AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ನಾಗರಿಕ ಸೇವೆ ನಿಯಮಾವಳಿಗೆ ಮತ್ತಷ್ಟು ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ

ಯೋಜನಾ ನಿರಾಶ್ರಿತರ ವ್ಯಕ್ತಿಗಳು, ಕುಟುಂಬದ ಸದಸ್ಯರಿಗಾಗಿ ಮೀಸಲಿರಿಸಿದ ಐದು ಶೇಕಡಾವಾರು ಸಂಖ್ಯೆಗೆ ಸೂಕ್ತ ಅಭ್ಯರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಾಗದಿದ್ದರೆ ಅಂಥ ರಿಕ್ತ ಸ್ಥಾನಗಳನ್ನು ಅದೇ ಪ್ರವರ್ಗಕ್ಕೆ ಸೇರಿದ ಇದರ ಅಭ್ಯರ್ಥಿಗಳಿಂದ ಭರ್ತಿ ಮಾಡಬೇಕು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಕರ್ನಾಟಕ ನಾಗರಿಕ ಸೇವೆ ನಿಯಮಾವಳಿಗೆ ಮತ್ತಷ್ಟು ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ
ವಿಧಾನಸೌಧ
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on:Jul 08, 2021 | 10:36 PM

Share

ಬೆಂಗಳೂರು:  ಕರ್ನಾಟಕ ಸರ್ಕಾರ 1977 ಕರ್ನಾಟಕ ನಾಗರಿಕ ಸೇವೆ (ಸಾಮಾನ್ಯ ನೇಮಕಾತಿ) ನಿಯಮಾವಳಿಗೆ ಮತ್ತಷ್ಟು ತಿದ್ದುಪಡಿಗಳನ್ನು ಮಾಡಲು ಒಂದು ಅಧಿಸೂಚನೆಯನ್ನು ಗುರುವಾರ, 7 ಜುಲೈ 2021 ರಂದು ಹೊರಡಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಅಧಿನಿಯಮ 1978 (1990ರ ಅಧಿನಿಯಮ ಸಂಖ್ಯೆ 14) 3ನೇ ಪ್ರಕರಣದ ಒಂದನೇ ಉಪಪ್ರಕರಣವನ್ನು ಓದಿಕೊಂಡಂತೆ ಪದುತ್ತರವಾದ ಅಧಿಕಾರವನ್ನು ಚಲಾಯಿಸಿ ಕೆಳಕಂಡ ನಿಯಮಗಳನ್ನು ರಚಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನಿಯಮಗಳು:

ಹೆಸರು ಮತ್ತು ಪ್ರಾರಂಭ:

i) ಈ ನಿಯಮಗಳು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ತಿದ್ದುಪಡಿ ನಿಯಮಗಳು, 2021 ಅಂತ ಕರೆಯಬೇಕೆಂದು ಅಧಿಸೂಚನೆಯಲ್ಲಿ ಹೆಳಲಾಗಿದೆ.

ii) ಸದರಿ ನಿಯಮಗಳು ಅಧಿಕೃತವಾದ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ತರತಕ್ಕದ್ದು ಎಂದು ಅಧಿಸೂಚನೆ ತಿಳಿಸುತ್ತದೆ.

2) ನಿಯಮ 9ಕ್ಕೆ ತಿದ್ದುಪಡಿ:

ಕರ್ನಾಟಕ ನಾಗರಿಕ ಸೇವೆ (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ನಿಯಮ 9 ರ ಉಪನಿಯಮ (1ಎಎ)ರಲ್ಲಿ

i) ಕರ್ನಾಟಕ ಸಿವಿಲ್ ಸೇವೆ (ಸಾಮಾನ್ಯ ನೇಮಕಾತಿ) (57ನೇ ತಿದ್ದುಪಡಿ) ನಿಯಮಗಳು 2000ರಲ್ಲಿ ಪ್ರಾರಂಭವಾದ ದಿನಾಂಕದಿಂದ20 ವರ್ಷಗಳ ಅವಧಿವರೆಗೆ ಎಂಬ ಪದಗಳು, ಸಂಖ್ಯೆಗಳು ಹಾಗೂ ಆವರಣದ ಬದಲಾಗಿ ದಿನಾಂಕ 23.11.2020ರಿಂದ ಜಾರಿಗೆ ಬರುವ ಹಾಗೆ ಇಪ್ಪತ್ತೈದು ವರ್ಷಗಳ ಅವಧಿವರೆಗೆ ಎಂಬ ಪದಗಳು, ಸಂಖ್ಯೆಗಳು ಹಾಗೂ ಆವರಣಗಳನ್ನು ಪ್ರಸ್ತಾಪಿಸತಕ್ಕದ್ದು ಎಂದು ಅಧಿಸೂಚನೆ ಹೇಳುತ್ತದೆ ಮತ್ತು

ii) ಮೂರನೇ ಪರಂತುಕದ ನಂತರ ವಿವರಣೆಯ ಮೊದಲು ಕೆಳಕಂಡ ಪರಂತುಕವನ್ನು ಸೇರಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಮತ್ತು ಪರಂತು ಯೋಜನಾ ನಿರಾಶ್ರಿತರ ವ್ಯಕ್ತಿಗಳು, ಕುಟುಂಬದ ಸದಸ್ಯರಿಗಾಗಿ ಮೀಸಲಿರಿಸಿದ ಐದು ಶೇಕಡಾವಾರು ಸಂಖ್ಯೆಗೆ ಸೂಕ್ತ ಅಭ್ಯರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಾಗದಿದ್ದರೆ ಅಂಥ ರಿಕ್ತ ಸ್ಥಾನಗಳನ್ನು ಅದೇ ಪ್ರವರ್ಗಕ್ಕೆ ಸೇರಿದ ಇದರ ಅಭ್ಯರ್ಥಿಗಳಿಂದ ಭರ್ತಿ ಮಾಡಬೇಕು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ರಾಜ್ಯಪಾಲರ ಆದೇಶದ ಅನುಸಾರ, ಹೇಮಲತಾ ಜಿ, ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಅವರು ಅಧಿಸೂಚನೆಗೆ ಸಹಿ ಹಾಕಿರುತ್ತಾರೆ.

ಇದನ್ನೂ ಓದಿ: KPSCಯಲ್ಲಿ ಇನ್ನೂ ನಡೀತಿದೆಯಾ ಪೋಸ್ಟಿಂಗ್ ಡೀಲಿಂಗ್?.. ಹುದ್ದೆಗಾಗಿ ಮನಿ ಡೀಲಿಂಗ್ ಆಡಿಯೋ ಆಯ್ತು ಫುಲ್​ ವೈರಲ್

ಇದನ್ನೂ ಓದಿ: KAS Mains ಪರೀಕ್ಷೆ ಮುಂದೂಡಿದ KPSC, ಆದ್ರೆ ವಾಣಿಜ್ಯ ವಿದ್ಯಾರ್ಥಿಗಳಿಗೆ ತಪ್ಪಲಿಲ್ಲ ಸಂಕಟ

Published On - 8:49 pm, Thu, 8 July 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!