AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holidays in March 2021: ಮಾರ್ಚ್​ ತಿಂಗಳಲ್ಲಿ ಬ್ಯಾಂಕ್​ಗೆ ಎಷ್ಟೆಲ್ಲಾ ದಿನ ರಜೆ ಇದೆ ಎಂಬ ಮಾಹಿತಿ ಇಲ್ಲಿದೆ

Karnataka Bank Holidays in March 2021: ಮಾರ್ಚ್​ನಲ್ಲಿ ಶಿವರಾತ್ರಿ ಹೊರತುಪಡಿಸಿದರೆ ಬೇರೆ ಯಾವುದೇ ದೊಡ್ಡ ಹಬ್ಬ ಅಥವಾ ಸರ್ಕಾರಿ ದಿನಾಚರಣೆಗಳಿಲ್ಲ. ಸಾಧಾರಣವಾಗಿ ಮಾರ್ಚ್​ ತಿಂಗಳಲ್ಲಿ ಎಲ್ಲಾ ವಹಿವಾಟುದಾರರಿಗೂ ತುಸು ಹೆಚ್ಚೇ ಒತ್ತಡವಿದ್ದು, ಬ್ಯಾಂಕ್​ಗೆ ಯಾವ ಸಂದರ್ಭದಲ್ಲಿ ಹೋಗಬೇಕಾಗಿ ಬರಬಹುದು ಎಂದು ಹೇಳಲಾಗುವುದಿಲ್ಲ.

Bank Holidays in March 2021: ಮಾರ್ಚ್​ ತಿಂಗಳಲ್ಲಿ ಬ್ಯಾಂಕ್​ಗೆ ಎಷ್ಟೆಲ್ಲಾ ದಿನ ರಜೆ ಇದೆ ಎಂಬ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Skanda
| Edited By: |

Updated on:Feb 28, 2021 | 4:34 PM

Share

ಜನಸಾಮಾನ್ಯರಿಗೆ ಹಬ್ಬ ಹರಿದಿನಗಳನ್ನು ತಿಳಿಸುವ ಕ್ಯಾಲೆಂಡರ್​ ಎಷ್ಟು ಮುಖ್ಯವೋ, ಬ್ಯಾಂಕ್​ ರಜೆಗಳ ಪಟ್ಟಿಯೂ ಅಷ್ಟೇ ಮುಖ್ಯ. ವ್ಯವಹಾರ ಕಾರಣಗಳಿಗಾಗಿ ತುರ್ತು ಸಂದರ್ಭದಲ್ಲಿ ಬ್ಯಾಂಕ್​ಗೆ ತೆರಳಿದಾಗ ಅಪ್ಪಿತಪ್ಪಿ ಅಂದು ಬ್ಯಾಂಕ್​ಗೆ ರಜೆಯಿದ್ದರೆ ಭಾರೀ ಕಷ್ಟವಾಗಿಬಿಡುತ್ತದೆ. ಹಾಗಾಗಿ, ಹೆಚ್ಚಿನವರು ಹೊಸ ತಿಂಗಳು ಹತ್ತಿರವಾಗುತ್ತಿದ್ದಂತೆಯೇ ಯಾವ್ಯಾವ ದಿನ ಬ್ಯಾಂಕ್​ಗಳಿಗೆ ರಜೆ ಎಂದು ತಿಳಿದುಕೊಳ್ಳಲು ಇಷ್ಟಪಡುತ್ತಾರೆ. ಸದ್ಯ ಫೆಬ್ರವರಿ ಮುಗಿದು ಮಾರ್ಚ್​ ತಿಂಗಳು ಶುರುವಾಗುತ್ತಿದೆ. ಈ ಬಾರಿ ಮಾರ್ಚ್​ನಲ್ಲಿ ಒಟ್ಟು 7 ರಜೆಗಳಿದ್ದು ಅದು ಯಾವ ಯಾವ ದಿನಾಂಕದಂದು ಎಂಬ ಪಟ್ಟಿ ಇಲ್ಲಿದೆ.

ಮಾರ್ಚ್​ನಲ್ಲಿ ಶಿವರಾತ್ರಿ ಹೊರತುಪಡಿಸಿದರೆ ಬೇರೆ ಯಾವುದೇ ದೊಡ್ಡ ಹಬ್ಬ ಅಥವಾ ಸರ್ಕಾರಿ ದಿನಾಚರಣೆಗಳಿಲ್ಲ. ಸಾಧಾರಣವಾಗಿ ಮಾರ್ಚ್​ ತಿಂಗಳಲ್ಲಿ ಎಲ್ಲಾ ವಹಿವಾಟುದಾರರಿಗೂ ತುಸು ಹೆಚ್ಚೇ ಒತ್ತಡವಿದ್ದು, ಬ್ಯಾಂಕ್​ಗೆ ಯಾವ ಸಂದರ್ಭದಲ್ಲಿ ಹೋಗಬೇಕಾಗಿ ಬರಬಹುದು ಎಂದು ಹೇಳಲಾಗುವುದಿಲ್ಲ.

2021ರ ಮಾರ್ಚ್​ ತಿಂಗಳ ರಜಾ ವಿವರ:

  • ಮಾರ್ಚ್​ 7: ಭಾನುವಾರ
  • ಮಾರ್ಚ್​ 11: ಶಿವರಾತ್ರಿ
  • ಮಾರ್ಚ್​ 13: ಎರಡನೇ ಶನಿವಾರ
  • ಮಾರ್ಚ್​ 14: ಭಾನುವಾರ
  • ಮಾರ್ಚ್​ 21: ಭಾನುವಾರ
  • ಮಾರ್ಚ್​ 27: ನಾಲ್ಕನೇ ಶನಿವಾರ
  • ಮಾರ್ಚ್​ 28: ಭಾನುವಾರ

ಹೀಗೆ ಒಟ್ಟು 7 ದಿನಗಳು ರಜೆ ಇದ್ದು, ಮಾರ್ಚ್​ 12ರ ಶುಕ್ರವಾರ ಒಂದು ರಜೆ ಹಾಕಿಕೊಂಡರೆ ಬ್ಯಾಂಕ್​ ಉದ್ಯೋಗಿಗಳಿಗೆ ಸತತ ನಾಲ್ಕು ದಿನಗಳ ರಜೆ ಸಿಗಲಿದೆ. ಈ ಕಾರಣಗಳಿಂದ ಬ್ಯಾಂಕ್​ನಲ್ಲಿ ಮುಖ್ಯ ಕೆಲಸವೇನಾದರೂ ಇದ್ದರೆ ಮೊದಲೇ ಯೋಚಿಸಿ ತುಸು ಮುಂಚಿತವಾಗಿ ಮುಗಿಸಿಕೊಳ್ಳುವುದೇ ಒಳಿತು.

ಇದನ್ನೂ ಓದಿ: ಮತ್ತೊಂದು ಕ್ರಾಂತಿಗೆ ಸಿದ್ಧವಾಯ್ತು ಜಿಯೋ, ಕೇವಲ ₹1,999ಕ್ಕೆ ಎರಡು ವರ್ಷಗಳ ತನಕ ಅನಿಯಮಿತ ಸೌಲಭ್ಯ

ಸೋಷಿಯಲ್ ಮೀಡಿಯಾ, ಒಟಿಟಿ, ಡಿಜಿಟಲ್ ಕಂಟೆಂಟ್ ನಿಯಂತ್ರಣಕ್ಕೆ ಕೇಂದ್ರದಿಂದ ಹೊಸ ನಿಯಮ: ನೀವು ತಿಳಿಯಬೇಕಾದ 10 ಅಂಶಗಳು

Published On - 2:42 pm, Sat, 27 February 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು