AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

ವಿಧಾನಪರಿಷತ್​ ಸಭಾಪತಿ ಪೀಠ ಸಿಕ್ಕಿದ್ದು ನನ್ನ ಸೌಭಾಗ್ಯ. 2 ವರ್ಷಗಳಿಂದ ಸಭಾಪತಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಪ್ರತಾಪಚಂದ್ರಶೆಟ್ಟಿ ಹೇಳಿದ್ದಾರೆ.

ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ
ಪ್ರತಾಪ್ ಚಂದ್ರ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on:Feb 04, 2021 | 8:54 PM

Share

ಬೆಂಗಳೂರು: ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಉಪಸಭಾಪತಿಗೆ ಅವರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.  2018ರ ಡಿ.12ರಿಂದ ಪ್ರತಾಪಚಂದ್ರ ಶೆಟ್ಟಿ ಸಭಾಪತಿಯಾಗಿದ್ದರು. 113 ವರ್ಷಗಳ ರಾಜ್ಯದ ಮೇಲ್ಮನೆಗೆ ಭವ್ಯ ಇತಿಹಾಸವಿದೆ. ಈ ಸದನದ ಘನತೆ ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ. ಕಳೆದ 37 ವರ್ಷಗಳಿಂದ ನಾನು ಸಾರ್ವಜನಿಕ ಬದುಕಿನಲ್ಲಿದ್ದೇನೆ. ಆದರೆ ಈಗ ಮೌಲ್ಯಗಳು ಕಡಿಮೆಯಾಗುತ್ತಿದೆ. ವಿಧಾನಪರಿಷತ್​ ಸಭಾಪತಿ ಪೀಠ ಸಿಕ್ಕಿದ್ದು ನನ್ನ ಸೌಭಾಗ್ಯ. 2 ವರ್ಷಗಳಿಂದ ಸಭಾಪತಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಜವಾಬ್ದಾರಿಯಿಂದ ನಡೆದುಕೊಂಡಿದ್ದೇನೆ ಎಂಬ ತೃಪ್ತಿ ಇದೆ ಎಂದು ಪರಿಷತ್​ ಸಭಾಪತಿ ಪ್ರತಾಪಚಂದ್ರಶೆಟ್ಟಿ ವಿದಾಯ ಭಾಷಣ ಮಾಡಿದ್ದಾರೆ. 

2018ರ ಡಿ.12ರಿಂದ ಪ್ರತಾಪಚಂದ್ರ ಶೆಟ್ಟಿ ಸಭಾಪತಿಯಾಗಿದ್ದರು. ಇವರು ವಿಧಾನಪರಿಷತ್​ನ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಪ್ರತಾಪಚಂದ್ರಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಬಿಜೆಪಿಯ ಅವಿಶ್ವಾಸ ನಿರ್ಣಯವನ್ನು ಜೆಡಿಎಸ್ ಬೆಂಬಲಿಸಿತ್ತು. ಹೀಗಾಗಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.  ನಿನ್ನೆ ನಡೆದ ಸಿಎಲ್​ಪಿ ಸಭೆಯಲ್ಲೇ ಅವರು  ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದರು.  ಪಕ್ಷಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ರಾಜೀನಾಮೆ ನೀಡುತ್ತಿರುವುದಾಗಿ ಅವರು ಸಿಎಲ್​ಪಿ ಸಭೆಯಲ್ಲಿ ಹೇಳಿದ್ದರು ಎನ್ನಲಾಗಿದೆ.

ರಾಜೀನಾಮೆ ನೀಡಿದ ನಂತರ ವಿಧಾನಸೌಧದ ತಮ್ಮ ಕೊಠಡಿಗೆ ಪ್ರತಾಪಚಂದ್ರ ಶೆಟ್ಟಿ ತೆರಳಿದ್ದಾರೆ. ಸಭಾಪತಿ ಭೇಟಿಗೆ ಮೂರೂ ಪಕ್ಷಗಳ ನಾಯಕರು ಆಗಮಿಸಿದ್ದಾರೆ. ಸಚಿವರಾದ ಬಸವರಾಜ ಬೊಮ್ಮಾಯಿ, ಶ್ರೀನಿವಾಸ ಪೂಜಾರಿ, ಲಕ್ಷ್ಮಣ ಸವದಿ, ಎಸ್.ಆರ್.ಪಾಟೀಲ್, ಹೆಚ್.ವಿಶ್ವನಾಥ್​, ಬಸವರಾಜ ಹೊರಟ್ಟಿ ಸೇರಿ ಹಲವು ನಾಯರು ಪ್ರತಾಪಚಂದ್ರ ಶೆಟ್ಟಿ ಭೇಟಿಯಾಗಿದ್ದಾರೆ.

‘ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್​ ಬಳಕೆ​ ಬ್ಯಾನ್​.. ಒಂದು ವೇಳೆ ನೋಡಬೇಕೆಂದ್ರೆ ಸಭಾಪತಿಯ ಅನುಮತಿ ಪಡೆಯಬೇಕು’

Published On - 8:30 pm, Thu, 4 February 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್