AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ. 2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ. ಏನು […]

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್
ವ್ಯಕ್ತಿಗತ ಟೀಕೆ ವಿಚಾರದಲ್ಲಿ ಯಾರೂ ಎಲ್ಲೆ ಮೀರಬಾರದು, ನಾನು ಈ ವಿಚಾರದಲ್ಲಿ ಎಚ್ಚರಿಕೆಯಿಂದ ಇದ್ದೇನೆ: ಇಂಧನ ಸಚಿವ ಸುನೀಲ್ ಕುಮಾರ್
KUSHAL V
|

Updated on: Nov 21, 2020 | 6:13 PM

Share

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ.

2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ.

ಏನು ಹೇಳಿದ್ರು ಶಾಸಕರು? 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲ್ಲಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸುನೀಲ್​ ಕುಮಾರ್, ಬಂಟ್ವಾಳ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆ ರಾಜೇಶ್​ ನಾಯ್ಕ್ ಮತ್ತು ರಮಾನಾಥ್​ ರೈ ನಡುವೆ ನಡೆಯುತ್ತಿಲ್ಲ. ಬದಲಿಗೆ ಶ್ರೀರಾಮ ಮತ್ತು ಅಲ್ಲಾಹುವಿನ ನಡುವೆ ನಡೆಯುತ್ತಿದೆ. ಮತ್ತೊಮ್ಮೆ ಅಲ್ಲಾಹುವನ್ನೇ ಗೆಲ್ಲಿಸುತ್ತೀರೋ ಅಥವಾ ಶ್ರೀರಾಮನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸುತ್ತೀರೋ ನೀವೇ ನಿರ್ಧರಿಸಿ ಎಂದು ಹೇಳಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್