AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮಧ್ಯೆಯೂ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ; ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಗೋಪಾಲಯ್ಯ

ಬಿ.ಎಸ್​ ಯಡಿಯೂರಪ್ಪನವರ ಕುರಿತು ಮಾತನಾಡುವವರ ಬಗ್ಗೆ ಹೈಕಮಾಂಡ್ ಗಮನಿಸುತ್ತಿದೆ. ಈ ಕುರಿತಾಗಿ ಬಸನಗೌಡ ಪಾಟೀಲ್ ಯತ್ನಾಳ್​ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

ಕೊವಿಡ್ ಮಧ್ಯೆಯೂ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ; ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಗೋಪಾಲಯ್ಯ
ಗುದ್ದಲಿ ಪೂಜೆ
shruti hegde
| Updated By: ಸಾಧು ಶ್ರೀನಾಥ್​|

Updated on: Apr 09, 2021 | 2:48 PM

Share

ಹಾಸನ: ಬಿ.ಎಸ್​ ಯಡಿಯೂರಪ್ಪನವರ ಕುರಿತು ಮಾತನಾಡುವವರ ಬಗ್ಗೆ ಹೈಕಮಾಂಡ್ ಗಮನಿಸುತ್ತಿದೆ. ಈ ಕುರಿತಾಗಿ ಬಸನಗೌಡ ಪಾಟೀಲ್ ಯತ್ನಾಳ್​ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯ ರಾಜಕಾರಣಿ ಸಭೆ ನಡೆಯಲಿರುವ ವೇದಿಕೆ ನಿರ್ಮಾಣದ ಗುದ್ದಲಿ ಪೂಜೆ ಸಲ್ಲಿಸಿ, ಅಬಕಾರಿ ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ. 

ಏಪ್ರಿಲ್​ 18- 19ರಂದು ಎರಡು ದಿನಗಳ ಕಾಲ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಸಭೆ ನಡೆಯುವ ಸ್ಥಳದ ವೇದಿಕೆ ನಿರ್ಮಾಣಕ್ಕೆ ಇಂದು ಸಚಿವ ಗೋಪಾಲಯ್ಯ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಗೋಪಾಲಯ್ಯ, ಇದೇ ಏಪ್ರಿಲ್ ತಿಂಗಳ18-19 ನೇ ತಾರೀಕಿನಂದು ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ವರಿಷ್ಠರು ತೀರ್ಮಾನ ನಡೆಸಿದ್ದಾರೆ.

ರಾಜ್ಯದ ಆಗು ಹೋಗುಗಳ ಹಾಗೂ ಪಕ್ಷ ಸಂಘಟನೆ ಬಗ್ಗೆ ಎರಡು ದಿನ ಚರ್ಚೆ ನಡೆಯಲಿದೆ. ರಾಜ್ಯದ 338 ಕಾರ್ಯಕಾರಿಣಿ ಸದಸ್ಯರು, ರಾಜ್ಯ ನಾಯಕರು ಹಾಗೂ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಎಲ್ಲರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಕೊವಿಡ್ ಮಧ್ಯೆಯೂ ಸಭೆ ನಡೆಯಬೇಕಿರುವ ಹಿನ್ನೆಲೆಯಲ್ಲಿ ದೊಡ್ಡ ಪ್ರದೇಶದಲ್ಲಿ ಸಭೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆ ನಡೆಸಲು ತಯಾರಿ ನಡೆದಿದೆ. ಸಂಪೂರ್ಣ ಅವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಈ ಬಗ್ಗೆ ಅನುಮಾನ ಬೇಡ ಜಗತ್ತಿನಲ್ಲೇ ಅತಿ ದೊಡ್ಡ ಪಕ್ಷ ಬಿಜೆಪಿ ಎಂದು ಮಾತನಾಡಿದ್ದಾರೆ.

ಇದನ್ನೂ ಓದಿ:

ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿಗಳನ್ನು ನೇಮಿಸಲಾಗುವುದು -ಅಬಕಾರಿ ಸಚಿವ ಗೋಪಾಲಯ್ಯ

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ವತಃ ಆಸ್ಪತ್ರೆಗೆ ದಾಖಲಿಸಿದ ಸಚಿವ ಗೋಪಾಲಯ್ಯ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?