AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್​ ಸರಣಿಗೂ ಮುನ್ನವೇ ವಿರಾಟ್​ ಕೊಹ್ಲಿಗೆ ನೋಟಿಸ್​: ಸಂಕಷ್ಟದಲ್ಲಿ ಟೀಂ ಇಂಡಿಯಾ ನಾಯಕ

ಕೇರಳ ಹೈಕೋರ್ಟ್​ ಬುಧವಾರ ಕೊಹ್ಲಿಗೆ ನೋಟಿಸ್​ ನೀಡಿದೆ. ಫೆಬ್ರವರಿ 5ರಿಂದ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​​ ಆರಂಭಗೊಳ್ಳಲಿದೆ. ಅದಕ್ಕೂ ಮೊದಲೇ ಕೊಹ್ಲಿಗೆ ನೋಟಿಸ್​ ಜಾರಿಯಾಗಿದೆ.

ಇಂಗ್ಲೆಂಡ್​ ಸರಣಿಗೂ ಮುನ್ನವೇ ವಿರಾಟ್​ ಕೊಹ್ಲಿಗೆ ನೋಟಿಸ್​: ಸಂಕಷ್ಟದಲ್ಲಿ ಟೀಂ ಇಂಡಿಯಾ ನಾಯಕ
ವಿರಾಟ್​ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Jan 27, 2021 | 6:12 PM

Share

ತಿರುವನಂತಪುರಂ: ಫೆಬ್ರವರಿ 5ರಿಂದ ಇಂಗ್ಲೆಂಡ್​​​ ವಿರುದ್ಧದ ಟೆಸ್ಟ್​​​ ಆರಂಭಗೊಳ್ಳಲಿದೆ. ಇದಕ್ಕೂ ಮೊದಲೇ ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿಗೆ ನೋಟಿಸ್​ ಜಾರಿಯಾಗಿದೆ.

ಕೇರಳ ಹೈಕೋರ್ಟ್​ ಬುಧವಾರ ಕೊಹ್ಲಿಗೆ ನೋಟಿಸ್​ ನೀಡಿದೆ. ಆನ್​ಲೈನ್​ ರಮ್ಮಿಯ ವ್ಯಸನಿಯಾಗಲು ಬ್ರ್ಯಾಂಡ್​ ಅಂಬಾಸಿಡರ್​ಗಳು ಕಾರಣ ಎಂದು ಆರೋಪಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಆಗಿತ್ತು. ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ನಟರಾದ ತಮನ್ನಾ ಮತ್ತು ಅಜು ವರ್ಗೀಸ್ ಅವರಿಗೆ ನೋಟಿಸ್​ ನೀಡಿದೆ. ಕೊಹ್ಲಿ, ತಮನ್ನಾ ಮತ್ತು ವರ್ಗೀಸ್ ಆನ್‌ಲೈನ್ ರಮ್ಮಿಯ ಬ್ರ್ಯಾಂಡ್ ಅಂಬಾಸಿಡರ್​ಗಳಾಗಿದ್ದಾರೆ.

ಹೈಕೋರ್ಟ್ ರಾಜ್ಯ ಸರ್ಕಾರಕ್ಕೂ ನೋಟಿಸ್ ಜಾರಿಗೊಳಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೋರಿದೆ. ಆನ್‌ಲೈನ್​ಲ್ಲಿ ರಮ್ಮಿಯಂತಹ ಆಟಗಳನ್ನು ಆಡುವ ಮೂಲಕ ಅನೇಕರು ಅಪಾರ ಪ್ರಮಾಣದ ಹಣ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಅದನ್ನು ನಿಷೇಧಿಸಬೇಕು ಎಂದು ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ತಿರುವನಂತಪುರದ ಕುಟ್ಟಿಚಾಲ್​ನಲ್ಲಿ 27 ವರ್ಷದ ವಿನೀತ್​ ಎಂಬುವವರು ಆನ್​ಲೈನ್​ ರಮ್ಮಿಯಲ್ಲಿ 21 ಲಕ್ಷ ಕಳೆದುಕೊಂಡಿದ್ದರು. ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅರ್ಜಿದಾರರು ಈ ಪ್ರಕರಣವನ್ನು ಉಲ್ಲೇಖಿಸಿದ್ದಾರೆ.

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

Published On - 6:07 pm, Wed, 27 January 21

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ