ತಲಕಾವೇರಿಯಲ್ಲಿ ಕೇರಳದವರ ಪುಂಡಾಟ: ಪ್ರಶ್ನಿಸಲು ಹೋದ ಭಕ್ತನ ಮೇಲೆ ಮನಬಂದಂತೆ ಹಲ್ಲೆ

ಕೊಡಗು: ಮಾಸ್ಕ್ ಹಾಕುವಂತೆ ಹೇಳಿದಕ್ಕೆ ರೋಚಿಗೆದ್ದ ಯುವಕರ ಗುಂಪು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ತಡ ರಾತ್ರಿ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ನಡೆದಿದೆ. ಪ್ರವಾಸಕ್ಕೆಂದು ಬಂದಿದ್ದ ಕೇರಳದ ಯುವಕರು ಮಾಸ್ಕ್​ ಧರಿಸಿರಲಿಲ್ಲ. ಹೀಗಾಗಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇದನ್ನು ಕೇಳಲು ಹೋದ ಭಕ್ತಾಧಿ ರಾಕೇಶ್ ದೇವಯ್ಯ ಅವರ ಕೈ ಬೆರಳನ್ನು ಕೇರಳದ ಪುಂಡರು ಮುರಿದಿದ್ದಾರೆ. ಈ ನೀಚರು ಹುಡುಗಿಯರನ್ನು ಚುಡಾಯಿಸುತ್ತಿದ್ದರು.. […]

ತಲಕಾವೇರಿಯಲ್ಲಿ ಕೇರಳದವರ ಪುಂಡಾಟ: ಪ್ರಶ್ನಿಸಲು ಹೋದ ಭಕ್ತನ ಮೇಲೆ ಮನಬಂದಂತೆ ಹಲ್ಲೆ

Updated on: Nov 16, 2020 | 11:05 AM

ಕೊಡಗು: ಮಾಸ್ಕ್ ಹಾಕುವಂತೆ ಹೇಳಿದಕ್ಕೆ ರೋಚಿಗೆದ್ದ ಯುವಕರ ಗುಂಪು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ತಡ ರಾತ್ರಿ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ನಡೆದಿದೆ.

ಪ್ರವಾಸಕ್ಕೆಂದು ಬಂದಿದ್ದ ಕೇರಳದ ಯುವಕರು ಮಾಸ್ಕ್​ ಧರಿಸಿರಲಿಲ್ಲ. ಹೀಗಾಗಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇದನ್ನು ಕೇಳಲು ಹೋದ ಭಕ್ತಾಧಿ ರಾಕೇಶ್ ದೇವಯ್ಯ ಅವರ ಕೈ ಬೆರಳನ್ನು ಕೇರಳದ ಪುಂಡರು ಮುರಿದಿದ್ದಾರೆ.

ಈ ನೀಚರು ಹುಡುಗಿಯರನ್ನು ಚುಡಾಯಿಸುತ್ತಿದ್ದರು..
ಅಷ್ಟೇ ಅಲ್ಲದೆ ಈ ನೀಚರು ಹುಡುಗಿಯರನ್ನು ಚುಡಾಯಿಸುತ್ತಿದ್ದರು ಎಂಬ ಆರೋಪವು ಸಹ ಕೇಳಿಬಂದಿದೆ. ಇದರ ಬಗ್ಗೆ ಕ್ಷೇತ್ರದ ಸೆಕ್ಯೂರಿಟಿ ಸಿಬ್ಬಂದಿ ಎಚ್ಚರಿಕೆ ನೀಡಿದರು ಸಹ ಪುಂಡರು ತಲೆ ಕೆಡಿಸಿಕೊಂಡಿಲ್ಲ. ಕ್ಷೇತ್ರಕ್ಕೆ ಬಂದಿದ್ದ ದಕ್ಷಿಣ ಕೊಡಗಿನ ಹಲವು ಭಕ್ತರಿಂದಲೂ ಯುವಕರಿಗೆ ಎಚ್ಚರಿಕೆ ನೀಡಿದರು ಕ್ಯಾರೆ ಎಂದಿಲ್ಲ.

ಬುದ್ದಿವಾದ ಹೇಳಲು ಬಂದ ಸ್ಥಳೀಯರ ಮೇಲೆ ಈ ಪುಂಡರ ಹಿಂಡು ಹಲ್ಲೆಗೆ ಮುಂದಾಗಿದೆ. ಇವರ ಈ ವರ್ತನೆ ಕಂಡ ಸ್ಥಳೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡಿ. ದಾಂದಲೆ ನಿರತ ಯುವಕರನ್ನು ವಶಕ್ಕೆ ಪಡೆದ ಪೊಲೀಸರು, ತಡರಾತ್ರಿ ಹತ್ತು ಮಂದಿ ಪುಂಡರ ವಿರುದ್ದ ಕೇಸ್ ದಾಖಲಿಸಿದ್ದಾರೆ.

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us