ಬೈ ಎಲೆಕ್ಷನ್ ಸೋಲು​: ಥರಗುಟ್ಟುತ್ತಿದೆ ಕಾಂಗ್ರೆಸ್​, ಬಿತ್ತು ಮತ್ತೊಂದು ವಿಕೆಟ್ 

ಬೆಂಗಳೂರು: ಉಪಚುನಾವಣೆ ಸೋಲಿನ ನೈತಿಕ ಹೊಣೆಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ವಿಚಾರವಾಗಿ ನಾನು ಹೈಕಮಾಂಡ್ ಜೊತೆ ನಿನ್ನೆ ಮತನಾಡಿದ್ದೆ. ನನ್ನ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಹೈಕಮಾಂಡ್​ಗೆ ಕಳಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ರಾಹುಲ್‌ ಗಾಂಧಿ ಅವರು ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದರು. ನಾನು ನನ್ನ ಶಕ್ತಿಮೀರಿ ಕೆಲಸ‌ಮಾಡಿದ್ದೇನೆ. ಆದ್ರೆ, ಎಲ್ಲಿ ತಪ್ಪಾಗಿದೆ, ಏನು ಸಮಸ್ಯೆಯಾಗಿದೆ ಎಂದು ತಿಳಿದುಕೊಳ್ಳಬೇಕು. ಸೋಲಿನ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ಚುನಾವಣೆ ಬಳಿಕ ರಾಜ್ಯದ, […]

ಬೈ ಎಲೆಕ್ಷನ್ ಸೋಲು​: ಥರಗುಟ್ಟುತ್ತಿದೆ ಕಾಂಗ್ರೆಸ್​, ಬಿತ್ತು ಮತ್ತೊಂದು ವಿಕೆಟ್ 
ಸಾಧು ಶ್ರೀನಾಥ್​

Updated on: Dec 09, 2019 | 4:54 PM

ಬೆಂಗಳೂರು: ಉಪಚುನಾವಣೆ ಸೋಲಿನ ನೈತಿಕ ಹೊಣೆಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ವಿಚಾರವಾಗಿ ನಾನು ಹೈಕಮಾಂಡ್ ಜೊತೆ ನಿನ್ನೆ ಮತನಾಡಿದ್ದೆ. ನನ್ನ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಹೈಕಮಾಂಡ್​ಗೆ ಕಳಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಾಹುಲ್‌ ಗಾಂಧಿ ಅವರು ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದರು. ನಾನು ನನ್ನ ಶಕ್ತಿಮೀರಿ ಕೆಲಸ‌ಮಾಡಿದ್ದೇನೆ. ಆದ್ರೆ, ಎಲ್ಲಿ ತಪ್ಪಾಗಿದೆ, ಏನು ಸಮಸ್ಯೆಯಾಗಿದೆ ಎಂದು ತಿಳಿದುಕೊಳ್ಳಬೇಕು. ಸೋಲಿನ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ಚುನಾವಣೆ ಬಳಿಕ ರಾಜ್ಯದ, ಜನರ ಹಿತ ಮುಖ್ಯವಾಗಿದೆ. ಲೋಕಸಭೆ ಚುನಾವಣೆ ವೇಳೆಯೂ ನಾನೇ ಅಧ್ಯಕ್ಷನಾಗಿದ್ದೆ. ಈವರೆಗೂ ಎಐಸಿಸಿ ನಮ್ಮ ಮೇಲೆ ವಿಶ್ವಾಸವಿಟ್ಟು ಸಹಕಾರ ನೀಡಿದೆ. ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಎಲ್ಲದಕ್ಕೂ ಮುಕ್ತ ಅವಕಾಶ ಕಲ್ಪಿಸಲಾಗಿತ್ತು ಎಂದರು.

Published On - 4:35 pm, Mon, 9 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us