AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

ವಿಧಾನಪರಿಷತ್​ ಸಭಾಪತಿ ಪೀಠ ಸಿಕ್ಕಿದ್ದು ನನ್ನ ಸೌಭಾಗ್ಯ. 2 ವರ್ಷಗಳಿಂದ ಸಭಾಪತಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಪ್ರತಾಪಚಂದ್ರಶೆಟ್ಟಿ ಹೇಳಿದ್ದಾರೆ.

ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ
ಪ್ರತಾಪ್ ಚಂದ್ರ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on:Feb 04, 2021 | 8:54 PM

Share

ಬೆಂಗಳೂರು: ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಉಪಸಭಾಪತಿಗೆ ಅವರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.  2018ರ ಡಿ.12ರಿಂದ ಪ್ರತಾಪಚಂದ್ರ ಶೆಟ್ಟಿ ಸಭಾಪತಿಯಾಗಿದ್ದರು. 113 ವರ್ಷಗಳ ರಾಜ್ಯದ ಮೇಲ್ಮನೆಗೆ ಭವ್ಯ ಇತಿಹಾಸವಿದೆ. ಈ ಸದನದ ಘನತೆ ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ. ಕಳೆದ 37 ವರ್ಷಗಳಿಂದ ನಾನು ಸಾರ್ವಜನಿಕ ಬದುಕಿನಲ್ಲಿದ್ದೇನೆ. ಆದರೆ ಈಗ ಮೌಲ್ಯಗಳು ಕಡಿಮೆಯಾಗುತ್ತಿದೆ. ವಿಧಾನಪರಿಷತ್​ ಸಭಾಪತಿ ಪೀಠ ಸಿಕ್ಕಿದ್ದು ನನ್ನ ಸೌಭಾಗ್ಯ. 2 ವರ್ಷಗಳಿಂದ ಸಭಾಪತಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಜವಾಬ್ದಾರಿಯಿಂದ ನಡೆದುಕೊಂಡಿದ್ದೇನೆ ಎಂಬ ತೃಪ್ತಿ ಇದೆ ಎಂದು ಪರಿಷತ್​ ಸಭಾಪತಿ ಪ್ರತಾಪಚಂದ್ರಶೆಟ್ಟಿ ವಿದಾಯ ಭಾಷಣ ಮಾಡಿದ್ದಾರೆ. 

2018ರ ಡಿ.12ರಿಂದ ಪ್ರತಾಪಚಂದ್ರ ಶೆಟ್ಟಿ ಸಭಾಪತಿಯಾಗಿದ್ದರು. ಇವರು ವಿಧಾನಪರಿಷತ್​ನ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಪ್ರತಾಪಚಂದ್ರಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಬಿಜೆಪಿಯ ಅವಿಶ್ವಾಸ ನಿರ್ಣಯವನ್ನು ಜೆಡಿಎಸ್ ಬೆಂಬಲಿಸಿತ್ತು. ಹೀಗಾಗಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.  ನಿನ್ನೆ ನಡೆದ ಸಿಎಲ್​ಪಿ ಸಭೆಯಲ್ಲೇ ಅವರು  ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದರು.  ಪಕ್ಷಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ರಾಜೀನಾಮೆ ನೀಡುತ್ತಿರುವುದಾಗಿ ಅವರು ಸಿಎಲ್​ಪಿ ಸಭೆಯಲ್ಲಿ ಹೇಳಿದ್ದರು ಎನ್ನಲಾಗಿದೆ.

ರಾಜೀನಾಮೆ ನೀಡಿದ ನಂತರ ವಿಧಾನಸೌಧದ ತಮ್ಮ ಕೊಠಡಿಗೆ ಪ್ರತಾಪಚಂದ್ರ ಶೆಟ್ಟಿ ತೆರಳಿದ್ದಾರೆ. ಸಭಾಪತಿ ಭೇಟಿಗೆ ಮೂರೂ ಪಕ್ಷಗಳ ನಾಯಕರು ಆಗಮಿಸಿದ್ದಾರೆ. ಸಚಿವರಾದ ಬಸವರಾಜ ಬೊಮ್ಮಾಯಿ, ಶ್ರೀನಿವಾಸ ಪೂಜಾರಿ, ಲಕ್ಷ್ಮಣ ಸವದಿ, ಎಸ್.ಆರ್.ಪಾಟೀಲ್, ಹೆಚ್.ವಿಶ್ವನಾಥ್​, ಬಸವರಾಜ ಹೊರಟ್ಟಿ ಸೇರಿ ಹಲವು ನಾಯರು ಪ್ರತಾಪಚಂದ್ರ ಶೆಟ್ಟಿ ಭೇಟಿಯಾಗಿದ್ದಾರೆ.

‘ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್​ ಬಳಕೆ​ ಬ್ಯಾನ್​.. ಒಂದು ವೇಳೆ ನೋಡಬೇಕೆಂದ್ರೆ ಸಭಾಪತಿಯ ಅನುಮತಿ ಪಡೆಯಬೇಕು’

Published On - 8:30 pm, Thu, 4 February 21

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್