AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮಧ್ಯೆಯೂ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ; ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಗೋಪಾಲಯ್ಯ

ಬಿ.ಎಸ್​ ಯಡಿಯೂರಪ್ಪನವರ ಕುರಿತು ಮಾತನಾಡುವವರ ಬಗ್ಗೆ ಹೈಕಮಾಂಡ್ ಗಮನಿಸುತ್ತಿದೆ. ಈ ಕುರಿತಾಗಿ ಬಸನಗೌಡ ಪಾಟೀಲ್ ಯತ್ನಾಳ್​ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

ಕೊವಿಡ್ ಮಧ್ಯೆಯೂ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ; ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಗೋಪಾಲಯ್ಯ
ಗುದ್ದಲಿ ಪೂಜೆ
shruti hegde
| Edited By: ಸಾಧು ಶ್ರೀನಾಥ್​|

Updated on: Apr 09, 2021 | 2:48 PM

Share

ಹಾಸನ: ಬಿ.ಎಸ್​ ಯಡಿಯೂರಪ್ಪನವರ ಕುರಿತು ಮಾತನಾಡುವವರ ಬಗ್ಗೆ ಹೈಕಮಾಂಡ್ ಗಮನಿಸುತ್ತಿದೆ. ಈ ಕುರಿತಾಗಿ ಬಸನಗೌಡ ಪಾಟೀಲ್ ಯತ್ನಾಳ್​ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯ ರಾಜಕಾರಣಿ ಸಭೆ ನಡೆಯಲಿರುವ ವೇದಿಕೆ ನಿರ್ಮಾಣದ ಗುದ್ದಲಿ ಪೂಜೆ ಸಲ್ಲಿಸಿ, ಅಬಕಾರಿ ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ. 

ಏಪ್ರಿಲ್​ 18- 19ರಂದು ಎರಡು ದಿನಗಳ ಕಾಲ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಸಭೆ ನಡೆಯುವ ಸ್ಥಳದ ವೇದಿಕೆ ನಿರ್ಮಾಣಕ್ಕೆ ಇಂದು ಸಚಿವ ಗೋಪಾಲಯ್ಯ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಗೋಪಾಲಯ್ಯ, ಇದೇ ಏಪ್ರಿಲ್ ತಿಂಗಳ18-19 ನೇ ತಾರೀಕಿನಂದು ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ವರಿಷ್ಠರು ತೀರ್ಮಾನ ನಡೆಸಿದ್ದಾರೆ.

ರಾಜ್ಯದ ಆಗು ಹೋಗುಗಳ ಹಾಗೂ ಪಕ್ಷ ಸಂಘಟನೆ ಬಗ್ಗೆ ಎರಡು ದಿನ ಚರ್ಚೆ ನಡೆಯಲಿದೆ. ರಾಜ್ಯದ 338 ಕಾರ್ಯಕಾರಿಣಿ ಸದಸ್ಯರು, ರಾಜ್ಯ ನಾಯಕರು ಹಾಗೂ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಎಲ್ಲರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಕೊವಿಡ್ ಮಧ್ಯೆಯೂ ಸಭೆ ನಡೆಯಬೇಕಿರುವ ಹಿನ್ನೆಲೆಯಲ್ಲಿ ದೊಡ್ಡ ಪ್ರದೇಶದಲ್ಲಿ ಸಭೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆ ನಡೆಸಲು ತಯಾರಿ ನಡೆದಿದೆ. ಸಂಪೂರ್ಣ ಅವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಈ ಬಗ್ಗೆ ಅನುಮಾನ ಬೇಡ ಜಗತ್ತಿನಲ್ಲೇ ಅತಿ ದೊಡ್ಡ ಪಕ್ಷ ಬಿಜೆಪಿ ಎಂದು ಮಾತನಾಡಿದ್ದಾರೆ.

ಇದನ್ನೂ ಓದಿ:

ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿಗಳನ್ನು ನೇಮಿಸಲಾಗುವುದು -ಅಬಕಾರಿ ಸಚಿವ ಗೋಪಾಲಯ್ಯ

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ವತಃ ಆಸ್ಪತ್ರೆಗೆ ದಾಖಲಿಸಿದ ಸಚಿವ ಗೋಪಾಲಯ್ಯ

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ