AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಮಂಡ್ಯಕ್ಕೆ ಹೊಸ ಎಸ್​ಪಿ ನೇಮಕ; ಸುಮನ್ ಪನ್ನೇಕರ್ ಸೇರಿ 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಸುಮನ್ ಡಿ. ಪನ್ನೇಕರ್, ಇಷಾ ಪಂತ್, ಯತೀಶ್​ ಎನ್. ಸೇರಿದಂತೆ ಐವರು ಖಡಕ್ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೊನೆಗೂ ಮಂಡ್ಯಕ್ಕೆ ಹೊಸ ಎಸ್​ಪಿ ನೇಮಕ; ಸುಮನ್ ಪನ್ನೇಕರ್ ಸೇರಿ 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಮಂಡ್ಯ ಎಸ್​ಪಿ ಸುಮನ್ ಪನ್ನೇಕರ್
TV9 Web
| Edited By: |

Updated on: Oct 30, 2021 | 5:55 PM

Share

ಬೆಂಗಳೂರು: ಮಂಡ್ಯ ಜಿಲ್ಲೆಯ ಎಸ್​ಪಿಯಾಗಿ ನೇಮಕವಾಗಿದ್ದ ಐಪಿಎಸ್ ಅಧಿಕಾರಿ ಸುಮನ್ ಡಿ. ಪನ್ನೇಕರ್ ಅವರಿಗೆ ಅಧಿಕಾರ ವಹಿಸಿಕೊಳ್ಳದಂತೆ ಪೊಲೀಸ್ ಇಲಾಖೆಯಿಂದ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸುಮಾರು 10 ದಿನಗಳಿಂದ ಮಂಡ್ಯ ಎಸ್​ಪಿ ಸ್ಥಾನ ಖಾಲಿಯಾಗಿಯೇ ಉಳಿದಿತ್ತು. ಇದೀಗ 5 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಮಂಡ್ಯಕ್ಕೆ ಹೊಸ ಎಸ್​ಪಿಯನ್ನು ನೇಮಕ ಮಾಡಿದೆ. ಸುಮನ್ ಡಿ. ಪನ್ನೇಕರ್, ಇಷಾ ಪಂತ್, ಯತೀಶ್​ ಎನ್. ಸೇರಿದಂತೆ ಐವರು ಖಡಕ್ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ತೀವ್ರ ವಿವಾದಕ್ಕೀಡಾಗಿದ್ದ ಮಂಡ್ಯ ಎಸ್​ಪಿ ಸ್ಥಾನಕ್ಕೆ ಸುಮನ್ ಡಿ. ಪನ್ನೇಕರ್ ಅವರ ಬದಲು ಯತೀಶ್ ಎನ್. ಅವರನ್ನು ನೇಮಕ ಮಾಡಲಾಗಿದೆ. ಮಂಡ್ಯ ಎಸ್​ಪಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲೇ ಸುಮನ್ ಡಿ. ಪನ್ನೇಕರ್ ಅವರನ್ನು ಉತ್ತರ ಕನ್ನಡದ ಎಸ್​ಪಿಯಾಗಿ ಎತ್ತಂಗಡಿ ಮಾಡಲಾಗಿದೆ. ಮಂಡ್ಯ ನೂತನ ಎಸ್‌ಪಿಯಾಗಿ ಎನ್. ಯತೀಶ್, ಉತ್ತರ ಕನ್ನಡ ಎಸ್‌ಪಿಯಾಗಿ ಸುಮನ್ ಡಿ. ಪನ್ನೇಕರ್, ಕಲಬುರ್ಗಿ ಎಸ್​ಪಿಯಾಗಿ ಇಷಾ ಪಂತ್, ಗದಗದ ಎಸ್​ಪಿಯಾಗಿ ಎಸ್.ಪಿ. ದೇವರಾಜ್, ಮೈಸೂರಿನ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕಿಯಾಗಿ ಡಾ. ಸಿಮಿ ಮರಿಯಮ್ ಜಾರ್ಜ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ರಾಜಕೀಯ ಒತ್ತಡದಿಂದ ಮಂಡ್ಯದ ನೂತನ ಮಹಿಳಾ ಎಸ್​ಪಿ ಸುಮನ್ ಡಿ. ಪನ್ನೇಕರ್ ಅಧಿಕಾರ ವಹಿಸಿಕೊಳ್ಳದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಮಂಡ್ಯ ಎಸ್​ಪಿ ನೇಮಕ ವಿಚಾರದಲ್ಲಿ ಯಾವುದೇ ಒತ್ತಡವಿಲ್ಲ. ಅನೇಕ ಪೊಲೀಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ. ಅವರಿಗೆ ಡ್ಯೂಟಿಗೆ ರಿಪೋರ್ಟ್ ಮಾಡಿಕೊಳ್ಳುವುದಕ್ಕೆ ಸಮಯ ಇರುತ್ತದೆ. ಮಂಡ್ಯ ಎಸ್​ಪಿ ಸುಮನ್ ಪನ್ನೇಕರ್ ಅಧಿಕಾರ ಸ್ವೀಕರಿಸಲು ಯಾವುದೇ ತಡೆಯಿಲ್ಲ ಎಂದಿದ್ದರು. ಆದರೆ, ಇದೀಗ ಮತ್ತೆ ಸುಮನ್ ಪನ್ನೇಕರ್ ಅವರನ್ನು ಉತ್ತರ ಕನ್ನಡದ ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಅ. 20ರಂದು ಮಂಡ್ಯ ಎಸ್​ಪಿ ಡಾ.ಎಂ. ಅಶ್ವಿನಿ ಅವರನ್ನು ವರ್ಗಾವಣೆಗೊಳಿಸಿದ್ದ ಸರ್ಕಾರ ಆ ಜಾಗಕ್ಕೆ ಸುಮನ್ ಡಿ. ಪನ್ನೇಕರ್​ ಅವರನ್ನು ನೇಮಕ ಮಾಡಿತ್ತು. ಆದರೆ, ಸುಮನ್ ಡಿ. ಪನ್ನೇಕರ್​ ಅವರಿಗೆ ಎಸ್​ಪಿ ಆಗಿ ಚಾರ್ಜ್​ ತೆಗೆದುಕೊಳ್ಳದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಮೌಖಿಕ ಆದೇಶ ನೀಡಿದ್ದರು. ಇದರಿಂದ ಸುಮಾರು 10 ದಿನಗಳಿಂದ ಮಂಡ್ಯ ಎಸ್​ಪಿ ಸ್ಥಾನ ಖಾಲಿಯಿತ್ತು. ಇದೀಗ ವರ್ಗಾವಣೆಗೊಂಡಿರುವ ಐವರು ಐಪಿಎಸ್ ಅಧಿಕಾರಿಗಳಿಗೂ ತುರ್ತಾಗಿ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Mandya: ಮಂಡ್ಯ ಎಸ್​ಪಿ ಹುದ್ದೆ ಹರಾಜಿಗಿದೆ; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ