AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಟೋಕಿಯೋ ಓಲಂಪಿಕ್ಸ್​ನಲ್ಲಿ ಭಾಗವಹಿಸಲಿರುವ ಕರ್ನಾಟಕದ ಕ್ರೀಡಾಪಟುಗಳಿಗೆ 10 ಲಕ್ಷ ಪ್ರೋತ್ಸಾಹಧನ ಘೋಷಿಸಿದ ರಾಜ್ಯ ಸರ್ಕಾರ

ಟೋಕಿಯೋ ಒಲಿಂಪಿಕ್ಸ್ ಗೆ ಆಯ್ಕೆಯಾಗಿರುವ ಈಕ್ವೆಸ್ಟ್ರಿಯನ್ ಕ್ರೀಡಾಪಟು‌ ಪೌವಾದ್ ಮಿರ್ಜಾ , ಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಕಿ ಆಟಗಾರ‌ ಎಸ್.ವಿ. ಸುನೀಲ್, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ, ಈಜು ಪಟು ಶ್ರೀಹರಿ ನಟರಾಜ್ ಮತ್ತು ಗಾಲ್ಫ್ ಆಟಗಾರ್ತಿ‌ ಅದಿತಿ ಅಶೋಕ್ ರಾಜ್ಯ ಸರ್ಕಾರ ಪ್ರಕಟಿಸಿರುವ ಪ್ರೋತ್ಸಾಹ ಧನ ಯೋಜನೆಗೆ ಫಲಾನುಭವಿಗಳಾಗಲಿದ್ದಾರೆ.

Tokyo Olympics: ಟೋಕಿಯೋ ಓಲಂಪಿಕ್ಸ್​ನಲ್ಲಿ ಭಾಗವಹಿಸಲಿರುವ ಕರ್ನಾಟಕದ ಕ್ರೀಡಾಪಟುಗಳಿಗೆ 10 ಲಕ್ಷ ಪ್ರೋತ್ಸಾಹಧನ ಘೋಷಿಸಿದ ರಾಜ್ಯ ಸರ್ಕಾರ
ಟೊಕಿಯೊ ಒಲಂಪಿಕ್ಸ್ ಲೊಗೊ
TV9 Web
| Edited By: |

Updated on:Jun 26, 2021 | 4:35 PM

Share

ಬೆಂಗಳೂರು: ಜುಲೈ 23ರಿಂದ ಸೆಪ್ಟೆಂಬರ್‌ 5ರವರೆಗೆ ಟೋಕಿಯೋ ನಗರದಲ್ಲಿ ನಡೆಯಲಿರುವ ಒಲಿಂಪಿಕ್‌ ಕ್ರೀಡಾಕೂಟಕ್ಕೆ ತೆರಳುವ ರಾಜ್ಯದ ಆಟಗಾರರಿಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ಪ್ರಕಟಿಸಿದೆ. ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ರಾಜ್ಯದ ಐವರು ಕ್ರೀಡಾಪಟುಗಳಿಗೆ ತಲಾ $10 ಲಕ್ಷ ಪ್ರೋತ್ಸಾಹಧನ ಘೋಷಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಕರ್ನಾಟಕದಿಂದ ಈಗಾಗಲೇ ಟೋಕಿಯೋ ಒಲಿಂಪಿಕ್ಸ್ ಗೆ ಆಯ್ಕೆಯಾಗಿರುವ ಈಕ್ವೆಸ್ಟ್ರಿಯನ್ ಕ್ರೀಡಾಪಟು‌ ಪೌವಾದ್ ಮಿರ್ಜಾ , ಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಕಿ ಆಟಗಾರ‌ ಎಸ್.ವಿ. ಸುನೀಲ್, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ, ಈಜು ಪಟು ಶ್ರೀಹರಿ ನಟರಾಜ್ ಮತ್ತು ಗಾಲ್ಫ್ ಆಟಗಾರ್ತಿ‌ ಅದಿತಿ ಅಶೋಕ್ ರಾಜ್ಯ ಸರ್ಕಾರ ಪ್ರಕಟಿಸಿರುವ ಪ್ರೋತ್ಸಾಹಧನ ಯೋಜನೆಗೆ ಫಲಾನುಭವಿಗಳಾಗಲಿದ್ದಾರೆ.

Tokyo Olympics: ಟೋಕಿಯೊ ಒಲಿಂಪಿಕ್ಸ್​ಗೆ ಭಾರತೀಯ ಮಹಿಳಾ ಹಾಕಿ ತಂಡ ಪ್ರಕಟ, 8 ಹೊಸ ಮುಖಗಳಿಗೆ ಅವಕಾಶ 2020 ರ ಟೋಕಿಯೊ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ಮಹಿಳಾ ಹಾಕಿ ತಂಡವನ್ನು ಘೋಷಿಸಲಾಗಿದೆ. ಇದರ ಅಡಿಯಲ್ಲಿ 16 ಸದಸ್ಯರ ತಂಡ ಒಲಂಪಿಕ್​ಗೆ ಸಿದ್ದವಾಗಿದೆ. ಭಾರತೀಯ ಮಹಿಳಾ ಹಾಕಿ ತಂಡದಲ್ಲಿ ಎಂಟು ಹೊಸ ಮುಖಗಳನ್ನು ಸೇರಿಸಲಾಗಿದೆ. ಅದೇ ಸಮಯದಲ್ಲಿ, 2016 ರ ರಿಯೊ ಒಲಿಂಪಿಕ್ಸ್‌ನಲ್ಲಿ ಆಡಿದ ಅನುಭವಿ ಎಂಟು ಮುಖಗಳನ್ನು ಸಹ ಸೇರಿಸಲಾಗಿದೆ. ಟೋಕಿಯೊ ಒಲಿಂಪಿಕ್ ಕ್ರೀಡಾಕೂಟ ಜುಲೈ 23 ರಿಂದ ಆಗಸ್ಟ್ 8 ರವರೆಗೆ ನಡೆಯಲಿದೆ. ರಾಣಿ ರಾಂಪಾಲ್ ಭಾರತೀಯ ಮಹಿಳಾ ಹಾಕಿ ತಂಡದ ನಾಯಕರಾಗಲಿದ್ದಾರೆ. ಡ್ರ್ಯಾಗ್ ಫ್ಲಿಕರ್, ಗುರ್ಜಿತ್ ಕೌರ್, ಉದಿತಾ, ನಿಶಾ, ನೇಹಾ, ನವನೀತ್ ಕೌರ್, ಶರ್ಮಿಳಾ ದೇವಿ, ಲಾಲ್ರೆಮ್ಸಿಯಾಮಿ ಮತ್ತು ಸಲೀಮಾ ಟೆಟೆ ಎಂಟು ಹೊಸ ಆಟಗಾರರಾಗಿದ್ದಾರೆ. ಲಾಜ್ರೆಮ್ಸಿಯಾಮಿ ಮಿಜೋರಾಂನಿಂದ ಭಾರತ ತಂಡಕ್ಕೆ ಸೇರ್ಪಡೆಯಾದ ಮೊದಲ ಮಹಿಳಾ ಹಾಕಿ ಆಟಗಾರ್ತಿ.

ಬ್ಯೂನಸ್ ಐರಿಸ್ನಲ್ಲಿ ನಡೆದ 2018 ರ ಯುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾರತೀಯ ತಂಡದ ನಾಯಕಿ ಸಲೀಮಾ ಟೆಟೆ. ಭಾರತದ ಮಹಿಳಾ ಹಾಕಿ ತಂಡ ಮೂರನೇ ಬಾರಿಗೆ ಒಲಿಂಪಿಕ್ ಕ್ರೀಡಾಕೂಟದಲ್ಲಿ ಆಡಲಿದೆ. ಅಲ್ಲದೆ, ಅವರು ಸತತ ಎರಡನೇ ಬಾರಿಗೆ ಅರ್ಹತೆ ಪಡೆದಿದ್ದಾರೆ. ಭಾರತೀಯ ಮಹಿಳಾ ಹಾಕಿ ತಂಡವು ಮೊದಲು 1980 ರಲ್ಲಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಪ್ರವೇಶಿಸಿತು. ಇದರ ನಂತರ, ಅವರು 2016 ರ ರಿಯೊ ಒಲಿಂಪಿಕ್ಸ್ ಮತ್ತು ಈಗ 2020 ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಲಸಿಕೆ ಹಾಕಲು ವಿಳಂಬ; ಕ್ರೀಡಾಪಟು ವಿನೇಶ್ ಫೋಗಟ್​ ಅಸಮಾಧಾನ

ಒಲಿಂಪಿಕ್ಸ್ ತಯಾರಿಗಳ ಪರಿಶೀಲನಾ ಸಭೆ: ಪ್ರಧಾನಿ ಮೋದಿ ಭಾಗಿ.. ಒಂದೆರಡು ಪದಕಗಳಿಗೆ ತೃಪ್ತರಾಗಬೇಡಿ; ಕಿರಣ್ ರಿಜಿಜು

(Karnataka government announces 10 lakh incentives for Karnataka athletes to participate in Tokyo Olympics 2020)

Published On - 4:09 pm, Sat, 26 June 21

Follow Us
Web contact
Web contact

TV9 Kannada

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?