AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC 2021 FDA Admit Card: ಎಫ್​ಡಿಎ ಹಾಲ್​ ಟಿಕೆಟ್​ ಬಿಡುಗಡೆ; ಆನ್​ಲೈನ್​​ನಲ್ಲಿ ಡೌನ್​ ಮಾಡೋದು ಹೇಗೆ? ಇಲ್ಲಿದೆ ವಿವರ

Karnataka Public Service Commission: ಇದೇ ಫೆಬ್ರವರಿ 28ರಂದು ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಒಂದು ವಾರ ಇರುವಾಗ ಹಾಲ್ ​ಟಿಕೆಟ್​ ರಿಲೀಸ್​ ಮಾಡಲಾಗಿದೆ.

KPSC 2021 FDA Admit Card: ಎಫ್​ಡಿಎ ಹಾಲ್​ ಟಿಕೆಟ್​ ಬಿಡುಗಡೆ; ಆನ್​ಲೈನ್​​ನಲ್ಲಿ ಡೌನ್​ ಮಾಡೋದು ಹೇಗೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Feb 22, 2021 | 4:57 PM

Share

ಕರ್ನಾಟಕ ಲೋಕ ಸೇವಾ ಆಯೋಗ (Karnataka Public Service Commission – KPSC) ಪ್ರಥಮ ದರ್ಜೆ ಸಹಾಯಕರ (First Division Assistant – FDA) ಹುದ್ದೆಯ ಪರೀಕ್ಷೆಗೆ ಹಾಲ್​​ ಟಿಕೆಟ್ (ಪ್ರವೇಶ ಪತ್ರ) ​ಬಿಡುಗಡೆ ಆಗಿದೆ. ಹಾಲ್​ ಟಿಕೆಟ್ ಅಭ್ಯರ್ಥಿಗಳು kpscrcruitment.in ವೆಬ್​ಸೈಟ್​ ಮೂಲಕ ನೇರವಾಗಿ ಡೌನ್​ಲೋಡ್ ಮಾಡಿಕೊಳ್ಳಬಹುದು.

ಮೇ 2020ರಂದು ‘ಕೆಪಿಎಸ್​ಸಿ ಎಫ್​ಡಿಎ ಪರೀಕ್ಷೆ 2021’ ನಡೆಯಬೇಕಿತ್ತು. ಆದರೆ, ಕೊರೊನಾ ಸೋಂಕು ಹೆಚ್ಚಿದ್ದ ಕಾರಣ ಪರೀಕ್ಷೆಯನ್ನು 2021ರ ಜನವರಿ 23, 24ಕ್ಕೆ ಮುಂದೂಡಲಾಗಿತ್ತು. ನಂತರ ಮತ್ತೆ ಪರೀಕ್ಷಾ ದಿನಾಂಕ ಬದಲಾಗಿತ್ತು. ಇದೇ ಫೆಬ್ರವರಿ 28ರಂದು ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಒಂದು ವಾರ ಇರುವಾಗ ಹಾಲ್ ​ಟಿಕೆಟ್​ ರಿಲೀಸ್​ ಮಾಡಲಾಗಿದೆ. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಸಮಯಕ್ಕೆ ಸಂಬಂಧಿಸಿದ ವಿವರಗಳನ್ನು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿರುತ್ತದೆ.

ಹಾಲ್​ಟಿಕೆಟ್​ ಡೌನ್​ಲೋಡ್​ ಮಾಡುವ ಹಂತಗಳ ಬಗ್ಗೆ ಇಲ್ಲಿದೆ ವಿವರ..

  • ಮೊದಲು kpscrcruitment.in ವೆಬ್​ಸೈಟ್​ಗೆ ಭೇಟಿ ನೀಡಿ. ಇದು ಕೆಪಿಎಸ್​ಸಿ ಅಧಿಕೃತ ವೆಬ್​ಸೈಟ್​ ಆಗಿದೆ.
  • ನಂತರ ನಿಮ್ಮ ಖಾತೆಯ ಐಡಿ ಹಾಗೂ ಪಾಸ್​ವರ್ಡ್​ ಹಾಕಿ ಲಾಗಿನ್ ಮಾಡಿ..
  • ನಂತರ ನಿಮ್ಮ ಅಡ್ಮಿಟ್​ ಕಾರ್ಡ್​ ಡೌನ್​ಲೋಡ್​ ಮಾಡಿಕೊಳ್ಳಿ.

ಜನವರಿ 24 ರಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಹಿಂದಿನ ದಿನ (ಜನವರಿ 23) ಪತ್ರಿಕೆ ಸೊರಿಕೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೆಪಿಎಸ್​ಸಿ ಸಿಬ್ಬಂದಿ ಸೇರಿ ಹಲವು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಫೆ.28ರಂದು ಎಫ್​ಡಿಎ​ ಪರೀಕ್ಷೆ ನಡೆಸಲು ಕೆಪಿಎಸ್​ಸಿ ನಿರ್ಧರಿಸಿದ್ದು, ಕಳೆದ ಬಾರಿಯಾದ ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ ವಹಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಸಿಸಿಬಿ ಪೊಲೀಸರು ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: FDA ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳ ಹದ್ದಿನ ಕಣ್ಣು; ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ

Published On - 4:48 pm, Mon, 22 February 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?