AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ವಾರ್ಡ್​ ಸಂಖ್ಯೆ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಅಧಿನಿಯಮ ಜಾರಿ, ಗರಿಗೆದರಿದ ಚುನಾವಣೆ ಕುತೂಹಲ

BBMP‌ ಅಧಿನಿಯಮಕ್ಕೆ ಡಿಸೆಂಬರ್ 19ರಂದು ರಾಜ್ಯಪಾಲರು ಅಂಕಿತ ಹಾಕಿದ್ದರು. ಅಧಿನಿಯಮದ‌ ಎಲ್ಲಾ ಉಪಬಂಧಗಳು ಜನವರಿ 11ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.

BBMP ವಾರ್ಡ್​ ಸಂಖ್ಯೆ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಅಧಿನಿಯಮ ಜಾರಿ, ಗರಿಗೆದರಿದ ಚುನಾವಣೆ ಕುತೂಹಲ
ಬಿಬಿಎಂಪಿ ಮುಖ್ಯ ಕಚೇರಿ
ಆಯೇಷಾ ಬಾನು
|

Updated on:Jan 08, 2021 | 1:41 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ‌ ಅಧಿನಿಯಮಕ್ಕೆ ಡಿಸೆಂಬರ್ 19ರಂದು ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದರು. ಅದಕ್ಕೆ ಅನುಗುಣವಾಗಿ.. ಅಧಿನಿಯಮದ‌ ಎಲ್ಲಾ ಉಪಬಂಧಗಳು ಜನವರಿ 11ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಇದೀಗ ಅಧಿಸೂಚನೆ ಹೊರಡಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರ ನಿನ್ನೆ (ಜ.07) ಅಧಿಸೂಚನೆ ಹೊರಡಿಸಿದೆ. ಈ ಅಧಿನಿಯಮದ ಪ್ರಕಾರ ಚುನಾವಣಾ ಆಯೋಗದಿಂದ ಮುಂದಿನ ಕ್ರಮ ಕೈಗೊಳ್ಳಲಾಗುತ್ತೆ. ಜನಸಂಖ್ಯೆಗೆ ಅನುಗುಣವಾಗಿ ಹಾಲಿ ವಾರ್ಡ್ ವಿಂಗಡಿಸಿ ಹೊಸ ವಾರ್ಡ್‌ಗಳ ರಚನೆ ಮಾಡಲಾಗುತ್ತೆ.

ದೇಶದಲ್ಲೇ ಅತ್ಯಂತ ದೊಡ್ಡ ಮಹಾನಗರ ಪಾಲಿಕೆಯಾದ ಬಿಬಿಎಂಪಿ: ಇನ್ನು ಪಾಲಿಕೆ‌ ಅಧಿನಿಯಮಕ್ಕೆ ರಾಜ್ಯಪಾಲ ವಾಲಾರಿಂದ ಅಂಕಿತ ಸಿಕ್ಕಿದ್ದು BBMP ದೇಶದಲ್ಲೇ ಅತ್ಯಂತ ದೊಡ್ಡ ಮಹಾನಗರ ಪಾಲಿಕೆಯಾಗಿದೆ. 198 ವಾರ್ಡ್‌ನಿಂದ 243ಕ್ಕೆ ವಾರ್ಡ್‌ಗಳ ಸಂಖ್ಯೆ ಏರಿಕೆಯಾಗಲಿದೆ. ಹೀಗಾಗಿ ಇನ್ನು ಮುಂದೆ‌ ಬಿಬಿಎಂಪಿಗೆ ಪ್ರತ್ಯೇಕ ಕಾನೂನು ರಚನೆಯಾಗಲಿದೆ. ಇಷ್ಟು ದಿನ 198 ವಾರ್ಡ್‌ಗಳಿಂದ ಕಾರ್ಯನಿರ್ವಹಣೆ ಮಾಡಲಾಗುತ್ತಿತ್ತು. ಇದರ ಬದಲಿಗೆ 243 ವಾರ್ಡ್‌ಗಳಿಂದ ಪಾಲಿಕೆ ಕಾರ್ಯನಿರ್ವಹಣೆ ಮಾಡಲಿದೆ.

ಇಷ್ಟು ವರ್ಷ ಕೆಎಂಸಿ ಕಾಯ್ದೆ 1976ರಡಿ ಕಾರ್ಯನಿರ್ವಹಣೆ ಮಾಡಲಾಗುತ್ತಿತ್ತು. ಹಾಗೂ ಮೇಯರ್ ಅವಧಿ ಒಂದು ವರ್ಷದ‌ ಬದಲಿಗೆ 30 ತಿಂಗಳಿಗೆ ವಿಸ್ತರಿಸಲಾಗಿದೆ. ಕಮಿಷನರ್‌ ಹುದ್ದೆಯನ್ನು ಚೀಫ್ ಕಮಿಷನರ್ ‌ಆಗಿ‌ ಬದಲಾವಣೆ ಮಾಡಲಾಗಿದ್ದು ಎಲ್ಲಾ ವಲಯಕ್ಕೆ ವಲಯ ಆಯುಕ್ತರು ನೇಮಕವಾಗಲಿದ್ದಾರೆ.

ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ -BBMPಯಿಂದ ಕಳವಳಕಾರಿ ಮಾಹಿತಿ ಬಿಡುಗಡೆ

Published On - 1:37 pm, Fri, 8 January 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ