ಸಂಪೂರ್ಣ ನೆಲಕಚ್ಚಿದ JDSಗೆ ಇನ್ನು 3.5 ವರ್ಷ ಬಲು ದುಬಾರಿ

ಬೆಂಗಳೂರು: ಮೈತ್ರಿ ಸರ್ಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಪಡೆಯುವಲ್ಲಿ ಉಪಚುನಾವಣೆಯಲ್ಲಿ ಸಂಪೂರ್ಣ ಸೋತಿದೆ. ಹಿರಿಯ ಗೌಡರ ನೇತೃತ್ವದಲ್ಲಿ ಪಕ್ಷ ಫೀನಿಕ್ಸ್​ನಂತೆ ಮರಳಿ ಜೀವ ಪಡೆಯುತ್ತದೆ ಎಂಬ ಆಶಾಭಾವ ಕಳಚಿ ಬಿದ್ದಿದೆ. ಯಶವಂತಪುರ ಒಂದರಲ್ಲೇ ಜೆಡಿಎಸ್ ಸ್ವಲ್ಪ ಮಟ್ಟಿಗೆ ತನ್ನ ಇರುವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಅದು ಬಿಟ್ಟರೆ ಕೆಆರ್ ಪೇಟೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದಷ್ಟು ಹೆಚ್ಚು ಮತಗಳನ್ನು ಗಳಿಸಿದೆ. ಹೇಳಬೇಕೆಂದರೆ ಜೆಡಿಎಸ್ ಈ ಎರಡು ಕ್ಷೇತ್ರಗಳಲ್ಲಿ ಗೆದ್ದುಬೀಗಬೇಕಿತ್ತು. […]

ಸಂಪೂರ್ಣ ನೆಲಕಚ್ಚಿದ JDSಗೆ ಇನ್ನು 3.5 ವರ್ಷ ಬಲು ದುಬಾರಿ
ಸಾಧು ಶ್ರೀನಾಥ್​

Updated on: Dec 09, 2019 | 1:05 PM

ಬೆಂಗಳೂರು: ಮೈತ್ರಿ ಸರ್ಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಪಡೆಯುವಲ್ಲಿ ಉಪಚುನಾವಣೆಯಲ್ಲಿ ಸಂಪೂರ್ಣ ಸೋತಿದೆ. ಹಿರಿಯ ಗೌಡರ ನೇತೃತ್ವದಲ್ಲಿ ಪಕ್ಷ ಫೀನಿಕ್ಸ್​ನಂತೆ ಮರಳಿ ಜೀವ ಪಡೆಯುತ್ತದೆ ಎಂಬ ಆಶಾಭಾವ ಕಳಚಿ ಬಿದ್ದಿದೆ.

ಯಶವಂತಪುರ ಒಂದರಲ್ಲೇ ಜೆಡಿಎಸ್ ಸ್ವಲ್ಪ ಮಟ್ಟಿಗೆ ತನ್ನ ಇರುವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಅದು ಬಿಟ್ಟರೆ ಕೆಆರ್ ಪೇಟೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದಷ್ಟು ಹೆಚ್ಚು ಮತಗಳನ್ನು ಗಳಿಸಿದೆ. ಹೇಳಬೇಕೆಂದರೆ ಜೆಡಿಎಸ್ ಈ ಎರಡು ಕ್ಷೇತ್ರಗಳಲ್ಲಿ ಗೆದ್ದುಬೀಗಬೇಕಿತ್ತು.

ಈ ಉಪಚುನಾವಣೆಗೂ ಮುನ್ನ ಮೈತ್ರಿ ವಿಷಯದಲ್ಲಿ ಯಡವಟ್ಟು ಮಾಡಿಕೊಂಡ ಅಪ್ಪ ಮಗ ಭವಿಷ್ಯದಲ್ಲಿ ಅಂದರೆ ಇನ್ನು ಮೂರೂವರೆ ವರ್ಷಗಳ ಕಾಲ ತಮ್ಮ ಪಕ್ಷದ ಅಸ್ತಿತ್ವಕ್ಕೆ ಸಂಚಕಾರ ತಂದಿಟ್ಟುಕೊಂಡಿದ್ದಾರೆ. ಇದು ಬಹಳ ದುಬಾರಿ ಆದೀತು.

Published On - 12:59 pm, Mon, 9 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us