AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಥಳೀಯರೇ, ಸ್ಥಳ ಪರಿಚಯ ಇದ್ದವರಿಂದಲೇ ಕುಕೃತ್ಯ! ಬೇರೆ ಕಡೆಯಿಂದ ಬಂದವರದ್ದಲ್ಲ’

ಬೆಂಗಳೂರು: ಫೇಸ್​ಬುಕ್​ ಜ್ವಾಲಾಗ್ನಿಗೆ ಬೆಂಗಳೂರಿನ ಒಂದು ಭಾಗ ನಿನ್ನೆ ರಾತ್ರಿ ದಹದಹಿಸಿದೆ. ಹಿಂಸಾಚಾರಕ್ಕೆ ತಹತಹಿಸುತ್ತಿದ್ದವರ ಪೈಕಿ ಮೂವರು ಪೊಲೀಸರ ಬಂದೂಕಿಗೆ ಭಸ್ಮವಾಗಿದ್ದಾರೆ. ಈ ಮಧ್ಯೆ, ಹಿಂಸಾಚಾರದಲ್ಲಿ ಭಾಗವಹಿಸಿದ್ದವರೆಲ್ಲ ಹೊರಗಿನಿಂದ ಬಂದವರು ಎಂಬ ಥಿಯರಿ ಹರಿಯ ಬಿಡಲಾಗಿದೆ. ಆದ್ರೆ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದ ಗಲಾಟೆ ಯೋಜಿತವಾಗಿದ್ದು, ಪೊಲೀಸರನ್ನೇ ಟಾರ್ಗೆಟ್​ ಮಾಡಿ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ. ಇದು ಸ್ಥಳೀಯರೇ, ಸ್ಥಳ ಪರಿಚಯ ಇರುವವರದ್ದೇ ಕೃತ್ಯ ಎಂದು ತಿಳಿದುಬಂದಿದೆ. ಇದಕ್ಕೆ ಪೂರಕವೆಂಬಂತೆ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿರುವ […]

‘ಸ್ಥಳೀಯರೇ, ಸ್ಥಳ ಪರಿಚಯ ಇದ್ದವರಿಂದಲೇ ಕುಕೃತ್ಯ! ಬೇರೆ ಕಡೆಯಿಂದ ಬಂದವರದ್ದಲ್ಲ’
ಸಾಧು ಶ್ರೀನಾಥ್​
|

Updated on:Aug 12, 2020 | 10:36 AM

Share

ಬೆಂಗಳೂರು: ಫೇಸ್​ಬುಕ್​ ಜ್ವಾಲಾಗ್ನಿಗೆ ಬೆಂಗಳೂರಿನ ಒಂದು ಭಾಗ ನಿನ್ನೆ ರಾತ್ರಿ ದಹದಹಿಸಿದೆ. ಹಿಂಸಾಚಾರಕ್ಕೆ ತಹತಹಿಸುತ್ತಿದ್ದವರ ಪೈಕಿ ಮೂವರು ಪೊಲೀಸರ ಬಂದೂಕಿಗೆ ಭಸ್ಮವಾಗಿದ್ದಾರೆ. ಈ ಮಧ್ಯೆ, ಹಿಂಸಾಚಾರದಲ್ಲಿ ಭಾಗವಹಿಸಿದ್ದವರೆಲ್ಲ ಹೊರಗಿನಿಂದ ಬಂದವರು ಎಂಬ ಥಿಯರಿ ಹರಿಯ ಬಿಡಲಾಗಿದೆ. ಆದ್ರೆ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದ ಗಲಾಟೆ ಯೋಜಿತವಾಗಿದ್ದು, ಪೊಲೀಸರನ್ನೇ ಟಾರ್ಗೆಟ್​ ಮಾಡಿ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ. ಇದು ಸ್ಥಳೀಯರೇ, ಸ್ಥಳ ಪರಿಚಯ ಇರುವವರದ್ದೇ ಕೃತ್ಯ ಎಂದು ತಿಳಿದುಬಂದಿದೆ.

ಇದಕ್ಕೆ ಪೂರಕವೆಂಬಂತೆ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು ನಿಗದಿತ ಸಮುದಾಯದ ಮನೆ, ಅಂಗಡಿಗಳಿಗೆ ಹಾನಿ ಮಾಡಿಲ್ಲ. ಕೇವಲ ಪೊಲೀಸರು ಮತ್ತು ಅನ್ಯ ಸಮುದಾಯದವರನ್ನು ಗುರಿಯಾಗಿಸಿಕೊಂಡು ಗಲಭೆ ನಡೆಸಿದ್ದಾರೆ. ವಾಹನಗಳಿಗೆ ಬೆಂಕಿ ಹಚ್ಚಿದ್ದ ರಸ್ತೆಯಲ್ಲಿ ಸುತ್ತಮುತ್ತಲ ಮನೆಗಳಿಗೆ ಹಾನಿ ಮಾಡಿಲ್ಲ. ಹೀಗಾಗಿ ಸ್ಥಳೀಯರೇ, ಸ್ಥಳ ಪರಿಚಯ ಇರುವವರಿಂದಲೇ ಕೃತ್ಯ ಎಂಬ ತರ್ಕ ಪೊಲೀಸ್​ ವಲಯದಿಂದ ಇದೀಗ ಕೇಳಿಬರುತ್ತಿದೆ.

ಈ ಮಧ್ಯೆ, ಘಟನೆಯ ತೀವ್ರತೆಗೆ ನಿನ್ನೆ ಪೊಲೀಸರೇ ಆತಂಕಕ್ಕೆ ಸಿಲುಕಿದ್ರು. ನಮ್ಮ ಜೀವ ಉಳಿದಿದ್ದೇ ಹೆಚ್ಚು ಅಂತಿದ್ದಾರೆ ಪೊಲೀಸರು. ಡಿಜೆ ಹಳ್ಳಿ ಸ್ಟೇಷನ್ ಮುಂಭಾಗದ ಪೊಲೀಸ್ ವಾಹನಗಳಿಗೆ ಹತ್ತಿದ ಬೆಂಕಿ ಇನ್ನೂ ಆರಿಲ್ಲ.

Published On - 10:18 am, Wed, 12 August 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ