ಕೇರಳದಲ್ಲೂ ಸಿಎಂ ಯಡಿಯೂರಪ್ಪಗೆ ತಟ್ಟಿದ ಪ್ರತಿಭಟನೆ ಬಿಸಿ

ಕೇರಳ: ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೇರಳದಲ್ಲಿ ಪ್ರತಿಭಟನೆಯ ಬಿಸಿ ತಟ್ಟಿದೆ. ತಿರುವನಂತಪುರದ ತಂಪಾನೂರಿನಲ್ಲಿರುವ ಅನಂತ ಪದ್ಮನಾಭ ಸ್ವಾಮಿ ದೇವರ ದರ್ಶನಕ್ಕಾಗಿ ತೆರಳಿದ್ದ ವೇಳೆ ಸಿಎಂ ಯಡಿಯೂರಪ್ಪಗೆ ಕೇರಳ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಿದ್ದಾರೆ. ಸಿಎಎ ಮತ್ತು ಮಂಗಳೂರಿನಲ್ಲಿ ನಡೆದ ಫೈರಿಂಗ್ ವಿರೋಧಿಸಿ ಸಿಎಂ ವಿರುದ್ಧ ಧರಣಿಗೆ ಇಳಿದಿದ್ದಾರೆ. ಪ್ರತಿಭಟನಾನಿರತ 8 ಕೇರಳ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಎಂಟು ಗಂಟೆ ವೇಳೆಗೆ ಈ ಘಟನೆ ನಡೆದಿದೆ.

ಕೇರಳದಲ್ಲೂ ಸಿಎಂ ಯಡಿಯೂರಪ್ಪಗೆ ತಟ್ಟಿದ ಪ್ರತಿಭಟನೆ ಬಿಸಿ
ಸಾಧು ಶ್ರೀನಾಥ್​

Updated on: Dec 24, 2019 | 11:01 AM

ಕೇರಳ: ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೇರಳದಲ್ಲಿ ಪ್ರತಿಭಟನೆಯ ಬಿಸಿ ತಟ್ಟಿದೆ. ತಿರುವನಂತಪುರದ ತಂಪಾನೂರಿನಲ್ಲಿರುವ ಅನಂತ ಪದ್ಮನಾಭ ಸ್ವಾಮಿ ದೇವರ ದರ್ಶನಕ್ಕಾಗಿ ತೆರಳಿದ್ದ ವೇಳೆ ಸಿಎಂ ಯಡಿಯೂರಪ್ಪಗೆ ಕೇರಳ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಿದ್ದಾರೆ.

ಸಿಎಎ ಮತ್ತು ಮಂಗಳೂರಿನಲ್ಲಿ ನಡೆದ ಫೈರಿಂಗ್ ವಿರೋಧಿಸಿ ಸಿಎಂ ವಿರುದ್ಧ ಧರಣಿಗೆ ಇಳಿದಿದ್ದಾರೆ. ಪ್ರತಿಭಟನಾನಿರತ 8 ಕೇರಳ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಎಂಟು ಗಂಟೆ ವೇಳೆಗೆ ಈ ಘಟನೆ ನಡೆದಿದೆ.

Published On - 7:24 am, Tue, 24 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us