AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಮಾರಾಟ ಮಂಡಳಿಯ ಖಜಾಂಚಿ ಕೋಟಿಕೋಟಿಗಳಲ್ಲಿ ಹಣ ತಿಂದು ಪರಾರಿ!

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಕೋಟಿ ಕೋಟಿ ಹಣ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇದರಿಂದ ರಾಜ್ಯದಲ್ಲಿ ಸರ್ಕಾರದ ಹಣಕ್ಕೆ ಯಾವುದೇ ಸೆಕ್ಯುರಿಟಿ ಇಲ್ಲ ಎಂಬಂತಾಗಿದೆ. ಬ್ಯಾಂಕ್ ಮ್ಯಾನೇಜರ್ ಜೊತೆ ಸೇರಿ ರಾಜ್ಯ ಕೃಷಿ ಮಾರಾಟ ಮಂಡಳಿ ಇಟ್ಟಿದ್ದ 48 ಕೋಟಿ ರೂಪಾಯಿಯನ್ನು ಎಗರಿಸಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಪೊಲೀಸರ ವಶಕ್ಕೆ: ರಾಜ್ಯ ಕೃಷಿ ಮಾರಾಟ ಮಂಡಳಿ ಎಂಡಿ ಕರೀಗೌಡ ಎಂಬುವರು ವಂಚನೆ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ […]

ಕೃಷಿ ಮಾರಾಟ ಮಂಡಳಿಯ ಖಜಾಂಚಿ ಕೋಟಿಕೋಟಿಗಳಲ್ಲಿ ಹಣ ತಿಂದು ಪರಾರಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 07, 2020 | 12:59 PM

Share

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಕೋಟಿ ಕೋಟಿ ಹಣ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇದರಿಂದ ರಾಜ್ಯದಲ್ಲಿ ಸರ್ಕಾರದ ಹಣಕ್ಕೆ ಯಾವುದೇ ಸೆಕ್ಯುರಿಟಿ ಇಲ್ಲ ಎಂಬಂತಾಗಿದೆ. ಬ್ಯಾಂಕ್ ಮ್ಯಾನೇಜರ್ ಜೊತೆ ಸೇರಿ ರಾಜ್ಯ ಕೃಷಿ ಮಾರಾಟ ಮಂಡಳಿ ಇಟ್ಟಿದ್ದ 48 ಕೋಟಿ ರೂಪಾಯಿಯನ್ನು ಎಗರಿಸಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ.

ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಪೊಲೀಸರ ವಶಕ್ಕೆ: ರಾಜ್ಯ ಕೃಷಿ ಮಾರಾಟ ಮಂಡಳಿ ಎಂಡಿ ಕರೀಗೌಡ ಎಂಬುವರು ವಂಚನೆ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಿಸಿಬಿಗೆ ವರ್ಗವಣೆ ಮಾಡಿದ್ದರು. ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಜಯರಾಮ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳ ಪತ್ತೆಗಾಗಿ ಸಿಸಿಬಿ ಪೊಲೀಸರು ಚೆನ್ನೈಗೆ ಹೊರಟಿದ್ದಾರೆ.

ರಾಜ್ಯ ಕೃಷಿ ಮಾರಾಟ ಮಂಡಳಿಯು ಉತ್ತರಹಳ್ಳಿ ಬ್ರಾಂಚ್​ನ ಸಿಂಡಿಕೇಟ್ ಬ್ಯಾಂಕ್​ನಲ್ಲಿ 100 ಕೋಟಿ ನಿಶ್ಚಿತ ಠೇವಣಿ ಇಟ್ಟಿದ್ದರು. 100 ಕೋಟಿ ಹಣವನ್ನು ಎರಡು ನಿಶ್ಚಿತ ಠೇವಣಿ ಇಡಲಾಗಿತ್ತು. ನಕಲಿ ಬಾಂಡ್ ಸೃಷ್ಟಿ ಮಾಡಿ 48 ಕೋಟಿ 10 ಅಕೌಂಟ್​ಗೆ ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಪ್ರಕರಣದಲ್ಲಿ ಬ್ಯಾಂಕ್ ಮ್ಯಾನೇಜರ್ ಜಯರಾಮ್​ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕೃಷಿ ಮಂಡಳಿಯ ಖಜಾಂಚಿಗಾಗಿ ಶೋಧ: ಕೃಷಿ ಮಂಡಳಿಯ ಖಜಾಂಚಿ ಲಕ್ಷ್ಮಣ್​ ಸಂಬಂಧಿಕರ ಅಕೌಂಟ್​ಗೇ 30 ಕೋಟಿ ಹಣ ವರ್ಗಾವಣೆಯಾಗಿದೆ. ಪ್ರಕರಣ ದಾಖಲಾದ ನಂತ್ರ ಖಜಾಂಚಿ ಲಕ್ಷ್ಮಣ್ ಎಸ್ಕೇಪ್ ಆಗಿದ್ದಾರೆ. ಹೀಗಾಗಿ ಲಕ್ಷ್ಮಣ್​ಗಾಗಿ ಚೆನ್ನೈನಲ್ಲಿ ಸಿಸಿಬಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮಹಮದ್ ಅಸ್ಲಾಂ ಎಂಬಾತನ ಅಕೌಂಟ್​ಗೆ 2.5 ಕೋಟಿ ಹಣ ವರ್ಗವಣೆ ಮಾಡಲಾಗಿದ್ದು, ಈ ಸಂಬಂಧ ಮಹಮದ್ ಅಸ್ಲಾಂ, ಮುಸ್ತಾಫಾ, ಭರತ್​ನನ್ನು ಸಿಸಿಬಿ ತಂಡ ವಶಕ್ಕೆ ಪಡೆದಿದ್ದಾರೆ.

Published On - 12:52 pm, Fri, 7 February 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!