AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನೂ ಕನ್ನಡಪರ ಅಂತ ತೋರಿಸಲು ಮುಂದಾದ ಕರ್ನಾಟಕ ಸರ್ಕಾರ

ಕನ್ನಡಪರ ಸಂಘಟನೆಗಳು ಡಿಸೆಂಬರ್ 5 ರಂದು ಬಂದ್​ಗೆ ಕರೆ ನೀಡಿದ್ದು ಎಲ್ಲರಿಗೂ ಗೊತ್ತಿದೆ. ಕರ್ನಾಟಕ ಸರ್ಕಾರ ಅವರನ್ನು ಮೆಚ್ಚಿಸಲೋ ಅಥವಾ ತನಗೂ ಭಾಷೆಯ ಮೇಲೆ ಭಾರಿ ಅಭಿಮಾನವಿದೆ ಅಂತ ತೋರಿಸಿಕೊಳ್ಳಲೋ; ಅಂತೂ ಒಂದು ವರ್ಷ ಕನ್ನಡ ಕಾಯಕ ವರ್ಷಾಚರಣೆ ನಡೆಸಲು ನಿರ್ಧರಿಸಿ ಒಂದು ಸುತ್ತೋಲೆ ಹೊರಡಿಸಿದೆ.

ತಾನೂ ಕನ್ನಡಪರ ಅಂತ ತೋರಿಸಲು ಮುಂದಾದ ಕರ್ನಾಟಕ ಸರ್ಕಾರ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 27, 2020 | 10:35 PM

Share

ಡಿಸೆಂಬರ್ 5 ರಂದು ಕನ್ನಡ ಪರ ಸಂಘಟನೆಗಳು ಬಂದ್ ಆಚರಿಸಲು ಕರೆ ನೀಡಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕನ್ನಡ-ಪರ ಪ್ರೇಮ ತೋರಿಸಲು ಮುಂದಾಗಿದ್ದು ಒಂದು ವರ್ಷ ಕನ್ನಡ ಕಾಯಕ ವರ್ಷಾಚರಣೆ ನಡೆಸಲು ನಿರ್ಧರಿಸಿ ತಾನೂ ಕನ್ನಡ ಪರ ಎಂಬುದನ್ನು ತೋರಿಸಲು ಒಂದು ಸುತ್ತೋಲೆಯನ್ನೂ ಹೊರಡಿಸಿದೆ.

ಸುತ್ತೋಲೆಯಲ್ಲಿ 19-ಅಂಶಗಳ ಕನ್ನಡ ಕಾಯಕ ವರ್ಷಾಚರಣೆ ಅಡಕವಾಗಿದೆ, ಅವುಗಳಲ್ಲಿ ಪ್ರಮುಖ ಅಂಶಗಳೆಂದರೆ ಸರ್ಕಾರಿ ಆದೇಶದ ಸುತ್ತೋಲೆ ಕನ್ನಡದಲ್ಲಿ ಹೊರಡಿಸುವುದು, ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಕಾರ್ಯಗತಗೊಳಿಸುವುದು ಮತ್ತು ತಂತ್ರಜ್ಞಾನದಲ್ಲೂ ಕನ್ನಡ ಕಡ್ಡಾಯ ಬಳಕೆಗೆ ಸಹಾಯವಾಗುವಂತೆ ತಂತ್ರಾಂಶವನ್ನು ಅಭಿವೃದ್ಧಿಗೊಳಿಸುವುದು ಆಗಿವೆ.

ಹಾಗೆಯೇ, ಇಲಾಖಾವಾರು ನೀತಿ, ಕರಡು ಪ್ರತಿಗಳು ಕನ್ನಡದಲ್ಲಿರಬೇಕು. ಫಲಾನುಭವಿಗಳಿಗೆ ಕಳಿಸುವ ಸಂದೇಶಗಳು ಕನ್ನಡದಲ್ಲಿರಬೇಕು. ನಗರ, ಪಟ್ಟಣಗಳ ಹೆಸರನ್ನು ಕನ್ನಡ ಭಾಷೆಯ ಉಚ್ಚಾರಣೆಯಂತೆಯೇ ಬಳಸಬೇಕು. ರಾಜ್ಯದ ಎಲ್ಲಾ ಜಿಲ್ಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕನ್ನಡ ಕಲಾವಿದರಿಗೆ ಆದ್ಯತೆ ನೀಡಬೇಕು. ಕನ್ನಡ ಭಾಷೆ, ನೆಲ, ಜಲ ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮ ಮೊದಲಾದವುಗಳಲ್ಲಿ ಕೇವಲ ಕನ್ನಡ ಭಾಷೆ ಮಾತ್ರ ಬಳಕೆಯಾಗಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಖಾಸಗಿ ಆಸ್ಪತ್ರೆಗಳು, ರೋಗಿಗಳಿಗೆ ನೀಡುವ ದಾಖಲೆ ಮತ್ತು ಕರ್ನಾಟಕದಲ್ಲಿ ಮಾರಾಟವಾಗುವ ಉತ್ಪನ್ನಗಳ ಮೇಲೂ ವಿವರಗಳನ್ನು ಕನ್ನಡದಲ್ಲೇ ಮುದ್ರಿಸಬೇಕೆಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​