AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ ಸಂಸ್ಕೃತಿ ಅಲ್ಲ -ಜಮೀರ್, ಸೌಮ್ಯಾಗೆ ಕೋಳಿವಾಡ ಟಾಂಗ್

ಬೆಂಗಳೂರು: ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ನ ಸಂಸ್ಕೃತಿಯಲ್ಲ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಎಂದು ಬೆಂಗಳೂರಿನಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಕೆಲ ಕಾಂಗ್ರೆಸ್‌ ನಾಯಕರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಮಾಡಿ. ಒಂದು ಕಡೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಜಮೀರ್ ಹೇಳ್ತಾರೆ. ಮತ್ತೊಂದು ಕಡೆ ಡಿಕೆಶಿ ಮುಂದಿನ ಸಿಎಂ ಎಂದು ‘ಕೈ’ ಶಾಸಕಿ ಸೌಮ್ಯಾರೆಡ್ಡಿ, ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ […]

ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ ಸಂಸ್ಕೃತಿ ಅಲ್ಲ -ಜಮೀರ್, ಸೌಮ್ಯಾಗೆ ಕೋಳಿವಾಡ ಟಾಂಗ್
ಆಯೇಷಾ ಬಾನು
|

Updated on:Oct 25, 2020 | 2:09 PM

Share

ಬೆಂಗಳೂರು: ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ನ ಸಂಸ್ಕೃತಿಯಲ್ಲ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಎಂದು ಬೆಂಗಳೂರಿನಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಕೆಲ ಕಾಂಗ್ರೆಸ್‌ ನಾಯಕರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಮಾಡಿ. ಒಂದು ಕಡೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಜಮೀರ್ ಹೇಳ್ತಾರೆ. ಮತ್ತೊಂದು ಕಡೆ ಡಿಕೆಶಿ ಮುಂದಿನ ಸಿಎಂ ಎಂದು ‘ಕೈ’ ಶಾಸಕಿ ಸೌಮ್ಯಾರೆಡ್ಡಿ, ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಹೇಳ್ತಿದ್ದಾರೆ. ಇವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು. ಪಕ್ಷದ ಹಿತಕ್ಕೆ ಧಕ್ಕೆ ತರುವ ಹೇಳಿಕೆ ನೀಡಿದರೆ ನೋಟಿಸ್ ನೀಡಬೇಕು. ಛೋಟಾ ಛೋಟಾ ನಾಯಕರೆಲ್ಲಾ ಈಗ ಮಾತಾಡುತ್ತಿದ್ದಾರೆ. ಶಿಸ್ತುಕ್ರಮ ಸಮಿತಿಯಲ್ಲಿ ನಾನೂ ಇದ್ದೇನೆ, ಕ್ರಮಕೈಗೊಳ್ತೇನೆ. ಇಂತಹ ಹೇಳಿಕೆಗಳು ಕೊಟ್ಟವರಿಗೆ ಕೂಡಲೇ ಸಭೆ ಕರೆದು ನೋಟಿಸ್ ನೀಡುತ್ತೇವೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಎಲ್ಲವನ್ನೂ ಗಮನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರ ಹೇಳಿಕೆಯನ್ನು ಟೀಕಿಸಿದ್ದಾರೆ.

ಇನ್ನು ಮುಖ್ಯಮಂತ್ರಿ ಆಗುವ ಯೋಗ್ಯತೆ ಉತ್ತರಕರ್ನಾಟಕದ ಹಲವು ನಾಯಕರಿಗೆ ಇದೆ. ಉತ್ತರ ಕರ್ನಾಟಕ ಭಾಗ ಸರಿಯಾಗಿ ಅಭಿವೃದ್ಧಿಯಾಗುತ್ತಿಲ್ಲ. ಅವಕಾಶವಿದ್ದರೆ ಉತ್ತರ ಕರ್ನಾಟಕದವರನ್ನು ಸಿಎಂ ಮಾಡಲಿ. ಆಗ ಉತ್ತರ ಕರ್ನಾಟಕ ಅಭಿವೃದ್ಧಿಯಾಗಲಿದೆ ಎಂದು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದರು.

ಮುಂದಿನ ಸಿಎಂ ಯಾರು ಎಂಬುದು ಈಗ ಅಪ್ರಸ್ತುತ: ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಕೋಳಿವಾಡ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಶಿಸ್ತುಪಾಲನಾ ಸಮಿತಿ ಈ ಬಗ್ಗೆ ಕ್ರಮ ಕೈಗೊಳ್ಳುತ್ತದೆ. ಅದು ಅದರ ಜವಾಬ್ದಾರಿ ನಿರ್ವಹಿಸುತ್ತದೆ. ಮುಂದಿನ ಸಿಎಂ ಯಾರು ಎಂಬುದು ಈಗ ಅಪ್ರಸ್ತುತ. ನಾವೆಲ್ಲ ಶಾಸಕಾಂಗ ಪಕ್ಷದ ನಾಯಕರ ಜೊತೆ ಇದ್ದೇವೆ. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ಬರಲಿ. ಸಿಎಂ ಯಾರೆಂದು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆಸಿದ್ದಾರೆ.

Published On - 2:06 pm, Sun, 25 October 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​