AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC 2021 FDA Admit Card: ಎಫ್​ಡಿಎ ಹಾಲ್​ ಟಿಕೆಟ್​ ಬಿಡುಗಡೆ; ಆನ್​ಲೈನ್​​ನಲ್ಲಿ ಡೌನ್​ ಮಾಡೋದು ಹೇಗೆ? ಇಲ್ಲಿದೆ ವಿವರ

Karnataka Public Service Commission: ಇದೇ ಫೆಬ್ರವರಿ 28ರಂದು ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಒಂದು ವಾರ ಇರುವಾಗ ಹಾಲ್ ​ಟಿಕೆಟ್​ ರಿಲೀಸ್​ ಮಾಡಲಾಗಿದೆ.

KPSC 2021 FDA Admit Card: ಎಫ್​ಡಿಎ ಹಾಲ್​ ಟಿಕೆಟ್​ ಬಿಡುಗಡೆ; ಆನ್​ಲೈನ್​​ನಲ್ಲಿ ಡೌನ್​ ಮಾಡೋದು ಹೇಗೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on:Feb 22, 2021 | 4:57 PM

ಕರ್ನಾಟಕ ಲೋಕ ಸೇವಾ ಆಯೋಗ (Karnataka Public Service Commission – KPSC) ಪ್ರಥಮ ದರ್ಜೆ ಸಹಾಯಕರ (First Division Assistant – FDA) ಹುದ್ದೆಯ ಪರೀಕ್ಷೆಗೆ ಹಾಲ್​​ ಟಿಕೆಟ್ (ಪ್ರವೇಶ ಪತ್ರ) ​ಬಿಡುಗಡೆ ಆಗಿದೆ. ಹಾಲ್​ ಟಿಕೆಟ್ ಅಭ್ಯರ್ಥಿಗಳು kpscrcruitment.in ವೆಬ್​ಸೈಟ್​ ಮೂಲಕ ನೇರವಾಗಿ ಡೌನ್​ಲೋಡ್ ಮಾಡಿಕೊಳ್ಳಬಹುದು.

ಮೇ 2020ರಂದು ‘ಕೆಪಿಎಸ್​ಸಿ ಎಫ್​ಡಿಎ ಪರೀಕ್ಷೆ 2021’ ನಡೆಯಬೇಕಿತ್ತು. ಆದರೆ, ಕೊರೊನಾ ಸೋಂಕು ಹೆಚ್ಚಿದ್ದ ಕಾರಣ ಪರೀಕ್ಷೆಯನ್ನು 2021ರ ಜನವರಿ 23, 24ಕ್ಕೆ ಮುಂದೂಡಲಾಗಿತ್ತು. ನಂತರ ಮತ್ತೆ ಪರೀಕ್ಷಾ ದಿನಾಂಕ ಬದಲಾಗಿತ್ತು. ಇದೇ ಫೆಬ್ರವರಿ 28ರಂದು ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಒಂದು ವಾರ ಇರುವಾಗ ಹಾಲ್ ​ಟಿಕೆಟ್​ ರಿಲೀಸ್​ ಮಾಡಲಾಗಿದೆ. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಸಮಯಕ್ಕೆ ಸಂಬಂಧಿಸಿದ ವಿವರಗಳನ್ನು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿರುತ್ತದೆ.

ಹಾಲ್​ಟಿಕೆಟ್​ ಡೌನ್​ಲೋಡ್​ ಮಾಡುವ ಹಂತಗಳ ಬಗ್ಗೆ ಇಲ್ಲಿದೆ ವಿವರ..

  • ಮೊದಲು kpscrcruitment.in ವೆಬ್​ಸೈಟ್​ಗೆ ಭೇಟಿ ನೀಡಿ. ಇದು ಕೆಪಿಎಸ್​ಸಿ ಅಧಿಕೃತ ವೆಬ್​ಸೈಟ್​ ಆಗಿದೆ.
  • ನಂತರ ನಿಮ್ಮ ಖಾತೆಯ ಐಡಿ ಹಾಗೂ ಪಾಸ್​ವರ್ಡ್​ ಹಾಕಿ ಲಾಗಿನ್ ಮಾಡಿ..
  • ನಂತರ ನಿಮ್ಮ ಅಡ್ಮಿಟ್​ ಕಾರ್ಡ್​ ಡೌನ್​ಲೋಡ್​ ಮಾಡಿಕೊಳ್ಳಿ.

ಜನವರಿ 24 ರಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಹಿಂದಿನ ದಿನ (ಜನವರಿ 23) ಪತ್ರಿಕೆ ಸೊರಿಕೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೆಪಿಎಸ್​ಸಿ ಸಿಬ್ಬಂದಿ ಸೇರಿ ಹಲವು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಫೆ.28ರಂದು ಎಫ್​ಡಿಎ​ ಪರೀಕ್ಷೆ ನಡೆಸಲು ಕೆಪಿಎಸ್​ಸಿ ನಿರ್ಧರಿಸಿದ್ದು, ಕಳೆದ ಬಾರಿಯಾದ ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ ವಹಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಸಿಸಿಬಿ ಪೊಲೀಸರು ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: FDA ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳ ಹದ್ದಿನ ಕಣ್ಣು; ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ

Published On - 4:48 pm, Mon, 22 February 21

ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ