AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನೂ ಕನ್ನಡಪರ ಅಂತ ತೋರಿಸಲು ಮುಂದಾದ ಕರ್ನಾಟಕ ಸರ್ಕಾರ

ಕನ್ನಡಪರ ಸಂಘಟನೆಗಳು ಡಿಸೆಂಬರ್ 5 ರಂದು ಬಂದ್​ಗೆ ಕರೆ ನೀಡಿದ್ದು ಎಲ್ಲರಿಗೂ ಗೊತ್ತಿದೆ. ಕರ್ನಾಟಕ ಸರ್ಕಾರ ಅವರನ್ನು ಮೆಚ್ಚಿಸಲೋ ಅಥವಾ ತನಗೂ ಭಾಷೆಯ ಮೇಲೆ ಭಾರಿ ಅಭಿಮಾನವಿದೆ ಅಂತ ತೋರಿಸಿಕೊಳ್ಳಲೋ; ಅಂತೂ ಒಂದು ವರ್ಷ ಕನ್ನಡ ಕಾಯಕ ವರ್ಷಾಚರಣೆ ನಡೆಸಲು ನಿರ್ಧರಿಸಿ ಒಂದು ಸುತ್ತೋಲೆ ಹೊರಡಿಸಿದೆ.

ತಾನೂ ಕನ್ನಡಪರ ಅಂತ ತೋರಿಸಲು ಮುಂದಾದ ಕರ್ನಾಟಕ ಸರ್ಕಾರ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 27, 2020 | 10:35 PM

Share

ಡಿಸೆಂಬರ್ 5 ರಂದು ಕನ್ನಡ ಪರ ಸಂಘಟನೆಗಳು ಬಂದ್ ಆಚರಿಸಲು ಕರೆ ನೀಡಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕನ್ನಡ-ಪರ ಪ್ರೇಮ ತೋರಿಸಲು ಮುಂದಾಗಿದ್ದು ಒಂದು ವರ್ಷ ಕನ್ನಡ ಕಾಯಕ ವರ್ಷಾಚರಣೆ ನಡೆಸಲು ನಿರ್ಧರಿಸಿ ತಾನೂ ಕನ್ನಡ ಪರ ಎಂಬುದನ್ನು ತೋರಿಸಲು ಒಂದು ಸುತ್ತೋಲೆಯನ್ನೂ ಹೊರಡಿಸಿದೆ.

ಸುತ್ತೋಲೆಯಲ್ಲಿ 19-ಅಂಶಗಳ ಕನ್ನಡ ಕಾಯಕ ವರ್ಷಾಚರಣೆ ಅಡಕವಾಗಿದೆ, ಅವುಗಳಲ್ಲಿ ಪ್ರಮುಖ ಅಂಶಗಳೆಂದರೆ ಸರ್ಕಾರಿ ಆದೇಶದ ಸುತ್ತೋಲೆ ಕನ್ನಡದಲ್ಲಿ ಹೊರಡಿಸುವುದು, ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಕಾರ್ಯಗತಗೊಳಿಸುವುದು ಮತ್ತು ತಂತ್ರಜ್ಞಾನದಲ್ಲೂ ಕನ್ನಡ ಕಡ್ಡಾಯ ಬಳಕೆಗೆ ಸಹಾಯವಾಗುವಂತೆ ತಂತ್ರಾಂಶವನ್ನು ಅಭಿವೃದ್ಧಿಗೊಳಿಸುವುದು ಆಗಿವೆ.

ಹಾಗೆಯೇ, ಇಲಾಖಾವಾರು ನೀತಿ, ಕರಡು ಪ್ರತಿಗಳು ಕನ್ನಡದಲ್ಲಿರಬೇಕು. ಫಲಾನುಭವಿಗಳಿಗೆ ಕಳಿಸುವ ಸಂದೇಶಗಳು ಕನ್ನಡದಲ್ಲಿರಬೇಕು. ನಗರ, ಪಟ್ಟಣಗಳ ಹೆಸರನ್ನು ಕನ್ನಡ ಭಾಷೆಯ ಉಚ್ಚಾರಣೆಯಂತೆಯೇ ಬಳಸಬೇಕು. ರಾಜ್ಯದ ಎಲ್ಲಾ ಜಿಲ್ಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕನ್ನಡ ಕಲಾವಿದರಿಗೆ ಆದ್ಯತೆ ನೀಡಬೇಕು. ಕನ್ನಡ ಭಾಷೆ, ನೆಲ, ಜಲ ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮ ಮೊದಲಾದವುಗಳಲ್ಲಿ ಕೇವಲ ಕನ್ನಡ ಭಾಷೆ ಮಾತ್ರ ಬಳಕೆಯಾಗಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಖಾಸಗಿ ಆಸ್ಪತ್ರೆಗಳು, ರೋಗಿಗಳಿಗೆ ನೀಡುವ ದಾಖಲೆ ಮತ್ತು ಕರ್ನಾಟಕದಲ್ಲಿ ಮಾರಾಟವಾಗುವ ಉತ್ಪನ್ನಗಳ ಮೇಲೂ ವಿವರಗಳನ್ನು ಕನ್ನಡದಲ್ಲೇ ಮುದ್ರಿಸಬೇಕೆಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ