AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಸಾವು, ತಪ್ಪಿತಸ್ಥ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಎಲ್ಲೆಂದೆರಲ್ಲಿ ಸೂಕ್ತ ಕಾಲದಲ್ಲಿ ಚಿಕಿತ್ಸೆ ಸಿಗದೆ ಸೋಂಕಿತರು ಸಾಯುತ್ತಿರುವುದರ ಕುರಿತು, ಅದರಲ್ಲೂ ಇತ್ತೀಚೆಗೆ ಒಂಬತ್ತು ಆಸ್ಪತ್ರೆಗಳಿಗೆ ಅಲೆದು ಸೋಂಕಿತರೊಬ್ಬರು ಸಾವನ್ನಪ್ಪಿರುವ ಘಟನೆ ಬಗ್ಗೆ ಕರ್ನಾಟಕ ಹೈಕೋರ್ಟ್‌ ಗರಂ‌ ಆಗಿದೆ. ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ವಿಚಾರಣೆ ನಡೆಸಿದ ಹೈಕೋರ್ಟ್‌, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಆಸ್ಪತ್ರೆಗಳಿಗೆ ಕಠಿಣ ಸಂದೇಶ ರವಾನಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಚಿಕಿತ್ಸೆಯಲ್ಲಿ ಆಗುತ್ತಿರುವ ವಿಳಂಬದ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ  ಎ.ಎಸ್. ಒಕಾ […]

ಕೊರೊನಾ ಸೋಂಕಿತರ ಸಾವು, ತಪ್ಪಿತಸ್ಥ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಸೂಚನೆ
ಕರ್ನಾಟಕ ಹೈಕೋರ್ಟ್​
Guru
| Edited By: |

Updated on:Jul 10, 2020 | 9:34 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಎಲ್ಲೆಂದೆರಲ್ಲಿ ಸೂಕ್ತ ಕಾಲದಲ್ಲಿ ಚಿಕಿತ್ಸೆ ಸಿಗದೆ ಸೋಂಕಿತರು ಸಾಯುತ್ತಿರುವುದರ ಕುರಿತು, ಅದರಲ್ಲೂ ಇತ್ತೀಚೆಗೆ ಒಂಬತ್ತು ಆಸ್ಪತ್ರೆಗಳಿಗೆ ಅಲೆದು ಸೋಂಕಿತರೊಬ್ಬರು ಸಾವನ್ನಪ್ಪಿರುವ ಘಟನೆ ಬಗ್ಗೆ ಕರ್ನಾಟಕ ಹೈಕೋರ್ಟ್‌ ಗರಂ‌ ಆಗಿದೆ. ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ವಿಚಾರಣೆ ನಡೆಸಿದ ಹೈಕೋರ್ಟ್‌, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಆಸ್ಪತ್ರೆಗಳಿಗೆ ಕಠಿಣ ಸಂದೇಶ ರವಾನಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಚಿಕಿತ್ಸೆಯಲ್ಲಿ ಆಗುತ್ತಿರುವ ವಿಳಂಬದ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ  ಎ.ಎಸ್. ಒಕಾ ಮತ್ತು ನ್ಯಾ.ಅರವಿಂದ್ ಕುಮಾರ್ ರವರ ವಿಭಾಗೀಯ ಪೀಠ,  ಕೊರೊನಾ ಟೆಸ್ಟ್ ಆದವರಿಗೆ ವರದಿ‌ ನೀಡಲು ಆಗುತ್ತಿರುವ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿತು. ಅಷ್ಟೇ ಅಲ್ಲ ಟೆಸ್ಟ್‌ ವರದಿ ವಿಳಂಬದಿಂದಾಗಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದೆ.

ಇಚ್ಚೀಚೆಗೆ ನ್ಯಾಯಾಧೀಶರೊಬ್ಬರ ತಂದೆಗೆ ಕೊರೊನಾ ಪಾಸಿಟಿವ್ ಇತ್ತು. ಪರಿಣಾಮ ವಸತಿ ಸಮುಚ್ಚಯದದಲ್ಲಿ ವಾಸಿಸುವ 14 ನ್ಯಾಯಾಧೀಶರು ಈಗ ಕ್ವಾರಂಟೈನ್ ಆಗಿದ್ದಾರೆ. ಜುಲೈ 4 ರಂದೇ ಟೆಸ್ಟ್ ಮಾಡಿಸಿದ್ದರೂ ಇನ್ನೂ ವರದಿ ಬಂದಿಲ್ಲ. ಜನಸಾಮಾನ್ಯರು ಟೆಸ್ಟ್ ಮಾಡಿಸಿದರೆ ವರದಿಗೆ ಎಷ್ಟು ಸಮಯ ಬೇಕು.  ಪಾಸಿಟಿವ್ ಬಂದರೆ ಆಸ್ಪತ್ರೆಗೆ ದಾಖಲಿಸಲು ಎಷ್ಟು ಸಮಯ ಬೇಕು. ಈ ಬಗ್ಗೆ ಸಮಗ್ರ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಹೈಕೋರ್ಟ್‌, ಕೊರೊನಾ ಸಂಕಷ್ಟವನ್ನ ಸಮರ್ಪಕವಾಗಿ ನಿರ್ವಹಿಸಲು ಒಂದು ವೆಬ್ ಸೈಟ್ ಆರಂಭಿಸಲು ಸಲಹೆ ನೀಡಿದೆ. ಇದರಲ್ಲಿ ಆಗಿಂದಾಗ್ಗೆ, ಖಾಲಿಯಾಗಿರುವ ಬೆಡ್ ಮತ್ತು ಆಸ್ಪತ್ರೆಗಳ ವಿವರ ನೀಡಿ. ಹಾಗೇನೇ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Published On - 6:10 pm, Fri, 10 July 20

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!