AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮಧ್ಯೆಯೂ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ; ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಗೋಪಾಲಯ್ಯ

ಬಿ.ಎಸ್​ ಯಡಿಯೂರಪ್ಪನವರ ಕುರಿತು ಮಾತನಾಡುವವರ ಬಗ್ಗೆ ಹೈಕಮಾಂಡ್ ಗಮನಿಸುತ್ತಿದೆ. ಈ ಕುರಿತಾಗಿ ಬಸನಗೌಡ ಪಾಟೀಲ್ ಯತ್ನಾಳ್​ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

ಕೊವಿಡ್ ಮಧ್ಯೆಯೂ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ; ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಗೋಪಾಲಯ್ಯ
ಗುದ್ದಲಿ ಪೂಜೆ
shruti hegde
| Edited By: |

Updated on: Apr 09, 2021 | 2:48 PM

Share

ಹಾಸನ: ಬಿ.ಎಸ್​ ಯಡಿಯೂರಪ್ಪನವರ ಕುರಿತು ಮಾತನಾಡುವವರ ಬಗ್ಗೆ ಹೈಕಮಾಂಡ್ ಗಮನಿಸುತ್ತಿದೆ. ಈ ಕುರಿತಾಗಿ ಬಸನಗೌಡ ಪಾಟೀಲ್ ಯತ್ನಾಳ್​ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯ ರಾಜಕಾರಣಿ ಸಭೆ ನಡೆಯಲಿರುವ ವೇದಿಕೆ ನಿರ್ಮಾಣದ ಗುದ್ದಲಿ ಪೂಜೆ ಸಲ್ಲಿಸಿ, ಅಬಕಾರಿ ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ. 

ಏಪ್ರಿಲ್​ 18- 19ರಂದು ಎರಡು ದಿನಗಳ ಕಾಲ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಸಭೆ ನಡೆಯುವ ಸ್ಥಳದ ವೇದಿಕೆ ನಿರ್ಮಾಣಕ್ಕೆ ಇಂದು ಸಚಿವ ಗೋಪಾಲಯ್ಯ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಗೋಪಾಲಯ್ಯ, ಇದೇ ಏಪ್ರಿಲ್ ತಿಂಗಳ18-19 ನೇ ತಾರೀಕಿನಂದು ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ವರಿಷ್ಠರು ತೀರ್ಮಾನ ನಡೆಸಿದ್ದಾರೆ.

ರಾಜ್ಯದ ಆಗು ಹೋಗುಗಳ ಹಾಗೂ ಪಕ್ಷ ಸಂಘಟನೆ ಬಗ್ಗೆ ಎರಡು ದಿನ ಚರ್ಚೆ ನಡೆಯಲಿದೆ. ರಾಜ್ಯದ 338 ಕಾರ್ಯಕಾರಿಣಿ ಸದಸ್ಯರು, ರಾಜ್ಯ ನಾಯಕರು ಹಾಗೂ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಎಲ್ಲರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಕೊವಿಡ್ ಮಧ್ಯೆಯೂ ಸಭೆ ನಡೆಯಬೇಕಿರುವ ಹಿನ್ನೆಲೆಯಲ್ಲಿ ದೊಡ್ಡ ಪ್ರದೇಶದಲ್ಲಿ ಸಭೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆ ನಡೆಸಲು ತಯಾರಿ ನಡೆದಿದೆ. ಸಂಪೂರ್ಣ ಅವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಈ ಬಗ್ಗೆ ಅನುಮಾನ ಬೇಡ ಜಗತ್ತಿನಲ್ಲೇ ಅತಿ ದೊಡ್ಡ ಪಕ್ಷ ಬಿಜೆಪಿ ಎಂದು ಮಾತನಾಡಿದ್ದಾರೆ.

ಇದನ್ನೂ ಓದಿ:

ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿಗಳನ್ನು ನೇಮಿಸಲಾಗುವುದು -ಅಬಕಾರಿ ಸಚಿವ ಗೋಪಾಲಯ್ಯ

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ವತಃ ಆಸ್ಪತ್ರೆಗೆ ದಾಖಲಿಸಿದ ಸಚಿವ ಗೋಪಾಲಯ್ಯ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್