ಮೈಸೂರಿನಲ್ಲಿಲ್ಲ ಕರ್ನಾಟಕ ಬಂದ್ ಬಿಸಿ.. ಯಥಾ ಪ್ರಕಾರ ಜನಜೀವನ
ಮೈಸೂರು: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಮೈಸೂರಿನಲ್ಲಿ ಬಂದ್ ಭಾಗಶಃ ವಿಫಲವಾಗಿದೆ. ಎಂದಿನಂತೆ ಜನಜೀವನ ಆರಂಭವಾಗಿದೆ. ಹೌದು ರಾಜ್ಯದ ಅನೇಕ ಕಡೆ ರೈತರ ಆಕ್ರೋಶದ ಕಿಚ್ಚು ಎಲ್ಲೆ ಮೀರಿದೆ. ಆದರೆ ಮೈಸೂರಿನಲ್ಲಿ ಪ್ರತಿಭಟನೆಯ ಕಿಚ್ಚು ಕಾಣಿಸುತ್ತಿಲ್ಲ. ಕೇವಲ ಪ್ರತಿಭಟನೆಗೆ ಮಾತ್ರ ಬಂದ್ ಸೀಮಿತವಾದಂತಿದೆ. 9 ಗಂಟೆ ನಂತರ ಬಂದ್ ಬಿಸಿ ಕಡಿಮೆಯಾಗಿದೆ. ಮೈಸೂರಿನ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿದೆ. ನಗರ ಬಸ್ ನಿಲ್ದಾಣ ಹಾಗೂ ಗ್ರಾಮಾಂತರ […]

ಮೈಸೂರು: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಮೈಸೂರಿನಲ್ಲಿ ಬಂದ್ ಭಾಗಶಃ ವಿಫಲವಾಗಿದೆ. ಎಂದಿನಂತೆ ಜನಜೀವನ ಆರಂಭವಾಗಿದೆ.
ಹೌದು ರಾಜ್ಯದ ಅನೇಕ ಕಡೆ ರೈತರ ಆಕ್ರೋಶದ ಕಿಚ್ಚು ಎಲ್ಲೆ ಮೀರಿದೆ. ಆದರೆ ಮೈಸೂರಿನಲ್ಲಿ ಪ್ರತಿಭಟನೆಯ ಕಿಚ್ಚು ಕಾಣಿಸುತ್ತಿಲ್ಲ. ಕೇವಲ ಪ್ರತಿಭಟನೆಗೆ ಮಾತ್ರ ಬಂದ್ ಸೀಮಿತವಾದಂತಿದೆ. 9 ಗಂಟೆ ನಂತರ ಬಂದ್ ಬಿಸಿ ಕಡಿಮೆಯಾಗಿದೆ. ಮೈಸೂರಿನ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿದೆ. ನಗರ ಬಸ್ ನಿಲ್ದಾಣ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಯಥಾ ಪ್ರಕಾರ ನಡೆಯುತ್ತಿದೆ.
ಅಂಗಡಿ ಮಾಲೀಕರು ಬಾಗಿಲು ತೆರೆದು ವ್ಯಾಪಾರಕ್ಕಿಳಿದಿದ್ದಾರೆ. ವಾಹನ ಸಂಚಾರ ಎಂದಿನಂತೆ ಆರಂಭವಾಗಿದೆ. ನಿತ್ಯದ ಚಟುವಟಿಕೆಗಳಿಗೆ ಯಾವುದೇ ಅಡೆತಡೆ ಇಲ್ಲ. ದೇವರಾಜು ಅರಸು ರಸ್ತೆ, ಶಿವರಾಂಪೇಟೆ, ಸಯ್ಯಾಜಿರಾವ್ ರಸ್ತೆಗಳಲ್ಲಿ ಸಹಜ ಸ್ಥಿತಿ ಕಂಡು ಬಂದಿದೆ.





