ಕೊನೆಗೂ ಆತಂಕ ನಿಜವಾಯಿತು! ಹೊಸಕೋಟೆಯಲ್ಲಿ ಎಂಟಿಬಿ​ಗೆ ತೀವ್ರ ಮುಖಭಂಗ

ಬೆಂಗಳೂರು ಗ್ರಾಮಾಂತರ: ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್ ಮತ್ತು ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ಗೆ ಭಾರಿ ಮುಖಭಂಗವಾಗಿದೆ. ಮತ ಎಣಿಕೆಯಲ್ಲಿ ಎಂಟಿಬಿ ತೀವ್ರ ಹಿನ್ನಡೆ ಸಾಧಿಸಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ 11,484 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಒಟ್ಟು 81,667 ಮತಗಳನ್ನು ಪಡೆದಿದ್ರೆ, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ 70,183 ಮತಗಳನ್ನಷ್ಟೇ ಗಳಿಸಲು ಸಾಧ್ಯವಾಗಿದೆ. 3ನೇ ಸ್ಥಾನ ಪಡೆದ ಕಾಂಗ್ರೆಸ್ […]

ಕೊನೆಗೂ ಆತಂಕ ನಿಜವಾಯಿತು! ಹೊಸಕೋಟೆಯಲ್ಲಿ ಎಂಟಿಬಿ​ಗೆ ತೀವ್ರ ಮುಖಭಂಗ
ಎಂಟಿಬಿ ನಾಗರಾಜ್​
ಸಾಧು ಶ್ರೀನಾಥ್​

Updated on: Dec 09, 2019 | 3:18 PM

ಬೆಂಗಳೂರು ಗ್ರಾಮಾಂತರ: ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್ ಮತ್ತು ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ಗೆ ಭಾರಿ ಮುಖಭಂಗವಾಗಿದೆ. ಮತ ಎಣಿಕೆಯಲ್ಲಿ ಎಂಟಿಬಿ ತೀವ್ರ ಹಿನ್ನಡೆ ಸಾಧಿಸಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ 11,484 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಒಟ್ಟು 81,667 ಮತಗಳನ್ನು ಪಡೆದಿದ್ರೆ, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ 70,183 ಮತಗಳನ್ನಷ್ಟೇ ಗಳಿಸಲು ಸಾಧ್ಯವಾಗಿದೆ. 3ನೇ ಸ್ಥಾನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ 41,443 ಮತಗಳನ್ನು ಪಡೆದಿದ್ದಾರೆ. 757 ನೋಟಾ ಮತಗಳು ಬಿದ್ದಿವೆ.

Published On - 11:48 am, Mon, 9 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us