AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದು ಹುಲಿಯಾ! ಸೋಲಿನಲ್ಲೂ ಗೆಲುವು ಕಂಡರು ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್​ನ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ಕೇಕೆ ಹಾಕಿದ್ದಾರೆ. ರಾಜ್ಯದ 15 ಉಪಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿದ್ದು, ಯಾರಿಗೆಲ್ಲಾ ಗೆಲುವು ಎಂಬುದು ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಕಾಂಗ್ರೆಸ್​ನ ಪರ್ಫಾರ್ಮೆನ್ಸ್ ನೋಡಿದರೆ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎಂದೇ ಹೇಳಬಹುದು. ಮುಖ್ಯವಾಗಿ ಸಿದ್ದರಾಮಯ್ಯನವರು ವೈಯಕ್ತಿಕವಾಗಿ ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದ್ದರು ಅದರಂತೆ ಎರಡರಲ್ಲೂ ಅನರ್ಹ ಶಾಸಕರಿಗೆ ಭರಪೂರ್ ಮಣ್ಣುಮುಕ್ಕಿಸಿದ್ದಾರೆ. ಒಂದೆಡೆ, ಎದೆ ಬಗೆದು ತನ್ನನ್ನು ಶ್ರೀರಾಮನಂತೆ ಚಿತ್ರಿಸಿದ್ದ ಎಂಟಿಬಿ ನಾಗರಾಜ್​ಗೆ ಸೋಲಿನ ರುಚಿ […]

ಹೌದು ಹುಲಿಯಾ! ಸೋಲಿನಲ್ಲೂ ಗೆಲುವು ಕಂಡರು ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on:Dec 09, 2019 | 12:16 PM

Share

ಬೆಂಗಳೂರು: ಕಾಂಗ್ರೆಸ್​ನ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ಕೇಕೆ ಹಾಕಿದ್ದಾರೆ. ರಾಜ್ಯದ 15 ಉಪಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿದ್ದು, ಯಾರಿಗೆಲ್ಲಾ ಗೆಲುವು ಎಂಬುದು ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಕಾಂಗ್ರೆಸ್​ನ ಪರ್ಫಾರ್ಮೆನ್ಸ್ ನೋಡಿದರೆ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎಂದೇ ಹೇಳಬಹುದು.

ಮುಖ್ಯವಾಗಿ ಸಿದ್ದರಾಮಯ್ಯನವರು ವೈಯಕ್ತಿಕವಾಗಿ ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದ್ದರು ಅದರಂತೆ ಎರಡರಲ್ಲೂ ಅನರ್ಹ ಶಾಸಕರಿಗೆ ಭರಪೂರ್ ಮಣ್ಣುಮುಕ್ಕಿಸಿದ್ದಾರೆ. ಒಂದೆಡೆ, ಎದೆ ಬಗೆದು ತನ್ನನ್ನು ಶ್ರೀರಾಮನಂತೆ ಚಿತ್ರಿಸಿದ್ದ ಎಂಟಿಬಿ ನಾಗರಾಜ್​ಗೆ ಸೋಲಿನ ರುಚಿ ತೋರಿಸಿದ್ದಾರೆ. ಮತ್ತೊಂದೆಡೆ ತಮ್ಮ ಅಧಿಪತ್ಯದ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹೆಚ್ ವಿಶ್ವನಾಥರನ್ನಷ್ಟೇ ಅಲ್ಲ, ಆಕಡೆ ತಮ್ಮ ಪುರಾತನ ಶತ್ರು ಎನ್ ಶ್ರೀನಿವಾಸ್ ಪ್ರಸಾದ್ ಬೆಂಬಲಿತ ಅಭ್ಯರ್ಥಿಯನ್ನಾಗಿಯೂ ವಿಶ್ವನಾಥರನ್ನು ಸೋಲಿಸಿದ್ದಾರೆ.

ಇನ್ನು ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿ ಮತ್ತೋರ್ವ ಅರ್ನಹ ಶಾಸಕ ಡಾ ಸುಧಾಕರ್​ರನ್ನು ಸೋಲಿಸಲೇಬೇಕೆಂದು ಹೋರಾಡಿದ ಡಿಕೆಶಿವಕುಮಾರ್ ಗೆಲುವು ಸಾಧಿಸದೇ ಹೋಗಿದ್ದು, ಸಿದ್ದರಾಮಯ್ಯಗೆ ವರವಾಗಿದೆ. ತನ್ಮೂಲಕ ರಾಜ್ಯ ಕಾಂಗ್ರೆಸ್ ನಲ್ಲಿ ತಮ್ಮ ವಿರುದ್ಧ ಎದ್ದಿದ್ದ ಕೂಗನ್ನು ಹೊಸಕಿಹಾಕಿದ್ದಾರೆ.

Published On - 12:11 pm, Mon, 9 December 19

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?