ಬೈ ಎಲೆಕ್ಷನ್ ರಿಸಲ್ಟ್: ನಿಜವಾಯ್ತು ಟಿವಿ9 ಆಂತರಿಕ ಸಮೀಕ್ಷೆ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಟಿವಿ9 ಆಂತರಿಕ ಸರ್ವೆ ವರದಿಯಂತೆ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 15 ಕ್ಷೇತ್ರಗಳಲ್ಲಿ ನಿಖರವಾಗಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಕೇಕೆ ಹಾಕಿದೆ. ಹುಣಸೂರು, ಶಿವಾಜಿನಗರ ಮತ್ತು ಹೊಸಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ಟಿವಿ9 ಆಂತರಿಕ ಸರ್ವೆಯಲ್ಲಿ ಉಲ್ಲೇಖಿಸಲಾಗಿತ್ತು. ಅದರಂತೆ ಬಿಜೆಪಿ ಈ ಮೂರು ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ನಂಬರ್ 1 ಕ್ಷೇತ್ರವಾಗಿ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯನ್ನು ಪರಿಗಣಿಸಲಾಗಿತ್ತು. 15 ಕ್ಷೇತ್ರಗಳ ಪೈಕಿ ಯಲ್ಲಾಪುರ ಕ್ಷೇತ್ರದಲ್ಲೇ ಬಿಜೆಪಿ ಮೊದಲ […]

ಬೈ ಎಲೆಕ್ಷನ್ ರಿಸಲ್ಟ್: ನಿಜವಾಯ್ತು ಟಿವಿ9 ಆಂತರಿಕ ಸಮೀಕ್ಷೆ
ಸಾಂಕೇತಿಕ ಚಿತ್ರ
ಸಾಧು ಶ್ರೀನಾಥ್​

Updated on: Dec 10, 2019 | 2:52 PM

ಬೆಂಗಳೂರು: ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಟಿವಿ9 ಆಂತರಿಕ ಸರ್ವೆ ವರದಿಯಂತೆ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 15 ಕ್ಷೇತ್ರಗಳಲ್ಲಿ ನಿಖರವಾಗಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಕೇಕೆ ಹಾಕಿದೆ. ಹುಣಸೂರು, ಶಿವಾಜಿನಗರ ಮತ್ತು ಹೊಸಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ಟಿವಿ9 ಆಂತರಿಕ ಸರ್ವೆಯಲ್ಲಿ ಉಲ್ಲೇಖಿಸಲಾಗಿತ್ತು. ಅದರಂತೆ ಬಿಜೆಪಿ ಈ ಮೂರು ಕ್ಷೇತ್ರಗಳನ್ನು ಕಳೆದುಕೊಂಡಿದೆ.

ಇನ್ನು ನಂಬರ್ 1 ಕ್ಷೇತ್ರವಾಗಿ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯನ್ನು ಪರಿಗಣಿಸಲಾಗಿತ್ತು. 15 ಕ್ಷೇತ್ರಗಳ ಪೈಕಿ ಯಲ್ಲಾಪುರ ಕ್ಷೇತ್ರದಲ್ಲೇ ಬಿಜೆಪಿ ಮೊದಲ ಗೆಲುವು ಸಾಧಿಸಿದೆ. ಡಿಸೆಂಬರ್ 3ರಂದು ಸಂಜೆ ಬಹಿರಂಗ ಪ್ರಚಾರದ ಕೊನೆಯ ಅವಧಿಯಲ್ಲಿ ಟಿವಿ9 ಕನ್ನಡ  ವರದಿ ಮಾಡಿತ್ತು.

Published On - 5:14 pm, Mon, 9 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us