AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್​ ಸರಣಿಗೂ ಮುನ್ನವೇ ವಿರಾಟ್​ ಕೊಹ್ಲಿಗೆ ನೋಟಿಸ್​: ಸಂಕಷ್ಟದಲ್ಲಿ ಟೀಂ ಇಂಡಿಯಾ ನಾಯಕ

ಕೇರಳ ಹೈಕೋರ್ಟ್​ ಬುಧವಾರ ಕೊಹ್ಲಿಗೆ ನೋಟಿಸ್​ ನೀಡಿದೆ. ಫೆಬ್ರವರಿ 5ರಿಂದ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​​ ಆರಂಭಗೊಳ್ಳಲಿದೆ. ಅದಕ್ಕೂ ಮೊದಲೇ ಕೊಹ್ಲಿಗೆ ನೋಟಿಸ್​ ಜಾರಿಯಾಗಿದೆ.

ಇಂಗ್ಲೆಂಡ್​ ಸರಣಿಗೂ ಮುನ್ನವೇ ವಿರಾಟ್​ ಕೊಹ್ಲಿಗೆ ನೋಟಿಸ್​: ಸಂಕಷ್ಟದಲ್ಲಿ ಟೀಂ ಇಂಡಿಯಾ ನಾಯಕ
ವಿರಾಟ್​ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Jan 27, 2021 | 6:12 PM

Share

ತಿರುವನಂತಪುರಂ: ಫೆಬ್ರವರಿ 5ರಿಂದ ಇಂಗ್ಲೆಂಡ್​​​ ವಿರುದ್ಧದ ಟೆಸ್ಟ್​​​ ಆರಂಭಗೊಳ್ಳಲಿದೆ. ಇದಕ್ಕೂ ಮೊದಲೇ ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿಗೆ ನೋಟಿಸ್​ ಜಾರಿಯಾಗಿದೆ.

ಕೇರಳ ಹೈಕೋರ್ಟ್​ ಬುಧವಾರ ಕೊಹ್ಲಿಗೆ ನೋಟಿಸ್​ ನೀಡಿದೆ. ಆನ್​ಲೈನ್​ ರಮ್ಮಿಯ ವ್ಯಸನಿಯಾಗಲು ಬ್ರ್ಯಾಂಡ್​ ಅಂಬಾಸಿಡರ್​ಗಳು ಕಾರಣ ಎಂದು ಆರೋಪಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಆಗಿತ್ತು. ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ನಟರಾದ ತಮನ್ನಾ ಮತ್ತು ಅಜು ವರ್ಗೀಸ್ ಅವರಿಗೆ ನೋಟಿಸ್​ ನೀಡಿದೆ. ಕೊಹ್ಲಿ, ತಮನ್ನಾ ಮತ್ತು ವರ್ಗೀಸ್ ಆನ್‌ಲೈನ್ ರಮ್ಮಿಯ ಬ್ರ್ಯಾಂಡ್ ಅಂಬಾಸಿಡರ್​ಗಳಾಗಿದ್ದಾರೆ.

ಹೈಕೋರ್ಟ್ ರಾಜ್ಯ ಸರ್ಕಾರಕ್ಕೂ ನೋಟಿಸ್ ಜಾರಿಗೊಳಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೋರಿದೆ. ಆನ್‌ಲೈನ್​ಲ್ಲಿ ರಮ್ಮಿಯಂತಹ ಆಟಗಳನ್ನು ಆಡುವ ಮೂಲಕ ಅನೇಕರು ಅಪಾರ ಪ್ರಮಾಣದ ಹಣ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಅದನ್ನು ನಿಷೇಧಿಸಬೇಕು ಎಂದು ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ತಿರುವನಂತಪುರದ ಕುಟ್ಟಿಚಾಲ್​ನಲ್ಲಿ 27 ವರ್ಷದ ವಿನೀತ್​ ಎಂಬುವವರು ಆನ್​ಲೈನ್​ ರಮ್ಮಿಯಲ್ಲಿ 21 ಲಕ್ಷ ಕಳೆದುಕೊಂಡಿದ್ದರು. ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅರ್ಜಿದಾರರು ಈ ಪ್ರಕರಣವನ್ನು ಉಲ್ಲೇಖಿಸಿದ್ದಾರೆ.

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

Published On - 6:07 pm, Wed, 27 January 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್