AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holidays in March 2021: ಮಾರ್ಚ್​ ತಿಂಗಳಲ್ಲಿ ಬ್ಯಾಂಕ್​ಗೆ ಎಷ್ಟೆಲ್ಲಾ ದಿನ ರಜೆ ಇದೆ ಎಂಬ ಮಾಹಿತಿ ಇಲ್ಲಿದೆ

Karnataka Bank Holidays in March 2021: ಮಾರ್ಚ್​ನಲ್ಲಿ ಶಿವರಾತ್ರಿ ಹೊರತುಪಡಿಸಿದರೆ ಬೇರೆ ಯಾವುದೇ ದೊಡ್ಡ ಹಬ್ಬ ಅಥವಾ ಸರ್ಕಾರಿ ದಿನಾಚರಣೆಗಳಿಲ್ಲ. ಸಾಧಾರಣವಾಗಿ ಮಾರ್ಚ್​ ತಿಂಗಳಲ್ಲಿ ಎಲ್ಲಾ ವಹಿವಾಟುದಾರರಿಗೂ ತುಸು ಹೆಚ್ಚೇ ಒತ್ತಡವಿದ್ದು, ಬ್ಯಾಂಕ್​ಗೆ ಯಾವ ಸಂದರ್ಭದಲ್ಲಿ ಹೋಗಬೇಕಾಗಿ ಬರಬಹುದು ಎಂದು ಹೇಳಲಾಗುವುದಿಲ್ಲ.

Bank Holidays in March 2021: ಮಾರ್ಚ್​ ತಿಂಗಳಲ್ಲಿ ಬ್ಯಾಂಕ್​ಗೆ ಎಷ್ಟೆಲ್ಲಾ ದಿನ ರಜೆ ಇದೆ ಎಂಬ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
Skanda
| Updated By: Digi Tech Desk

Updated on:Feb 28, 2021 | 4:34 PM

ಜನಸಾಮಾನ್ಯರಿಗೆ ಹಬ್ಬ ಹರಿದಿನಗಳನ್ನು ತಿಳಿಸುವ ಕ್ಯಾಲೆಂಡರ್​ ಎಷ್ಟು ಮುಖ್ಯವೋ, ಬ್ಯಾಂಕ್​ ರಜೆಗಳ ಪಟ್ಟಿಯೂ ಅಷ್ಟೇ ಮುಖ್ಯ. ವ್ಯವಹಾರ ಕಾರಣಗಳಿಗಾಗಿ ತುರ್ತು ಸಂದರ್ಭದಲ್ಲಿ ಬ್ಯಾಂಕ್​ಗೆ ತೆರಳಿದಾಗ ಅಪ್ಪಿತಪ್ಪಿ ಅಂದು ಬ್ಯಾಂಕ್​ಗೆ ರಜೆಯಿದ್ದರೆ ಭಾರೀ ಕಷ್ಟವಾಗಿಬಿಡುತ್ತದೆ. ಹಾಗಾಗಿ, ಹೆಚ್ಚಿನವರು ಹೊಸ ತಿಂಗಳು ಹತ್ತಿರವಾಗುತ್ತಿದ್ದಂತೆಯೇ ಯಾವ್ಯಾವ ದಿನ ಬ್ಯಾಂಕ್​ಗಳಿಗೆ ರಜೆ ಎಂದು ತಿಳಿದುಕೊಳ್ಳಲು ಇಷ್ಟಪಡುತ್ತಾರೆ. ಸದ್ಯ ಫೆಬ್ರವರಿ ಮುಗಿದು ಮಾರ್ಚ್​ ತಿಂಗಳು ಶುರುವಾಗುತ್ತಿದೆ. ಈ ಬಾರಿ ಮಾರ್ಚ್​ನಲ್ಲಿ ಒಟ್ಟು 7 ರಜೆಗಳಿದ್ದು ಅದು ಯಾವ ಯಾವ ದಿನಾಂಕದಂದು ಎಂಬ ಪಟ್ಟಿ ಇಲ್ಲಿದೆ.

ಮಾರ್ಚ್​ನಲ್ಲಿ ಶಿವರಾತ್ರಿ ಹೊರತುಪಡಿಸಿದರೆ ಬೇರೆ ಯಾವುದೇ ದೊಡ್ಡ ಹಬ್ಬ ಅಥವಾ ಸರ್ಕಾರಿ ದಿನಾಚರಣೆಗಳಿಲ್ಲ. ಸಾಧಾರಣವಾಗಿ ಮಾರ್ಚ್​ ತಿಂಗಳಲ್ಲಿ ಎಲ್ಲಾ ವಹಿವಾಟುದಾರರಿಗೂ ತುಸು ಹೆಚ್ಚೇ ಒತ್ತಡವಿದ್ದು, ಬ್ಯಾಂಕ್​ಗೆ ಯಾವ ಸಂದರ್ಭದಲ್ಲಿ ಹೋಗಬೇಕಾಗಿ ಬರಬಹುದು ಎಂದು ಹೇಳಲಾಗುವುದಿಲ್ಲ.

2021ರ ಮಾರ್ಚ್​ ತಿಂಗಳ ರಜಾ ವಿವರ:

  • ಮಾರ್ಚ್​ 7: ಭಾನುವಾರ
  • ಮಾರ್ಚ್​ 11: ಶಿವರಾತ್ರಿ
  • ಮಾರ್ಚ್​ 13: ಎರಡನೇ ಶನಿವಾರ
  • ಮಾರ್ಚ್​ 14: ಭಾನುವಾರ
  • ಮಾರ್ಚ್​ 21: ಭಾನುವಾರ
  • ಮಾರ್ಚ್​ 27: ನಾಲ್ಕನೇ ಶನಿವಾರ
  • ಮಾರ್ಚ್​ 28: ಭಾನುವಾರ

ಹೀಗೆ ಒಟ್ಟು 7 ದಿನಗಳು ರಜೆ ಇದ್ದು, ಮಾರ್ಚ್​ 12ರ ಶುಕ್ರವಾರ ಒಂದು ರಜೆ ಹಾಕಿಕೊಂಡರೆ ಬ್ಯಾಂಕ್​ ಉದ್ಯೋಗಿಗಳಿಗೆ ಸತತ ನಾಲ್ಕು ದಿನಗಳ ರಜೆ ಸಿಗಲಿದೆ. ಈ ಕಾರಣಗಳಿಂದ ಬ್ಯಾಂಕ್​ನಲ್ಲಿ ಮುಖ್ಯ ಕೆಲಸವೇನಾದರೂ ಇದ್ದರೆ ಮೊದಲೇ ಯೋಚಿಸಿ ತುಸು ಮುಂಚಿತವಾಗಿ ಮುಗಿಸಿಕೊಳ್ಳುವುದೇ ಒಳಿತು.

ಇದನ್ನೂ ಓದಿ: ಮತ್ತೊಂದು ಕ್ರಾಂತಿಗೆ ಸಿದ್ಧವಾಯ್ತು ಜಿಯೋ, ಕೇವಲ ₹1,999ಕ್ಕೆ ಎರಡು ವರ್ಷಗಳ ತನಕ ಅನಿಯಮಿತ ಸೌಲಭ್ಯ

ಸೋಷಿಯಲ್ ಮೀಡಿಯಾ, ಒಟಿಟಿ, ಡಿಜಿಟಲ್ ಕಂಟೆಂಟ್ ನಿಯಂತ್ರಣಕ್ಕೆ ಕೇಂದ್ರದಿಂದ ಹೊಸ ನಿಯಮ: ನೀವು ತಿಳಿಯಬೇಕಾದ 10 ಅಂಶಗಳು

Published On - 2:42 pm, Sat, 27 February 21

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ