AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾ ದೂರವಾಣಿ ಕರೆ: ಲಿಂಗಾಯತ ಮೀಸಲಾತಿ ಮುಂದೂಡಿದ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಸಜ್ಜಾದ CM

ಲಿಂಗಾಯತ ಸಮುದಾಯದಲ್ಲಿ ಸೂಪರ್ ಹೀರೊ ಆಗಿ ಮಿಂಚಲು ಹೈ ಸ್ಪೀಡ್ ನಲ್ಲಿ ಹೊರಟಿದ್ದ ಸಿಎಂ ಯಡಿಯೂರಪ್ಪಗೆ ಬೆಳ್ಳಂ ಬೆಳಗ್ಗೆ ಕರೆ ಮಾಡಿದ ಅಮಿತ್ ಶಾ, ಸದ್ಯಕ್ಕೆ ಒಬಿಸಿ ವಿಷಯವನ್ನು ಕೈಬಿಡುವಂತೆ ಸೂಚನೆ ನೀಡಿದ್ರು ಎನ್ನಲಾಗಿದೆ.

ಶಾ ದೂರವಾಣಿ ಕರೆ: ಲಿಂಗಾಯತ ಮೀಸಲಾತಿ ಮುಂದೂಡಿದ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಸಜ್ಜಾದ CM
ಶಾ ದೂರವಾಣಿ ಕರೆ: ಲಿಂಗಾಯತ ಮೀಸಲಾತಿ ಮುಂದೂಡಿದ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಸಜ್ಜಾದ CM
ಡಾ. ಭಾಸ್ಕರ ಹೆಗಡೆ
|

Updated on: Nov 27, 2020 | 6:44 PM

Share

ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಎಂದು ಬಿಂಬಿಸಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ , ಇದಕ್ಕೆ ಇಂಬು ನೀಡಲು ಇತ್ತೀಚೆಗೆ ತರಾತುರಿಯಲ್ಲಿ ವೀರಶೈವ ಲಿಂಗಾಯತ ಸಮುದಾಯ ನಿಗಮ ರಚನೆ ಮಾಡಿದ್ರು. ಮಾತ್ರವಲ್ಲ, ನಿಗಮಕ್ಕೆ ಅಷ್ಟೇ ತರಾತುರಿಯಲ್ಲಿ 500 ಕೋಟಿ ರೂ. ಅನುದಾನವನ್ನೂ ತಕ್ಷಣವೇ ಮಂಜೂರು ಮಾಡಿದ್ರು.

ಇದಕ್ಕೆ ಒಪ್ಪಿಗೆ ಬೀಳುತ್ತಿದ್ದಂತೆ ಸಿಎಂ ಒಂದು ಹೆಜ್ಜೆ ಮುಂದೆ ಹೋಗಿ ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ಪ್ಲ್ಯಾನ್ ಸಹ ಮಾಡಿದ್ರು. ಅಷ್ಟೇ ವೇಗದಲ್ಲಿ ಇವತ್ತು ಶುಕ್ರವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯ ಅಜೆಂಡಾದಲ್ಲೂ ಈ ವಿಷಯವನ್ನು ಸೇರ್ಪಡೆ ಆಗುವಂತೆ ನೋಡಿಕೊಂಡ್ರು. ಜತೆಗೆ, ಇವತ್ತು ಸಂಪುಟ ಸಭೆಯ ನಂತರ ತಾವೇ ಪತ್ರಿಕಾಗೋಷ್ಠಿ ನಡೆಸಲೂ ಸಜ್ಜಾಗಿದ್ರು.

ಹೀಗೆ ಹೈ ಸ್ಪೀಡ್ ನಲ್ಲಿ ಹೊರಟಿದ್ದ ಸಿಎಂಗೆ ಬೆಳ್ಳಂ ಬೆಳಗ್ಗೆ ಕರೆ ಮಾಡಿದ ಅಮಿತ್ ಶಾ, ಸದ್ಯಕ್ಕೆ ಒಬಿಸಿ ವಿಷಯವನ್ನು ಕೈಬಿಡುವಂತೆ ಸೂಚನೆ ನೀಡಿದ್ರು ಎನ್ನಲಾಗಿದೆ.

ಹೀಗೆ ಲಿಂಗಾಯತ ಸಮುದಾಯದಲ್ಲಿ ಸೂಪರ್ ಹೀರೊ ಆಗಿ ಮಿಂಚಲು ಮುಂದಾಗಿದ್ದ ಯಡಿಯೂರಪ್ಪ, ಮುಂದೆ ಇದೇ ಕಾರಣಕ್ಕೆ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರೆ ಪಕ್ಷಕ್ಕೆ ಬಿಸಿ ತುಪ್ಪ ಆಗಬಹುದು ಎಂಬ ಲೆಕ್ಕಾಚಾರ ಹಾಕಿ ಒಬಿಸಿ ವಿಷಯವನ್ನು ಅಮಿತ್ ಶಾ ಡ್ರಾಪ್ ಮಾಡಿಸಿದ್ರು ಎನ್ನಲಾಗಿದೆ. ಅಂದಹಾಗೆ, ಹೈಕಮಾಂಡ್ ಗೆ ಸೈಡ್ ಹೊಡೆಯಲು ಯಡಿಯೂರಪ್ಪ ಮುಂದಾಗಿದ್ದೇ ಒಬಿಸಿ ವಿಷಯ ಇವತ್ತು ಸಂಪುಟ ಸಭೆಯಿಂದ ನೆನೆಗುದಿಗೆ ಬಿತ್ತು ಎಂದೂ ಬಿಜೆಪಿ ವಲಯದಲ್ಲಿ ವಿಶ್ಲೇಷಣೆ ಮಾಡಲಾಗ್ತಿದೆ.

ಅಮಿತ್ ಶಾ ಹಾಕಿದ ಸಡನ್ ಬ್ರೇಕ್ ನಿಂದ ಮುಗ್ಗರಿಸಿದ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ಳದ ಸಿಎಂ, ಪತ್ರಿಕಾಗೋಷ್ಠಿ ರದ್ದು ಮಾಡಿದ್ರು. ಸಂಪುಟ ಸಭೆಗೆ ಹೋಗುವ ಮುನ್ನವೇ, ಒಬಿಸಿ ವಿಷಯವಾಗಿ ಮಾತನಾಡಿ- ಈ ಬಗ್ಗೆ ದಿಲ್ಲಿ ನಾಯಕರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಅಂತ ತೇಪೆ ಹಾಕಿದ್ರು.

ಕಾನೂನು ಸಚಿವ ಮಾಧುಸ್ವಾಮಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಈ ಬಗ್ಗೆ ಇನ್ನಷ್ಟು ಅಧ್ಯಯನ ಮಾಡಬೇಕು ಎಂದು ಅಡ್ವೊಕೇಟ್ ಜನರಲ್ ಸಲಹೆ ನೀಡಿದ್ದಾರೆ. ಹೀಗಾಗಿ ಈ ವಿಷಯವನ್ನು ಮುಂದೆ ಹಾಕಿದ್ದೇನೆ ಎಂದು ತಿಪ್ಪೆ ಸಾರಿಸಿದ್ರು.
ಸಂಪುಟ ಸರ್ಜರಿ?

ಇದೇ ಸಂದರ್ಭ ಉಪಯೋಗಿಸಿಕೊಂಡು ಸಂಪುಟ ವಿಸ್ತರಣೆಗೆ ಯಡಿಯೂರಪ್ಪ ಮುಂದಾಗಿದ್ದಾರೆ.  ಮೀಸಲಾತಿ ವಿಷಯ ಚರ್ಚೆಗಾಗಿ ದೆಹಲಿಗೆ ಹೋಗಲಿರುವ ಯಡಿಯೂರಪ್ಪ, ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಂಪುಟಕ್ಕೆ ಸೇರುವವರ ಪಟ್ಟಿಗೆ ಅಂಕಿತ ಹಾಕಿಸಿಕೊಳ್ಳುವ ತಯಾರಿಯಲ್ಲಿದ್ದಾರೆ.  ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸಂಪುಟ ಸರ್ಜರಿಗೆ ಒಪ್ಪಿಗೆ ಕೊಡಿ ಎಂದು ಕೇಳಿದ್ದರೂ ಏನೂ ಪ್ರಯೋಜನ ಆಗಿರಲಿಲ್ಲ. ನಡ್ಡಾ ತಿರುಗಿ ಫೋನ್ ಮಾಡಿರಲಿಲ್ಲ.

ಹಾಗಾಗಿ ಸಿಟ್ಟಾಗಿದ್ದ ಯಡಿಯೂರಪ್ಪ ಮುಯ್ಯಿಗೆ ಮುಯ್ಯಿ ಎಂಬಂತೆ ತಮಗೆ ಬೇಕಾದವರಿಗೆ ವಿವಿಧ ನಿಗಮ/ಮಂಡಲಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು.  ಇದನ್ನು ನೋಡಿ ಹೈ ಕಮಾಂಡ್ ಸುಮ್ಮನೆ ಕುಳಿತುಕೊಳ್ಳುವಂತೆ ಆಯಿತು. ಅಷ್ಟೇ ಅಲ್ಲ, ಮೂರೋ ನಾಲ್ಕು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವ ವಿಚಾರದಲ್ಲಿದ್ದರು. ಯಾವಾಗ ಲಿಂಗಾಯತ ಮೀಸಲಾತಿ ವಿಚಾರ ಎತ್ತಿ ಸಂಪುಟದಲ್ಲಿಟ್ಟು ಅಂಗೀಕರಿಸಲು ಮುಂದಾದರೋ ಆಗ ಹೈ ಕಮಾಂಡ್, ಅಮಿತ್ ಶಾ ಮೂಲಕ ಬ್ರೇಕ್ ಹಾಕಿಸಿದರು.

ಬಿಜೆಪಿ ಮೂಲಗಳ ಪ್ರಕಾರ, ಈಗ ಹೈ ಕಮಾಂಡ್ ಕೊಡು-ಕೊಳ್ಳುವಿಕೆಗೆ ಮುಂದೆ ಬರುವ ಲಕ್ಷಣ ಕಾಣುತ್ತಿದೆ. ಸಂಪುಟ ಪುನಾರಚನೆ/ ವಿಸ್ತರಣೆಗೆ ಒಪ್ಪಿಗೆ ಕೊಟ್ಟು ಯಡಿಯೂರಪ್ಪ ಸಿಟ್ಟನ್ನು ಕಡಿಮೆ ಮಾಡಿ ಕಳಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಂಸತ್ತು ಸದಸ್ಯರ ಸಭೆ
ತಮ್ಮ ತಂತ್ರಗಾರಿಕೆಯ ಭಾಗವಾಗಿ ಇಂದು ಸಂಸತ್​ ಸದಸ್ಯರ ಸಭೆ ಕರೆದು ಗ್ರಾಮ ಪಂಚಾಯತ್ ಚುನಾವಣೆ ಮತ್ತು ಇತರೆ ರಾಜಕೀಯ ವಿಷಯಗಳನ್ನು ಚರ್ಚೆ ಮಾಡುವ ವಿಚಾರ ಯಡಿಯೂರಪ್ಪ ಅವರದ್ದಾಗಿತ್ತು. ಆದರೆ ಅವರ ಲೆಕ್ಕಾಚಾರದಂತೆ ಸದಸ್ಯರು ಬರಲಿಲ್ಲ. 25 ಸಂಸತ್ ಸದಸ್ಯರಲ್ಲಿ 11 ಜನ ಮಾತ್ರ ಹಾಜರಿದ್ದುದು ಯಡಿಯೂರಪ್ಪ ಅವರಿಗೆ ಹಿನ್ನಡೆ ಎಂದು ಪಕ್ಷದ ಮೂಲಗಳು ವಿಶ್ಲೇಷಿಸಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?