AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ 7 ದಿನಗಳ ಕಾಲ ಚಳಿಗಾಲದ ಅಧಿವೇಶನ: ಮಂಡನೆಯಾಗತ್ತಾ ಲವ್ ಜಿಹಾದ್, ಗೋ ಹತ್ಯೆ ನಿಷೇಧ ಕಾಯ್ದೆ?

ಇಂದಿನಿಂದ ಏಳು ದಿನಗಳ ಕಾಲ ಚಳಿಗಾಲದ ಅಧಿವೇಶನ ಶುರುವಾಗಲಿದ್ದು ರಾಜಕೀಯ ಪಕ್ಷಗಳ ಕದನ ತಾರಕಕ್ಕೇರಲಿದೆ. ಪ್ರತಿ ಬಾರಿ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿತ್ತು. ಆದ್ರೆ ಈ ಬಾರಿ ಬೆಂಗಳೂರಲ್ಲೇ ಚಳಿಗಾಲದ ವಿಧಾನ ಮಂಡಲ ಅಧಿವೇಶನ ನಡೆಯಲಿದೆ.

ಇಂದಿನಿಂದ 7 ದಿನಗಳ ಕಾಲ ಚಳಿಗಾಲದ ಅಧಿವೇಶನ: ಮಂಡನೆಯಾಗತ್ತಾ ಲವ್ ಜಿಹಾದ್, ಗೋ ಹತ್ಯೆ ನಿಷೇಧ ಕಾಯ್ದೆ?
ಆಯೇಷಾ ಬಾನು
|

Updated on: Dec 07, 2020 | 6:53 AM

Share

ಬೆಂಗಳೂರು: ಚಳಿಗಾಲದ ಅಧಿವೇಶನಕ್ಕೆ ಕೌಂಟ್‌ಡೌನ್ ಸ್ಟಾರ್ಟ್ ಆಗಿದೆ. ಇಂದಿನಿಂದ ಏಳು ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ರಾಜಕೀಯ ಪಕ್ಷಗಳ ಕದನ ತಾರಕಕ್ಕೇರಲಿದೆ. ಅಂದಹಾಗೆ ಪ್ರತಿ ಬಾರಿ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿತ್ತು. ಆದ್ರೆ ಈ ಬಾರಿ ಬೆಂಗಳೂರಲ್ಲೇ ಚಳಿಗಾಲದ ವಿಧಾನ ಮಂಡಲ ಅಧಿವೇಶನ ನಡೆಯಲಿದೆ.

14 ಪ್ರಮುಖ ಮಸೂದೆಗಳ ಮಂಡನೆಗೆ ಸರ್ಕಾರ ಸಜ್ಜು ಈ ಬಾರಿಯ ಅಧಿವೇಶನದಲ್ಲಿ 14 ಪ್ರಮುಖ ಮಸೂದೆಗಳನ್ನ ಮಂಡಿಸಲು ಬಿಜೆಪಿ ಸರ್ಕಾರ ಸಿದ್ದವಾಗಿದ್ರೆ, ಸರ್ಕಾರವನ್ನ ಸದನದಲ್ಲಿ ಕಟ್ಟಿ ಹಾಕಲು ಕಾಂಗ್ರೆಸ್ ಕೂಡ ಸಿದ್ಧವಾಗಿದೆ. ಅಂದ್ಹಾಗೆ ಮಂಡನೆಗೆ ಸಿದ್ಧವಾಗಿರುವ ಮಸೂದೆಗಳು ಯಾವುವು ಅಂತಾ ನೋಡೋದಾದ್ರೆ

ಯಾವ್ಯಾವ ಮಸೂದೆ ಮಂಡನೆಯಾಗುತ್ತೆ? ಕಳೆದ ಬಾರಿಯ ಅಧಿವೇಶನದ ಅವಧಿಯಲ್ಲಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿಧಾನ ಪರಿಷತ್‌ನಲ್ಲಿ ಪಾಸ್ ಆಗಿರಲಿಲ್ಲ.‌ ಹೀಗಾಗಿ ಭೂಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತೆ ಮಂಡನೆಯಾಗಲಿದೆ. ಇದರ ಜೊತೆಗೆ ಈಗಾಗಲೇ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವ ದೃಷ್ಠಿಯಿಂದ ಬಿಬಿಎಂಪಿ ವಿಧೇಯಕವನ್ನು ಮಂಡಿಸುವ ಸಾಧ್ಯತೆ ದಟ್ಟವಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ವಿಧೇಯಕ ತಿದ್ದುಪಡಿ, ರಾಜ್ಯ ವಿಶ್ವವಿದ್ಯಾಲಯಗಳ ಕಾನೂನು ತಿದ್ದುಪಡಿ ಸೇರಿದಂತೆ ಮಹತ್ವದ ವಿಧೇಯಕಗಳ ಮೇಲೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇನ್ನು ಬಿಜೆಪಿಯ ಕೆಲ ನಾಯಕರು ಹೇಳಿರುವ ಪ್ರಕಾರ ಗೋ ಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ತರಲು ಸರ್ಕಾರ ಸನ್ನದ್ದವಾಗಿದೆ. ಗೋ ಹತ್ಯೆ ನಿಷೇಧ ಕಾಯ್ದೆಗೆ ಅಗತ್ಯ ಸಿದ್ಧತೆಯಾಗಿರುವ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್‌ಗೂ ಮುನ್ಸೂಚನೆ ಸಿಕ್ಕಿದೆ. ಇದನ್ನು ವಿರೋಧಿಸಲು ವಿಪಕ್ಷ ನಾಯಕರು ಸಿದ್ದರಾಗಿದ್ದಾರೆ.

ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ! ಇನ್ನು ವಿಧಾನ ಪರಿಷತ್‌ನ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿ ಕಾರ್ಯದರ್ಶಿಗೆ ನೋಟಿಸ್ ನೀಡಿದ್ದಾರೆ. ಇದರಿಂದ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಮೊದಲ ದಿನದ ಅಧಿವೇಶನಕ್ಕೆ ಗೈರಾಗಲಿರುವ ಸಿಎಂ ಅಧಿವೇಶನದ ಮೊದಲ ದಿನವೇ ಸಿಎಂ ಯಡಿಯೂರಪ್ಪ ಸದನಕ್ಕೆ ಗೈರಾಗಲಿದ್ದಾರೆ. ಇಂದು ಸಿಎಂ ಯಡಿಯೂರಪ್ಪ ಬೆಳಗ್ಗೆ ತಮ್ಮ ತವರು ಜಿಲ್ಲೆ ಪ್ರವಾಸ ಕೈಗೊಂಡಿದ್ದು ಸಂಜೆಯ ವೇಳೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಗದ್ದಲ ಎಬ್ಬಿಸಲಿದೆ ಒನ್ ನೇಷನ್ ಒನ್ ಎಲೆಕ್ಷನ್ ಈ ಬಾರಿಯ ಅಧಿವೇಶನದ ಕೊನೆಯ ಎರಡು ದಿನಗಳ ಕಾಲ ಮಹತ್ವದ ಚರ್ಚೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವಕಾಶ ಕಲ್ಪಿಸಿದ್ದು, ಸದ್ದುಗದ್ದಲ ಏರ್ಪಡಲಿದೆ. ಒನ್ ನೇಷನ್ ಒನ್ ಎಲೆಕ್ಷನ್ ಕುರಿತು ಎರಡು ದಿನಗಳ ವಿಶೇಷ ಚರ್ಚೆಗೆ ನಿರ್ಧರಿಸಿರುವುದು ಈ ಅಧಿವೇಶನದ ಹೈಲೈಟ್ಸ್ ಆಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ