AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನೂ ಕನ್ನಡಪರ ಅಂತ ತೋರಿಸಲು ಮುಂದಾದ ಕರ್ನಾಟಕ ಸರ್ಕಾರ

ಕನ್ನಡಪರ ಸಂಘಟನೆಗಳು ಡಿಸೆಂಬರ್ 5 ರಂದು ಬಂದ್​ಗೆ ಕರೆ ನೀಡಿದ್ದು ಎಲ್ಲರಿಗೂ ಗೊತ್ತಿದೆ. ಕರ್ನಾಟಕ ಸರ್ಕಾರ ಅವರನ್ನು ಮೆಚ್ಚಿಸಲೋ ಅಥವಾ ತನಗೂ ಭಾಷೆಯ ಮೇಲೆ ಭಾರಿ ಅಭಿಮಾನವಿದೆ ಅಂತ ತೋರಿಸಿಕೊಳ್ಳಲೋ; ಅಂತೂ ಒಂದು ವರ್ಷ ಕನ್ನಡ ಕಾಯಕ ವರ್ಷಾಚರಣೆ ನಡೆಸಲು ನಿರ್ಧರಿಸಿ ಒಂದು ಸುತ್ತೋಲೆ ಹೊರಡಿಸಿದೆ.

ತಾನೂ ಕನ್ನಡಪರ ಅಂತ ತೋರಿಸಲು ಮುಂದಾದ ಕರ್ನಾಟಕ ಸರ್ಕಾರ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 27, 2020 | 10:35 PM

Share

ಡಿಸೆಂಬರ್ 5 ರಂದು ಕನ್ನಡ ಪರ ಸಂಘಟನೆಗಳು ಬಂದ್ ಆಚರಿಸಲು ಕರೆ ನೀಡಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕನ್ನಡ-ಪರ ಪ್ರೇಮ ತೋರಿಸಲು ಮುಂದಾಗಿದ್ದು ಒಂದು ವರ್ಷ ಕನ್ನಡ ಕಾಯಕ ವರ್ಷಾಚರಣೆ ನಡೆಸಲು ನಿರ್ಧರಿಸಿ ತಾನೂ ಕನ್ನಡ ಪರ ಎಂಬುದನ್ನು ತೋರಿಸಲು ಒಂದು ಸುತ್ತೋಲೆಯನ್ನೂ ಹೊರಡಿಸಿದೆ.

ಸುತ್ತೋಲೆಯಲ್ಲಿ 19-ಅಂಶಗಳ ಕನ್ನಡ ಕಾಯಕ ವರ್ಷಾಚರಣೆ ಅಡಕವಾಗಿದೆ, ಅವುಗಳಲ್ಲಿ ಪ್ರಮುಖ ಅಂಶಗಳೆಂದರೆ ಸರ್ಕಾರಿ ಆದೇಶದ ಸುತ್ತೋಲೆ ಕನ್ನಡದಲ್ಲಿ ಹೊರಡಿಸುವುದು, ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಕಾರ್ಯಗತಗೊಳಿಸುವುದು ಮತ್ತು ತಂತ್ರಜ್ಞಾನದಲ್ಲೂ ಕನ್ನಡ ಕಡ್ಡಾಯ ಬಳಕೆಗೆ ಸಹಾಯವಾಗುವಂತೆ ತಂತ್ರಾಂಶವನ್ನು ಅಭಿವೃದ್ಧಿಗೊಳಿಸುವುದು ಆಗಿವೆ.

ಹಾಗೆಯೇ, ಇಲಾಖಾವಾರು ನೀತಿ, ಕರಡು ಪ್ರತಿಗಳು ಕನ್ನಡದಲ್ಲಿರಬೇಕು. ಫಲಾನುಭವಿಗಳಿಗೆ ಕಳಿಸುವ ಸಂದೇಶಗಳು ಕನ್ನಡದಲ್ಲಿರಬೇಕು. ನಗರ, ಪಟ್ಟಣಗಳ ಹೆಸರನ್ನು ಕನ್ನಡ ಭಾಷೆಯ ಉಚ್ಚಾರಣೆಯಂತೆಯೇ ಬಳಸಬೇಕು. ರಾಜ್ಯದ ಎಲ್ಲಾ ಜಿಲ್ಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕನ್ನಡ ಕಲಾವಿದರಿಗೆ ಆದ್ಯತೆ ನೀಡಬೇಕು. ಕನ್ನಡ ಭಾಷೆ, ನೆಲ, ಜಲ ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮ ಮೊದಲಾದವುಗಳಲ್ಲಿ ಕೇವಲ ಕನ್ನಡ ಭಾಷೆ ಮಾತ್ರ ಬಳಕೆಯಾಗಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಖಾಸಗಿ ಆಸ್ಪತ್ರೆಗಳು, ರೋಗಿಗಳಿಗೆ ನೀಡುವ ದಾಖಲೆ ಮತ್ತು ಕರ್ನಾಟಕದಲ್ಲಿ ಮಾರಾಟವಾಗುವ ಉತ್ಪನ್ನಗಳ ಮೇಲೂ ವಿವರಗಳನ್ನು ಕನ್ನಡದಲ್ಲೇ ಮುದ್ರಿಸಬೇಕೆಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ