್ತೆಯನ್ನು ‘ಕನ್ನಡಮಯ’ಗೊಳಿಸಲಾಗುವುದು ಎಂದು ಸಾಹಿತ್ಯ ಪರಿಷತ್ ತಿಳಿಸಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂಬ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಹೇಳಿಕೆಯನ್ನು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

‘ಹೆಸರು ಬದಲಿಸುವ ಪ್ರಸ್ತಾವ ಕುರಿತು ಚರ್ಚಿಸಲು ಈ ರಸ್ತೆಯಲ್ಲಿರುವ ಇತರ ಸಂಘ ಸಂಸ್ಥೆಗಳು, ಕಚೇರಿಗಳ ಪ್ರತಿನಿಧಿಗಳನ್ನೂ ಆಹ್ವಾನಿಸಿದ್ದೇವೆ. ಪೊಲೀಸ್ ಠಾಣೆ, ಕರ್ನಾಟಕ ಸಂಸ್ಕೃತ ವಿವಿ, ಕನ್ನಡ ದಿನಪತ್ರಿಕೆ, ಕೆಲ ಬ್ಯಾಂಕ್​ಗಳು, ಉದ್ಯಾನವನ, ಮಿಂಟೊ ಕಣ್ಣಿನ ಅಸ್ಪತ್ರೆ ಸೇರಿದಂತೆ ಎಲ್ಲರ ಗಮನಕ್ಕೆ ತಂದಿದ್ದೇವೆ’ ಎಂದು ಮಹೇಶ್ ಜೋಶಿ ಹೇಳಿದ್ದಾರೆ. ಕೆಲವು ದೇಶಗಳಲ್ಲಿ ನಿರ್ದಿಷ್ಟ ಥೀಮ್​ಗಳ ಮೇಲೆ ರಸ್ತೆಗಳನ್ನು ರೂಪಿಸಿದ್ದಾರೆ. ಅಂಥ ಹಲವು ಉದಾಹರಣೆಗಳನ್ನು ಗಮನಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಈ ರಸ್ತೆಯು ಕನ್ನಡ ಪ್ರೇಮಿಗಳ ಕಣ್ಣಿಗೆ ಹಬ್ಬದಂತೆ ಆಗುತ್ತದೆ. ಬೆಂಗಳೂರಿಗೆ ಬರುವ ಪ್ರತಿಯೊಬ್ಬರೂ ಸಾಹಿತ್ಯ ಪರಿಷತ್​ಗೆ ಭೇಟಿ ನೀಡುವಂತೆ ಮಾಡುತ್ತೇವೆ ಎಂದು ಜೋಶಿ ಹೇಳಿದರು.

ಮುಂದಿನ ದಿನಗಳಲ್ಲಿ ಈ ರಸ್ತೆಯಲ್ಲಿ ಖ್ಯಾತ ಸಾಹಿತಿಗಳ ಪ್ರತಿಮೆಗಳು, ಕನ್ನಡದ ಲೈವ್ ಹಾಡುಗಳು ಮತ್ತು ವಿಶೇಷ ಬೆಳಕಿನ ವ್ಯವಸ್ಥೆ ಮಾಡಲಾಗುವುದು. ಜನಪ್ರಿಯ ಕನ್ನಡಪರ ಹೇಳಿಕೆಗಳನ್ನು ಅಳವಡಿಸಲಾಗುವುದು ಎಂದು ಸಾಹಿತ್ಯ ಪರಿಷತ್ ಹೇಳಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:42 pm, Mon, 12 September 22

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ