ವೃದ್ಧೆ ತಂದ ಅವಾಂತರ.. ಇಬ್ಬರ ಸಾವು, ಕಾರವಾರ ಕ್ರಿಮ್ಸ್ ಜಿಲ್ಲಾಸ್ಪತ್ರೆ ಸೀಲ್ ಡೌನ್

ಉತ್ತರ ಕನ್ನಡ: ಕಾರವಾರದಲ್ಲಿ ವೃದ್ಧೆಯೊಬ್ಬರು ಅನಾರೋಗ್ಯಕ್ಕೆ ತುತ್ತಾಗಿದ್ದು ಮೊದಲಿಗೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತದನಂತರ ಕಾರವಾರಕ್ಕೆ ಬಂದ ವೃದ್ಧೆ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದ ವಿಚಾರವನ್ನು ಮರೆಮಾಚಿ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ. ವೃದ್ಧೆಯ ಟ್ರಾವೆಲ್ ಹಿಸ್ಟರಿ ತಿಳಿಯದ ಆಸ್ಪತ್ರೆ ಸಿಬ್ಬಂದಿ ಮೊದಲಿಗೆ ಜಿಲ್ಲಾಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ವೃದ್ಧೆಗೆ ಚಿಕಿತ್ಸೆ ನೀಡಲಾರಂಬಿಸಿದ್ದಾರೆ. ನಂತರ ವೃದ್ಧೆಗೆ ಕೋವಿಡ್ ಟೆಸ್ಟ್ ನೆಡೆಸಲಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕು ದೃಢವಾದ ಮಾರನೇ ದಿನವೇ ವೃದ್ಧೆ ಸಾವನ್ನಪ್ಪಿದ್ದು ಈಗ ವೃದ್ಧೆಗೆ ಚಿಕಿತ್ಸೆ […]

ವೃದ್ಧೆ ತಂದ ಅವಾಂತರ.. ಇಬ್ಬರ ಸಾವು, ಕಾರವಾರ ಕ್ರಿಮ್ಸ್ ಜಿಲ್ಲಾಸ್ಪತ್ರೆ ಸೀಲ್ ಡೌನ್
ಸಾಧು ಶ್ರೀನಾಥ್​ Edited By:

Updated on: Jul 11, 2020 | 4:14 PM

ಉತ್ತರ ಕನ್ನಡ: ಕಾರವಾರದಲ್ಲಿ ವೃದ್ಧೆಯೊಬ್ಬರು ಅನಾರೋಗ್ಯಕ್ಕೆ ತುತ್ತಾಗಿದ್ದು ಮೊದಲಿಗೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತದನಂತರ ಕಾರವಾರಕ್ಕೆ ಬಂದ ವೃದ್ಧೆ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದ ವಿಚಾರವನ್ನು ಮರೆಮಾಚಿ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ.

ವೃದ್ಧೆಯ ಟ್ರಾವೆಲ್ ಹಿಸ್ಟರಿ ತಿಳಿಯದ ಆಸ್ಪತ್ರೆ ಸಿಬ್ಬಂದಿ ಮೊದಲಿಗೆ ಜಿಲ್ಲಾಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ವೃದ್ಧೆಗೆ ಚಿಕಿತ್ಸೆ ನೀಡಲಾರಂಬಿಸಿದ್ದಾರೆ. ನಂತರ ವೃದ್ಧೆಗೆ ಕೋವಿಡ್ ಟೆಸ್ಟ್ ನೆಡೆಸಲಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಂಕು ದೃಢವಾದ ಮಾರನೇ ದಿನವೇ ವೃದ್ಧೆ ಸಾವನ್ನಪ್ಪಿದ್ದು ಈಗ ವೃದ್ಧೆಗೆ ಚಿಕಿತ್ಸೆ ನೀಡಿದ ವೈದ್ಯ, ನರ್ಸ್, ಟೆಕ್ನಿಕಲ್ ಸಿಬ್ಬಂದಿ ಸೇರಿ 6 ಜನ ಸಿಬ್ಬಂದಿ ವರ್ಗದವರಿಗೂ ಹಾಗೂ ಮೂವರು  ಪಕ್ಕದ ಬೆಡ್ ನಲ್ಲಿದ್ದವರಿಗೂ ಸೋಂಕು ತಗುಲಿರುವುದು ಖಚಿತವಾಗಿದೆ.

ವೃದ್ಧೆ ಚಿಕಿತ್ಸೆಗೊಳಗಾಗಿದ್ದ ಬೆಡ್ ನ ಪಕ್ಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 35 ವರ್ಷದ ವ್ಯಕ್ತಿಯೂ ಕಳೆದ ರಾತ್ರಿ ಸಾವನ್ನಪ್ಪಿದ್ದು ಈಗ ಕ್ರಿಮ್ಸ್ ಜಿಲ್ಲಾಸ್ಪತ್ರೆಯನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ತುರ್ತುಚಿಕಿತ್ಸೆ, ಹೆರಿಗೆ ವಿಭಾಗಗಳನ್ನು ಹೊರತುಪಡಿಸಿ, ಐಸಿಯು, ಎಂಐಸಿಯು ಸೇರಿದಂತೆ ಬೇರೆಲ್ಲಾ ವಿಭಾಗಗಳನ್ನು ಸೀಲ್ ಡೌನ್ ಮಾಡಲಾಗಿದೆಯೆಂದು ಕಾರವಾರ ಕ್ರಿಮ್ಸ್ ನಿರ್ದೇಶಕ ಗಜಾನನ ನಾಯಕ್ ಟಿವಿ9 ಗೆ ತಿಳಿಸಿದ್ದಾರೆ.

Published On - 3:01 pm, Sat, 11 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us