ರೈತರಿಂದ ಕರ್ನಾಟಕ ಬಂದ್: ಹಾಸನದಲ್ಲಿ ಹೆದ್ದಾರಿ ತಡೆದು ಆಕ್ರೋಶ

ಹಾಸನ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ತಡೆದು ಪ್ರತಿಭಟನಾಕಾರರು ಕರ್ನಾಟಕ ಬಂದ್ ಬೆಂಬಲಿಸಿ ಆಕ್ರೋಶ ಹೊರ ಹಾಕಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆ ತಡೆದು ರಸ್ತೆಯಲ್ಲೇ ಧರಣಿ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾದ್ಯಂತ ಮಣ್ಣಿನ ಮಕ್ಕಳ ಪ್ರತಿಭಟನೆಯ ಬಿಸಿ ಹೆಚ್ಚಾಗಿದೆ. ಕನ್ನಡ ಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು […]

ರೈತರಿಂದ ಕರ್ನಾಟಕ ಬಂದ್: ಹಾಸನದಲ್ಲಿ ಹೆದ್ದಾರಿ ತಡೆದು ಆಕ್ರೋಶ
Edited By:

Updated on: Sep 28, 2020 | 10:47 AM

ಹಾಸನ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ತಡೆದು ಪ್ರತಿಭಟನಾಕಾರರು ಕರ್ನಾಟಕ ಬಂದ್ ಬೆಂಬಲಿಸಿ ಆಕ್ರೋಶ ಹೊರ ಹಾಕಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆ ತಡೆದು ರಸ್ತೆಯಲ್ಲೇ ಧರಣಿ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾದ್ಯಂತ ಮಣ್ಣಿನ ಮಕ್ಕಳ ಪ್ರತಿಭಟನೆಯ ಬಿಸಿ ಹೆಚ್ಚಾಗಿದೆ. ಕನ್ನಡ ಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು ರೈತರ ಪರ ಹೋರಾಟ ನಡೆಸುತ್ತಿವೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us