ಬೈ ಎಲೆಕ್ಷನ್ ಭರಾಟೆ ಜೋರು, ಕೈ ನಾಯಕರ ಪ್ರಚಾರ ಮಾತ್ರ ನಾಮ್​ ಕೆ ವಾಸ್ತೆ!

ಬೆಂಗಳೂರು: ಡಿಸೆಂಬರ್15ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಇಂದು ನಾಮಪತ್ರ ವಾಪಸ್​ಗೆ ಕೊನೆಯ ದಿನವಾಗಿದೆ. ಅಖಾಡದಲ್ಲಿ ಯಾರೆಲ್ಲ ಸೆಣೆಸಲಿದ್ದಾರೆ ಎಂಬ ಚಿತ್ರಣ ಸ್ಪಷ್ಟವಾಗಲಿದೆ. ಉಪಚುನಾವಣೆ ಸಿದ್ಧತೆ ಭರದಿಂದ ಸಾಗುತ್ತಿದ್ದರೂ ಪ್ರಮುಖ ಪಕ್ಷವಾದ ಕಾಂಗ್ರೆಸ್ ಹೆಚ್ಚು ಆಸಕ್ತಿಯಿಂದ ಸಕ್ರಿಯವಾಗಿಲ್ಲ ಎಂಬುದು ಗೋಚರವಾಗುತ್ತಿದೆ. ಪಕ್ಷದ ನಾಯಕರಿಗೆ ಯಾವುದೇ ರೀತಿಯ ಹುಮ್ಮಸ್ಸು ಇದ್ದಂತಿಲ್ಲ. ಇನ್ನೂ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡದ ಕಾಂಗ್ರೆಸ್, ಈಗ ಕೇವಲ ಇಬ್ಬರು ನಾಯಕರ ಪ್ರವಾಸ ಮಾತ್ರ ನಿಗದಿ ಮಾಡಿದೆ. ಸಿದ್ದರಾಮಯ್ಯ ಮತ್ತು ದಿನೇಶ್ […]

ಬೈ ಎಲೆಕ್ಷನ್ ಭರಾಟೆ ಜೋರು, ಕೈ ನಾಯಕರ ಪ್ರಚಾರ ಮಾತ್ರ ನಾಮ್​ ಕೆ ವಾಸ್ತೆ!
ಸಾಧು ಶ್ರೀನಾಥ್​

Updated on: Nov 21, 2019 | 12:55 PM

ಬೆಂಗಳೂರು: ಡಿಸೆಂಬರ್15ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಇಂದು ನಾಮಪತ್ರ ವಾಪಸ್​ಗೆ ಕೊನೆಯ ದಿನವಾಗಿದೆ. ಅಖಾಡದಲ್ಲಿ ಯಾರೆಲ್ಲ ಸೆಣೆಸಲಿದ್ದಾರೆ ಎಂಬ ಚಿತ್ರಣ ಸ್ಪಷ್ಟವಾಗಲಿದೆ. ಉಪಚುನಾವಣೆ ಸಿದ್ಧತೆ ಭರದಿಂದ ಸಾಗುತ್ತಿದ್ದರೂ ಪ್ರಮುಖ ಪಕ್ಷವಾದ ಕಾಂಗ್ರೆಸ್ ಹೆಚ್ಚು ಆಸಕ್ತಿಯಿಂದ ಸಕ್ರಿಯವಾಗಿಲ್ಲ ಎಂಬುದು ಗೋಚರವಾಗುತ್ತಿದೆ. ಪಕ್ಷದ ನಾಯಕರಿಗೆ ಯಾವುದೇ ರೀತಿಯ ಹುಮ್ಮಸ್ಸು ಇದ್ದಂತಿಲ್ಲ.

ಇನ್ನೂ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡದ ಕಾಂಗ್ರೆಸ್, ಈಗ ಕೇವಲ ಇಬ್ಬರು ನಾಯಕರ ಪ್ರವಾಸ ಮಾತ್ರ ನಿಗದಿ ಮಾಡಿದೆ. ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಮಾತ್ರ ಪ್ರವಾಸಗಳಲ್ಲಿ ಸಕ್ರಿಯರಾಗಿದ್ದು, ಉಳಿದಂತೆ ಬಹುತೇಕ ‘ಕೈ’ ನಾಯಕರು ಪ್ರಚಾರದಿಂದ ದೂರವೇ ಉಳಿದಿದ್ದಾರೆ.

ಡಿ.ಕೆ. ಶಿವಕುಮಾರ್‌ರಿಂದ ನಾಮಕಾವಸ್ತೆ ಮಾತ್ರ ಪ್ರಚಾರ ನಡೆದಿದೆ. ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ, ಬಿ.ಕೆ.ಹರಿಪ್ರಸಾದ್ ಸಹ ಚುನಾವಣಾ ಪ್ರಚಾರದಿಂದ ದೂರ ದೂರವೇ ಇದ್ದಾರೆ.

Published On - 11:12 am, Thu, 21 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us