AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸುಧೇಂದ್ರ, ಶಿವಾನಂದ ಕಳವೆ ಸೇರಿ ಹಲವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಘೋಷಣೆ

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಗಮನಾರ್ಹ ಸಾಧನೆಯನ್ನು ಗುರುತಿಸಿ 10 ಸಾಹಿತಿಗಳನ್ನು 2020ನೇ ಸಾಲಿನ ಸಾಹಿತ್ಯಶ್ರೀ ಪ್ರಶ್ತಿಗೆ ಆಯ್ಕೆಮಾಡಲಾಗಿದ್ದು, ಪ್ರೇಮಶೇಖರ್, ಡಾ.ರಾಜಪ್ಪ ದಳವಾಯಿ, ಬಿ.ಟಿ.ಜಾಹ್ನವಿ, ಪ್ರೊ. ಕಲ್ಯಾಣರಾವ್ ಜಿ.ಪಾಟೀಲ್, ಡಾ.ಜೆ.ಪಿ.ದೊಡ್ಡಮನಿ, ಡಾ. ಮೃತ್ಯುಂಜಯ ರುಮಾಲೆ, ಡಿ.ವಿ.ಪ್ರಹ್ಲಾದ, ಡಾ.ಎ.ಎಸ್.ಆಶಾದೇವಿ, ಶಿವಾನಂದ ಕಳವೆ ಮತ್ತು ಡಾ.ವೀಣಾ ಬನ್ನಂಜೆ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಿಸಿದೆ.

ವಸುಧೇಂದ್ರ, ಶಿವಾನಂದ ಕಳವೆ ಸೇರಿ ಹಲವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಘೋಷಣೆ
ಸಾಂದರ್ಭಿಕ ಚಿತ್ರ
guruganesh bhat
|

Updated on:Feb 26, 2021 | 6:31 PM

Share

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡುವ ವಿವಿಧ ವಾರ್ಷಿಕ ಪ್ರಶಸ್ತಿಗಳು ಘೋಷಣೆಯಾಗಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪ್ರೊ.ಅಮೃತ ಸೋಮೇಶ್ವರ, ವಿದ್ವಾನ್ ಷಣ್ಮುಖಯ್ಯ ಅಕ್ಕೂರಮಠ, ಡಾ.ಕೆ.ಕೆಂಪೇಗೌಡ, ಡಾ.ಕೆ.ಆರ್.ಸಂಧ್ಯಾರೆಡ್ಡಿ, ಅಶೋಕಪುರಂ ಕೆ.ಗೋವಿಂದರಾಜು ಅವರುಗಳನ್ನು ಆಯ್ಕೆಮಾಡಿರುವುದಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಹೇಳಿದೆ.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಗಮನಾರ್ಹ ಸಾಧನೆಯನ್ನು ಗುರುತಿಸಿ 10 ಸಾಹಿತಿಗಳನ್ನು 2020ನೇ ಸಾಲಿನ ಸಾಹಿತ್ಯಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರೇಮಶೇಖರ್, ಡಾ.ರಾಜಪ್ಪ ದಳವಾಯಿ, ಬಿ.ಟಿ.ಜಾಹ್ನವಿ, ಪ್ರೊ. ಕಲ್ಯಾಣರಾವ್ ಜಿ.ಪಾಟೀಲ್, ಡಾ.ಜೆ.ಪಿ.ದೊಡ್ಡಮನಿ, ಡಾ. ಮೃತ್ಯುಂಜಯ ರುಮಾಲೆ, ಡಿ.ವಿ.ಪ್ರಹ್ಲಾದ, ಡಾ.ಎ.ಎಸ್.ಆಶಾದೇವಿ, ಶಿವಾನಂದ ಕಳವೆ ಮತ್ತು ಡಾ.ವೀಣಾ ಬನ್ನಂಜೆ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಿಸಿದೆ.

18 ಸಾಹಿತ್ಯ ಪ್ರಕಾರಗಳ ಕೃತಿಗಳಿಗೆ ನೀಡುವ ವಾರ್ಷಿಕ ಪ್ರಶಸ್ತಿಗಳು ಸಹ ಘೋಷಣೆಯಾಗಿದ್ದು, 2019ನೇ ಸಾಲಿನಲ್ಲಿ ಖ್ಯಾತ ಸಾಹಿತಿ ವಸುಧೇಂದ್ರ ಅವರ ತೇಜೋ ತುಂಗಭದ್ರಾ ಕಾದಂಬರಿಗೆ ಪುರಸ್ಕಾರ ಲಭಿಸಿದೆ. ಕವಿತೆ ಪ್ರಕಾರದಲ್ಲಿ ಸುಮಿತ್ ಮೇತ್ರಿ ಅವರ ‘ಥಟ್ ಅಂತ ಬರೆದುಕೊಡುವ ರಶೀದಿಯಲ್ಲ ಕವಿತೆ’, ರಘುನಾಥ ಚ.ಹ ಅವರ ‘ಬೆಳ್ಳಿತೊರೆ’, ಸುಧಾ ಆಡುಕಳ ಅವರ ‘ಬಕುಲದ ಬಾಗಿಲಿನಿಂದ’, ಕಪಿಲ ಪಿ ಹುಮನಾಬಾದೆ ಅವರ ‘ಹಾಣಾದಿ’ ಅವರ ಕೃತಿಯೂ ಸೇರಿ ಒಟ್ಟು 18 ಕೃತಿಗಳಿಗೆ ಪುರಸ್ಕಾರ ಲಭಿಸಿದೆ. ಡಾ.ಪ್ರಭಾಕರ ಶಿಶಿಲ, ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 9 ದತ್ತಿನಿಧಿ ಪುರಸ್ಕಾರಗಳು ಘೋಷಣೆಯಾಗಿವೆ

ಇದನ್ನೂ ಓದಿ: Poetry; ಅವಿತಕವಿತೆ: ಅವರದೇ ಎದೆಯೊಳಗಿನ ಹಕ್ಕಿಯೊಂದು ಸೊರಗತೊಡಗಿತು

Motherhood; ನಾನೆಂಬ ಪರಿಮಳದ ಹಾದಿಯಲಿ: ಅಮ್ಮ ಕಾಲುಜಾರಿ ಬಿದ್ದ ಬಾವಿಗೆ ಕಟ್ಟೆ ಕಟ್ಟಲೇ ಇಲ್ಲ

Published On - 6:02 pm, Fri, 26 February 21

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?