AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧೆ ತಂದ ಅವಾಂತರ.. ಇಬ್ಬರ ಸಾವು, ಕಾರವಾರ ಕ್ರಿಮ್ಸ್ ಜಿಲ್ಲಾಸ್ಪತ್ರೆ ಸೀಲ್ ಡೌನ್

ಉತ್ತರ ಕನ್ನಡ: ಕಾರವಾರದಲ್ಲಿ ವೃದ್ಧೆಯೊಬ್ಬರು ಅನಾರೋಗ್ಯಕ್ಕೆ ತುತ್ತಾಗಿದ್ದು ಮೊದಲಿಗೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತದನಂತರ ಕಾರವಾರಕ್ಕೆ ಬಂದ ವೃದ್ಧೆ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದ ವಿಚಾರವನ್ನು ಮರೆಮಾಚಿ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ. ವೃದ್ಧೆಯ ಟ್ರಾವೆಲ್ ಹಿಸ್ಟರಿ ತಿಳಿಯದ ಆಸ್ಪತ್ರೆ ಸಿಬ್ಬಂದಿ ಮೊದಲಿಗೆ ಜಿಲ್ಲಾಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ವೃದ್ಧೆಗೆ ಚಿಕಿತ್ಸೆ ನೀಡಲಾರಂಬಿಸಿದ್ದಾರೆ. ನಂತರ ವೃದ್ಧೆಗೆ ಕೋವಿಡ್ ಟೆಸ್ಟ್ ನೆಡೆಸಲಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕು ದೃಢವಾದ ಮಾರನೇ ದಿನವೇ ವೃದ್ಧೆ ಸಾವನ್ನಪ್ಪಿದ್ದು ಈಗ ವೃದ್ಧೆಗೆ ಚಿಕಿತ್ಸೆ […]

ವೃದ್ಧೆ ತಂದ ಅವಾಂತರ.. ಇಬ್ಬರ ಸಾವು, ಕಾರವಾರ ಕ್ರಿಮ್ಸ್ ಜಿಲ್ಲಾಸ್ಪತ್ರೆ ಸೀಲ್ ಡೌನ್
Follow us
ಸಾಧು ಶ್ರೀನಾಥ್​
| Updated By:

Updated on:Jul 11, 2020 | 4:14 PM

ಉತ್ತರ ಕನ್ನಡ: ಕಾರವಾರದಲ್ಲಿ ವೃದ್ಧೆಯೊಬ್ಬರು ಅನಾರೋಗ್ಯಕ್ಕೆ ತುತ್ತಾಗಿದ್ದು ಮೊದಲಿಗೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತದನಂತರ ಕಾರವಾರಕ್ಕೆ ಬಂದ ವೃದ್ಧೆ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದ ವಿಚಾರವನ್ನು ಮರೆಮಾಚಿ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ.

ವೃದ್ಧೆಯ ಟ್ರಾವೆಲ್ ಹಿಸ್ಟರಿ ತಿಳಿಯದ ಆಸ್ಪತ್ರೆ ಸಿಬ್ಬಂದಿ ಮೊದಲಿಗೆ ಜಿಲ್ಲಾಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ವೃದ್ಧೆಗೆ ಚಿಕಿತ್ಸೆ ನೀಡಲಾರಂಬಿಸಿದ್ದಾರೆ. ನಂತರ ವೃದ್ಧೆಗೆ ಕೋವಿಡ್ ಟೆಸ್ಟ್ ನೆಡೆಸಲಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಂಕು ದೃಢವಾದ ಮಾರನೇ ದಿನವೇ ವೃದ್ಧೆ ಸಾವನ್ನಪ್ಪಿದ್ದು ಈಗ ವೃದ್ಧೆಗೆ ಚಿಕಿತ್ಸೆ ನೀಡಿದ ವೈದ್ಯ, ನರ್ಸ್, ಟೆಕ್ನಿಕಲ್ ಸಿಬ್ಬಂದಿ ಸೇರಿ 6 ಜನ ಸಿಬ್ಬಂದಿ ವರ್ಗದವರಿಗೂ ಹಾಗೂ ಮೂವರು  ಪಕ್ಕದ ಬೆಡ್ ನಲ್ಲಿದ್ದವರಿಗೂ ಸೋಂಕು ತಗುಲಿರುವುದು ಖಚಿತವಾಗಿದೆ.

ವೃದ್ಧೆ ಚಿಕಿತ್ಸೆಗೊಳಗಾಗಿದ್ದ ಬೆಡ್ ನ ಪಕ್ಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 35 ವರ್ಷದ ವ್ಯಕ್ತಿಯೂ ಕಳೆದ ರಾತ್ರಿ ಸಾವನ್ನಪ್ಪಿದ್ದು ಈಗ ಕ್ರಿಮ್ಸ್ ಜಿಲ್ಲಾಸ್ಪತ್ರೆಯನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ತುರ್ತುಚಿಕಿತ್ಸೆ, ಹೆರಿಗೆ ವಿಭಾಗಗಳನ್ನು ಹೊರತುಪಡಿಸಿ, ಐಸಿಯು, ಎಂಐಸಿಯು ಸೇರಿದಂತೆ ಬೇರೆಲ್ಲಾ ವಿಭಾಗಗಳನ್ನು ಸೀಲ್ ಡೌನ್ ಮಾಡಲಾಗಿದೆಯೆಂದು ಕಾರವಾರ ಕ್ರಿಮ್ಸ್ ನಿರ್ದೇಶಕ ಗಜಾನನ ನಾಯಕ್ ಟಿವಿ9 ಗೆ ತಿಳಿಸಿದ್ದಾರೆ.

Published On - 3:01 pm, Sat, 11 July 20

ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್