AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ. 2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ. ಏನು […]

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್
ವ್ಯಕ್ತಿಗತ ಟೀಕೆ ವಿಚಾರದಲ್ಲಿ ಯಾರೂ ಎಲ್ಲೆ ಮೀರಬಾರದು, ನಾನು ಈ ವಿಚಾರದಲ್ಲಿ ಎಚ್ಚರಿಕೆಯಿಂದ ಇದ್ದೇನೆ: ಇಂಧನ ಸಚಿವ ಸುನೀಲ್ ಕುಮಾರ್
KUSHAL V
|

Updated on: Nov 21, 2020 | 6:13 PM

Share

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ.

2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ.

ಏನು ಹೇಳಿದ್ರು ಶಾಸಕರು? 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲ್ಲಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸುನೀಲ್​ ಕುಮಾರ್, ಬಂಟ್ವಾಳ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆ ರಾಜೇಶ್​ ನಾಯ್ಕ್ ಮತ್ತು ರಮಾನಾಥ್​ ರೈ ನಡುವೆ ನಡೆಯುತ್ತಿಲ್ಲ. ಬದಲಿಗೆ ಶ್ರೀರಾಮ ಮತ್ತು ಅಲ್ಲಾಹುವಿನ ನಡುವೆ ನಡೆಯುತ್ತಿದೆ. ಮತ್ತೊಮ್ಮೆ ಅಲ್ಲಾಹುವನ್ನೇ ಗೆಲ್ಲಿಸುತ್ತೀರೋ ಅಥವಾ ಶ್ರೀರಾಮನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸುತ್ತೀರೋ ನೀವೇ ನಿರ್ಧರಿಸಿ ಎಂದು ಹೇಳಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ