AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ. 2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ. ಏನು […]

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್
ವ್ಯಕ್ತಿಗತ ಟೀಕೆ ವಿಚಾರದಲ್ಲಿ ಯಾರೂ ಎಲ್ಲೆ ಮೀರಬಾರದು, ನಾನು ಈ ವಿಚಾರದಲ್ಲಿ ಎಚ್ಚರಿಕೆಯಿಂದ ಇದ್ದೇನೆ: ಇಂಧನ ಸಚಿವ ಸುನೀಲ್ ಕುಮಾರ್
KUSHAL V
|

Updated on: Nov 21, 2020 | 6:13 PM

Share

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ.

2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ.

ಏನು ಹೇಳಿದ್ರು ಶಾಸಕರು? 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲ್ಲಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸುನೀಲ್​ ಕುಮಾರ್, ಬಂಟ್ವಾಳ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆ ರಾಜೇಶ್​ ನಾಯ್ಕ್ ಮತ್ತು ರಮಾನಾಥ್​ ರೈ ನಡುವೆ ನಡೆಯುತ್ತಿಲ್ಲ. ಬದಲಿಗೆ ಶ್ರೀರಾಮ ಮತ್ತು ಅಲ್ಲಾಹುವಿನ ನಡುವೆ ನಡೆಯುತ್ತಿದೆ. ಮತ್ತೊಮ್ಮೆ ಅಲ್ಲಾಹುವನ್ನೇ ಗೆಲ್ಲಿಸುತ್ತೀರೋ ಅಥವಾ ಶ್ರೀರಾಮನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸುತ್ತೀರೋ ನೀವೇ ನಿರ್ಧರಿಸಿ ಎಂದು ಹೇಳಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು