AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾ ಗೋಲ್ಡ್​ ಪ್ಯಾಲೆಸ್: ಪತಿರಾಯ ಸಿನಿ ನಿರ್ಮಾಪಕ! ACB ತನಿಖೆಯಿಂದ ಹೊರಬಂದ ಸತ್ಯವೇನು?

ಬೆಂಗಳೂರು: KAS ಅಧಿಕಾರಿ ಡಾ. ಸುಧಾ ನಿವಾಸದ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಬಗೆದಷ್ಟೂ ದಾಖಲೆಗಳು ಸಿಗುತ್ತಿವೆ. ಡಾ. ಸುಧಾ ಆಸ್ತಿಗಳ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಅಧಿಕಾರಿಯ ಸ್ನೇಹಿತರ ಮನೆಗಳ ಮೇಲೂ ದಾಳಿ ಮಾಡಿರುವುದಲ್ಲದೆ ಸುಧಾ ಅವರ ಪತಿರಾಯ ಸ್ಟ್ರೊನಿ ಫಾಯಿಸ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಹೆಂಡತಿಯ ಅಕ್ರಮ ಸಂಪಾದನೆಯೇ ಪತಿರಾಯನ ಚಿತ್ರ ನಿರ್ಮಾಣಕ್ಕೆ ‘ಬಂಡವಾಳ’! ವಿಚಾರಣೆಯ ವೇಳೆ ಸುಧಾ ಅವರ ಪತಿಯ ಬೃಹತ್​ ಅಕ್ರಮಗಳು ಒಂದೊಂದಾಗಿ ಹೊರಬರುತ್ತಿವೆ. ಸ್ಟ್ರೊನಿ ಫಾಯಿಸ್ ಸ್ಯಾಂಡಲ್ವುಡ್ […]

ಸುಧಾ ಗೋಲ್ಡ್​ ಪ್ಯಾಲೆಸ್: ಪತಿರಾಯ ಸಿನಿ ನಿರ್ಮಾಪಕ! ACB ತನಿಖೆಯಿಂದ ಹೊರಬಂದ ಸತ್ಯವೇನು?
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Nov 07, 2020 | 11:53 AM

Share

ಬೆಂಗಳೂರು: KAS ಅಧಿಕಾರಿ ಡಾ. ಸುಧಾ ನಿವಾಸದ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಬಗೆದಷ್ಟೂ ದಾಖಲೆಗಳು ಸಿಗುತ್ತಿವೆ. ಡಾ. ಸುಧಾ ಆಸ್ತಿಗಳ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಅಧಿಕಾರಿಯ ಸ್ನೇಹಿತರ ಮನೆಗಳ ಮೇಲೂ ದಾಳಿ ಮಾಡಿರುವುದಲ್ಲದೆ ಸುಧಾ ಅವರ ಪತಿರಾಯ ಸ್ಟ್ರೊನಿ ಫಾಯಿಸ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಹೆಂಡತಿಯ ಅಕ್ರಮ ಸಂಪಾದನೆಯೇ ಪತಿರಾಯನ ಚಿತ್ರ ನಿರ್ಮಾಣಕ್ಕೆ ‘ಬಂಡವಾಳ’! ವಿಚಾರಣೆಯ ವೇಳೆ ಸುಧಾ ಅವರ ಪತಿಯ ಬೃಹತ್​ ಅಕ್ರಮಗಳು ಒಂದೊಂದಾಗಿ ಹೊರಬರುತ್ತಿವೆ. ಸ್ಟ್ರೊನಿ ಫಾಯಿಸ್ ಸ್ಯಾಂಡಲ್ವುಡ್ ನಿರ್ಮಾಪಕನಾಗಿದ್ದು ಸುಧಾ ಕ್ರಿಯೇಷನ್ ಬ್ಯಾನರ್ ಅಡಿ ಚಿತ್ರ ನಿರ್ಮಾಣ ಮಾಡುತ್ತಿದ್ದ. ನಿರ್ಮಾಣದ ಜೊತೆಗೆ ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ವ್ಯವಹಾರ ನಡೆಸುತ್ತಿದ ಸುಧಾ ಪತಿರಾಯ, ಹೆಂಡತಿ ಅಕ್ರಮವಾಗಿ ಸಂಪಾದಿಸಿದ್ದ ಆಸ್ತಿಯನ್ನೇ ಬಂಡವಾಳ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಹೆಂಡತಿಯ ನೌಕರಿ ಸಹಾಯಕ್ಕೆ ಬಂದಿತ್ತು.. ಬೆಂಗಳೂರು ಅಂತರಾಷ್ಟೀಯ ವಿಮಾನ ನಿಲ್ದಾಣ ತಲೆಯೆತ್ತುತ್ತಿದ್ದಂತೆ ಅಲ್ಲಿನ ಭೂಮಿಯ ಬೆಲೆ ವಿಮಾನದಂತೆ ಆಗಸಕ್ಕೆ ಚಿಮ್ಮಿತು. ಸುತ್ತಮುತ್ತಲಿನ ಜಾಗಕ್ಕೆ ಬಂಗಾರದ ಬೆಲೆ ಬಂದಿತು. ಇನ್ನು ಭೂಸ್ವಾಧೀನಾಧಿಕಾರಿಯಾಗಿ ಅಲ್ಲಿ ಅಧಿಕಾರ ಪ್ರತಿಷ್ಠಾಪಿಸಿಬಿಟ್ಟರೆ ಅದು ಸಂಪದ್ಭರಿತ ಜಾಗವೇ ಆಗಿಬಿಡುತ್ತದೆ. ಅದನ್ನೇ ಬಂಡವಾಳ ಮಾಡಿಕೊಂಡು ಹೆಂಡತಿ ಅಕ್ರಮ ಸಂಪತ್ತು ಗುಡ್ಡೆ ಹಾಕತೊಡಗಿದ್ದರು. ಅದನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿದ್ದ ಸ್ಟ್ರೊನಿ ಫಾಯಿಸ್ ರಿಯಲ್ ಎಸ್ಟೇಟ್ ದಂಧೆಗೆ ಇಳಿದಿದ್ದ. ರಿಯಲ್ ಎಸ್ಟೇಟ್ ದಂಧೆಯಲ್ಲಿ ಕೋಟಿ ಕೋಟಿ ಬಾಚುತ್ತಿದ್ದ ಸ್ಟ್ರೊನಿ ಫಾಯಿಸ್​ಗೆ ಹೆಂಡತಿಯ ನೌಕರಿ ಸಹಾಯಕ್ಕೆ ಬಂದಿತ್ತು.

ಯಲಹಂಕ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ. ಸುಧಾ ಮನೆ ACB ರೇಡ್; ಮನೆಯಲ್ಲಿ ‘ಚಿನ್ನದ ಗಣಿ’

Published On - 11:33 am, Sat, 7 November 20

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ