AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದು ಹುಲಿಯಾ! ಸೋಲಿನಲ್ಲೂ ಗೆಲುವು ಕಂಡರು ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್​ನ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ಕೇಕೆ ಹಾಕಿದ್ದಾರೆ. ರಾಜ್ಯದ 15 ಉಪಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿದ್ದು, ಯಾರಿಗೆಲ್ಲಾ ಗೆಲುವು ಎಂಬುದು ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಕಾಂಗ್ರೆಸ್​ನ ಪರ್ಫಾರ್ಮೆನ್ಸ್ ನೋಡಿದರೆ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎಂದೇ ಹೇಳಬಹುದು. ಮುಖ್ಯವಾಗಿ ಸಿದ್ದರಾಮಯ್ಯನವರು ವೈಯಕ್ತಿಕವಾಗಿ ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದ್ದರು ಅದರಂತೆ ಎರಡರಲ್ಲೂ ಅನರ್ಹ ಶಾಸಕರಿಗೆ ಭರಪೂರ್ ಮಣ್ಣುಮುಕ್ಕಿಸಿದ್ದಾರೆ. ಒಂದೆಡೆ, ಎದೆ ಬಗೆದು ತನ್ನನ್ನು ಶ್ರೀರಾಮನಂತೆ ಚಿತ್ರಿಸಿದ್ದ ಎಂಟಿಬಿ ನಾಗರಾಜ್​ಗೆ ಸೋಲಿನ ರುಚಿ […]

ಹೌದು ಹುಲಿಯಾ! ಸೋಲಿನಲ್ಲೂ ಗೆಲುವು ಕಂಡರು ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on:Dec 09, 2019 | 12:16 PM

Share

ಬೆಂಗಳೂರು: ಕಾಂಗ್ರೆಸ್​ನ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ಕೇಕೆ ಹಾಕಿದ್ದಾರೆ. ರಾಜ್ಯದ 15 ಉಪಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿದ್ದು, ಯಾರಿಗೆಲ್ಲಾ ಗೆಲುವು ಎಂಬುದು ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಕಾಂಗ್ರೆಸ್​ನ ಪರ್ಫಾರ್ಮೆನ್ಸ್ ನೋಡಿದರೆ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎಂದೇ ಹೇಳಬಹುದು.

ಮುಖ್ಯವಾಗಿ ಸಿದ್ದರಾಮಯ್ಯನವರು ವೈಯಕ್ತಿಕವಾಗಿ ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದ್ದರು ಅದರಂತೆ ಎರಡರಲ್ಲೂ ಅನರ್ಹ ಶಾಸಕರಿಗೆ ಭರಪೂರ್ ಮಣ್ಣುಮುಕ್ಕಿಸಿದ್ದಾರೆ. ಒಂದೆಡೆ, ಎದೆ ಬಗೆದು ತನ್ನನ್ನು ಶ್ರೀರಾಮನಂತೆ ಚಿತ್ರಿಸಿದ್ದ ಎಂಟಿಬಿ ನಾಗರಾಜ್​ಗೆ ಸೋಲಿನ ರುಚಿ ತೋರಿಸಿದ್ದಾರೆ. ಮತ್ತೊಂದೆಡೆ ತಮ್ಮ ಅಧಿಪತ್ಯದ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹೆಚ್ ವಿಶ್ವನಾಥರನ್ನಷ್ಟೇ ಅಲ್ಲ, ಆಕಡೆ ತಮ್ಮ ಪುರಾತನ ಶತ್ರು ಎನ್ ಶ್ರೀನಿವಾಸ್ ಪ್ರಸಾದ್ ಬೆಂಬಲಿತ ಅಭ್ಯರ್ಥಿಯನ್ನಾಗಿಯೂ ವಿಶ್ವನಾಥರನ್ನು ಸೋಲಿಸಿದ್ದಾರೆ.

ಇನ್ನು ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿ ಮತ್ತೋರ್ವ ಅರ್ನಹ ಶಾಸಕ ಡಾ ಸುಧಾಕರ್​ರನ್ನು ಸೋಲಿಸಲೇಬೇಕೆಂದು ಹೋರಾಡಿದ ಡಿಕೆಶಿವಕುಮಾರ್ ಗೆಲುವು ಸಾಧಿಸದೇ ಹೋಗಿದ್ದು, ಸಿದ್ದರಾಮಯ್ಯಗೆ ವರವಾಗಿದೆ. ತನ್ಮೂಲಕ ರಾಜ್ಯ ಕಾಂಗ್ರೆಸ್ ನಲ್ಲಿ ತಮ್ಮ ವಿರುದ್ಧ ಎದ್ದಿದ್ದ ಕೂಗನ್ನು ಹೊಸಕಿಹಾಕಿದ್ದಾರೆ.

Published On - 12:11 pm, Mon, 9 December 19

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ