Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,669 ಜನರಿಗೆ ಕೊರೊನಾ ದೃಢ; 22 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 425 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,32,220 ಕ್ಕೆ ಏರಿಕೆಯಾಗಿದೆ. 12,32,220 ಸೋಂಕಿತರ ಪೈಕಿ 12,08,097 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,669 ಜನರಿಗೆ ಕೊರೊನಾ ದೃಢ; 22 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
| Updated By: ganapathi bhat

Updated on:Aug 13, 2021 | 8:06 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 13) ಹೊಸದಾಗಿ 1,669 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,26,401 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,66,739 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 22 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,933 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 22,703 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 425 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,32,220 ಕ್ಕೆ ಏರಿಕೆಯಾಗಿದೆ. 12,32,220 ಸೋಂಕಿತರ ಪೈಕಿ 12,08,097 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,933 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,189 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 2, ಬಳ್ಳಾರಿ 2, ಬೆಳಗಾವಿ 49, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 425, ಬೀದರ್ 0, ಚಾಮರಾಜನಗರ 22, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 51, ಚಿತ್ರದುರ್ಗ 16, ದಕ್ಷಿಣ ಕನ್ನಡ 390, ದಾವಣಗೆರೆ 18, ಧಾರವಾಡ 8, ಗದಗ 3, ಹಾಸನ 113, ಹಾವೇರಿ 0, ಕಲಬುರಗಿ 3, ಕೊಡಗು 73, ಕೋಲಾರ 27, ಕೊಪ್ಪಳ 2, ಮಂಡ್ಯ 35, ಮೈಸೂರು 106, ರಾಯಚೂರು 2, ರಾಮನಗರ 0, ಶಿವಮೊಗ್ಗ 56, ತುಮಕೂರು 69, ಉಡುಪಿ 115, ಉತ್ತರ ಕನ್ನಡ 62, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 5 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಹಾಗೂ ಕೋಲಾರ ಜಿಲ್ಲೆಯಲ್ಲಿ ತಲಾ 3 ಕೊವಿಡ್ ಮರಣಗಳು ವರದಿಯಾಗಿದೆ. ಬೆಳಗಾವಿ, ಚಿತ್ರದುರ್ಗ, ಹಾಸನ, ತುಮಕೂರು ಜಿಲ್ಲೆಯಲ್ಲಿ ತಲಾ 2 ಕೊವಿಡ್ ಮರಣ ಸಂಭವಿಸಿದೆ. ಚಾಮರಾಜನಗರ, ದಾವಣಗೆರೆ, ಉಡುಪಿ ಜಿಲ್ಲೆಯಲ್ಲಿ ತಲಾ 1 ಸಾವು ಸಂಭವಿಸಿದೆ.

ಇದನ್ನೂ ಓದಿ: Bengaluru: ಬಿಬಿಎಂಪಿ ವ್ಯಾಪ್ತಿಯ ಅಪಾರ್ಟ್​ಮೆಂಟ್, ಕಾಂಪ್ಲೆಕ್ಸ್​ಗಳಿಗೆ ಕೊವಿಡ್19 ವಿಶೇಷ ಮಾರ್ಗಸೂಚಿ ಪ್ರಕಟ

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿ ಆಗಸ್ಟ್ 15ರ ನಂತರ ತುರ್ತು ಸಭೆ: ಸಚಿವ ಆರ್ ಅಶೋಕ್

(Karnataka New Corona Cases Death Toll Total Covid19 Active Coronavirus Cases on August 13)

Published On - 8:01 pm, Fri, 13 August 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ