AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದು ಹುಲಿಯಾ! ಸೋಲಿನಲ್ಲೂ ಗೆಲುವು ಕಂಡರು ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್​ನ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ಕೇಕೆ ಹಾಕಿದ್ದಾರೆ. ರಾಜ್ಯದ 15 ಉಪಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿದ್ದು, ಯಾರಿಗೆಲ್ಲಾ ಗೆಲುವು ಎಂಬುದು ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಕಾಂಗ್ರೆಸ್​ನ ಪರ್ಫಾರ್ಮೆನ್ಸ್ ನೋಡಿದರೆ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎಂದೇ ಹೇಳಬಹುದು. ಮುಖ್ಯವಾಗಿ ಸಿದ್ದರಾಮಯ್ಯನವರು ವೈಯಕ್ತಿಕವಾಗಿ ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದ್ದರು ಅದರಂತೆ ಎರಡರಲ್ಲೂ ಅನರ್ಹ ಶಾಸಕರಿಗೆ ಭರಪೂರ್ ಮಣ್ಣುಮುಕ್ಕಿಸಿದ್ದಾರೆ. ಒಂದೆಡೆ, ಎದೆ ಬಗೆದು ತನ್ನನ್ನು ಶ್ರೀರಾಮನಂತೆ ಚಿತ್ರಿಸಿದ್ದ ಎಂಟಿಬಿ ನಾಗರಾಜ್​ಗೆ ಸೋಲಿನ ರುಚಿ […]

ಹೌದು ಹುಲಿಯಾ! ಸೋಲಿನಲ್ಲೂ ಗೆಲುವು ಕಂಡರು ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on:Dec 09, 2019 | 12:16 PM

Share

ಬೆಂಗಳೂರು: ಕಾಂಗ್ರೆಸ್​ನ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ಕೇಕೆ ಹಾಕಿದ್ದಾರೆ. ರಾಜ್ಯದ 15 ಉಪಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿದ್ದು, ಯಾರಿಗೆಲ್ಲಾ ಗೆಲುವು ಎಂಬುದು ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಕಾಂಗ್ರೆಸ್​ನ ಪರ್ಫಾರ್ಮೆನ್ಸ್ ನೋಡಿದರೆ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎಂದೇ ಹೇಳಬಹುದು.

ಮುಖ್ಯವಾಗಿ ಸಿದ್ದರಾಮಯ್ಯನವರು ವೈಯಕ್ತಿಕವಾಗಿ ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದ್ದರು ಅದರಂತೆ ಎರಡರಲ್ಲೂ ಅನರ್ಹ ಶಾಸಕರಿಗೆ ಭರಪೂರ್ ಮಣ್ಣುಮುಕ್ಕಿಸಿದ್ದಾರೆ. ಒಂದೆಡೆ, ಎದೆ ಬಗೆದು ತನ್ನನ್ನು ಶ್ರೀರಾಮನಂತೆ ಚಿತ್ರಿಸಿದ್ದ ಎಂಟಿಬಿ ನಾಗರಾಜ್​ಗೆ ಸೋಲಿನ ರುಚಿ ತೋರಿಸಿದ್ದಾರೆ. ಮತ್ತೊಂದೆಡೆ ತಮ್ಮ ಅಧಿಪತ್ಯದ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹೆಚ್ ವಿಶ್ವನಾಥರನ್ನಷ್ಟೇ ಅಲ್ಲ, ಆಕಡೆ ತಮ್ಮ ಪುರಾತನ ಶತ್ರು ಎನ್ ಶ್ರೀನಿವಾಸ್ ಪ್ರಸಾದ್ ಬೆಂಬಲಿತ ಅಭ್ಯರ್ಥಿಯನ್ನಾಗಿಯೂ ವಿಶ್ವನಾಥರನ್ನು ಸೋಲಿಸಿದ್ದಾರೆ.

ಇನ್ನು ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿ ಮತ್ತೋರ್ವ ಅರ್ನಹ ಶಾಸಕ ಡಾ ಸುಧಾಕರ್​ರನ್ನು ಸೋಲಿಸಲೇಬೇಕೆಂದು ಹೋರಾಡಿದ ಡಿಕೆಶಿವಕುಮಾರ್ ಗೆಲುವು ಸಾಧಿಸದೇ ಹೋಗಿದ್ದು, ಸಿದ್ದರಾಮಯ್ಯಗೆ ವರವಾಗಿದೆ. ತನ್ಮೂಲಕ ರಾಜ್ಯ ಕಾಂಗ್ರೆಸ್ ನಲ್ಲಿ ತಮ್ಮ ವಿರುದ್ಧ ಎದ್ದಿದ್ದ ಕೂಗನ್ನು ಹೊಸಕಿಹಾಕಿದ್ದಾರೆ.

Published On - 12:11 pm, Mon, 9 December 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!