AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಬಿಎಸ್​ವೈ ಭರ್ಜರಿ ಕೊಡುಗೆ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಏಳನೇ ಬಜೆಟ್ ಮಂಡಿಸುತ್ತಿದ್ದಾರೆ. 2020-2021 ನೇ ಸಾಲಿನ ಬಹುನಿರೀಕ್ಷಿತ ಬಜೆಟ್​ನಲ್ಲಿ ಬಿಎಸ್​ವೈ ನಗರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ನವನಗರೋತ್ಥಾನ ಯೋನೆಗೆ 8,344 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಬೆಂಗಳೂರು ಸುತ್ತಲಿನ 110 ಹಳ್ಳಿಗಳಿಗೆ 2 ವರ್ಷಕ್ಕೆ 1000 ಕೋಟಿ ಮೀಸಲು ಇಡಲಾಗಿದೆ. ಸಿಲ್ಕ್​ಬೋರ್ಡ್​ ಜಂಕ್ಷನ್​ನಿಂದ ಏರ್​ಪೋರ್ಟ್​ವರೆಗೆ ಒಟ್ಟು 56 ಕಿ.ಮೀ ಔಟರ್​ರಿಂಗ್​ರೋಡ್​ಗೆ 14,500 ಕೋಟಿ ರೂಪಾಯಿ ಮೀಸಲಿಡಲಾಗುವುದು. ಬಿಎಂಟಿಸಿ 1500 ಬಸ್​ಗಳ ಖರೀದಿಗೆ ಒಟ್ಟು 600ಕೋಟಿ ರೂಪಾಯಿ ಮೀಸಲಿಡಲಾಗುತ್ತೆ. ಮೆಟ್ರೋ ನಿಲ್ದಾಣ […]

ಬೆಂಗಳೂರಿಗೆ ಬಿಎಸ್​ವೈ ಭರ್ಜರಿ ಕೊಡುಗೆ
ಸಾಧು ಶ್ರೀನಾಥ್​
|

Updated on:Mar 05, 2020 | 12:32 PM

Share

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಏಳನೇ ಬಜೆಟ್ ಮಂಡಿಸುತ್ತಿದ್ದಾರೆ. 2020-2021 ನೇ ಸಾಲಿನ ಬಹುನಿರೀಕ್ಷಿತ ಬಜೆಟ್​ನಲ್ಲಿ ಬಿಎಸ್​ವೈ ನಗರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ನವನಗರೋತ್ಥಾನ ಯೋನೆಗೆ 8,344 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.

ಬೆಂಗಳೂರು ಸುತ್ತಲಿನ 110 ಹಳ್ಳಿಗಳಿಗೆ 2 ವರ್ಷಕ್ಕೆ 1000 ಕೋಟಿ ಮೀಸಲು ಇಡಲಾಗಿದೆ. ಸಿಲ್ಕ್​ಬೋರ್ಡ್​ ಜಂಕ್ಷನ್​ನಿಂದ ಏರ್​ಪೋರ್ಟ್​ವರೆಗೆ ಒಟ್ಟು 56 ಕಿ.ಮೀ ಔಟರ್​ರಿಂಗ್​ರೋಡ್​ಗೆ 14,500 ಕೋಟಿ ರೂಪಾಯಿ ಮೀಸಲಿಡಲಾಗುವುದು.

ಬಿಎಂಟಿಸಿ 1500 ಬಸ್​ಗಳ ಖರೀದಿಗೆ ಒಟ್ಟು 600ಕೋಟಿ ರೂಪಾಯಿ ಮೀಸಲಿಡಲಾಗುತ್ತೆ. ಮೆಟ್ರೋ ನಿಲ್ದಾಣ ಬಸ್ ನಿಲ್ದಾಣ ಸಂಪರ್ಕಕ್ಕೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಗೆ ಮುಂದಾಗಿದೆ. ಟ್ರಾಫಿಕ್ ಕಡಿಮೆ ಮಾಡಲು ಇಂಟಿಗ್ರೇಟೆಡ್ ಮಲ್ಟಿ ಮಾಡೆಲ್ ಟ್ರಾನ್ಸ್​ಪೋರ್ಟ್​​ಹಬ್​ಗೆ ಚಾಲನೆ ನೀಡಲಾಗುವುದು.

ರಸ್ತೆ ಅಪಘಾತ ತಡೆಗೆ 200 ಕೋಟಿ ರೂಪಾಯಿ ಮೀಸಲಿಡಲಾಗುವುದು. ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಅಂಡರ್​ಗ್ರೌಂಡ್ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು. ಹೀಗೆ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8772 ಕೋಟಿ ರೂಪಾಯಿ ಮೀಸಲಿಡಲು ಸರ್ಕಾರ ಈ ಬಾರಿಯ ಬಜೆಟ್​ನಲ್ಲಿ ಮಂಡಿಸಿದೆ.

4 ದಿಕ್ಕಿನಲ್ಲೂ ತಲೆ ಎತ್ತಲಿವೆ ಕಲಾ ಕ್ಷೇತ್ರಗಳು: ಜನವರಿ 1ರಂದು ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಚರಿಸಲು ಒತ್ತು ನೀಡಲಾಗಿದೆ. ಬೆಂಗಳೂರು ನಗರದ 4 ದಿಕ್ಕಿನಲ್ಲಿ ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ ಕಲಾ ಕ್ಷೇತ್ರಗಳ ನಿರ್ಮಾಣ ಮಾಡಲು 60 ಕೋಟಿ ರೂಪಾಯಿ ಮೀಸಲಿಡಲಾಗುವುದು.

KIALನಲ್ಲಿ ಕೆಂಪೇಗೌಡರ 100 ಅಡಿ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ನಿರ್ಮಾಣಕ್ಕೆ 60 ಕೋಟಿ ರೂಪಾಯಿ ಮೀಸಲಿಡಲಾಗುವುದು. ಸಂತ ಶಿಶುನಾಳ ಶರೀಫರ ಸಮಾಧಿ ಅಭಿವೃದ್ಧಿ ಮಾಡಲಾಗುವುದು. ಸಮಾಧಿ ಅಭಿವೃದ್ಧಿಗಾಗಿ 5 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಬಜೆಟ್​ನಲ್ಲಿ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾಗಿರುವ ಬಿಎಸ್​ವೈ ತಿಳಿಸಿದ್ದಾರೆ.

ಇನ್ನು ಚಿತ್ರದುರ್ಗದಲ್ಲಿರುವ ಎಸ್​.ನಿಜಲಿಂಗಪ್ಪರ ಮನೆ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಎಸ್​.ಎಲ್​.ಭೈರಪ್ಪನವರ ಹುಟ್ಟೂರು ಸಂತೆಶಿವಾರ ಗ್ರಾಮದ ಅಭಿವೃದ್ಧಿಗೆ 5 ಕೋಟಿ ರೂಪಾಯಿ ನೀಡಲಾಗುವುದು. ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿ ಸ್ಥಾಪನೆ ಮಾಡಲು 50 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು. ಚಿತ್ರಸಂತೆಗೆ ಸರ್ಕಾರದಿಂದ 1 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಮಂಡಿಸಿದ್ದಾರೆ.

Published On - 12:24 pm, Thu, 5 March 20

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ