AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ರಿಲೀಸ್ ದಿನವೇ ಅಭಿಮಾನಿಗಳಿಗೆ ಸಿಕ್ತು ಎರಡೆರಡು ಸರ್​ಪ್ರೈಸ್

‘ಮೆಹಬೂಬಾ..’ ಹಾಡು ರಾಕಿ ಹಾಗೂ ರೀನಾ ಪಾತ್ರಗಳ ಮಧ್ಯೆ ಬರುವ ಲವ್ ಸಾಂಗ್. ಈ ಹಾಡಿಗೆ ಥಿಯೇಟರ್​ನಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಸಿನಿಮಾ ರಿಲೀಸ್ ದಿನವೇ ಈ ಹಾಡು ರಿಲೀಸ್ ಆಗಿದೆ.

‘ಕೆಜಿಎಫ್ 2’ ರಿಲೀಸ್ ದಿನವೇ ಅಭಿಮಾನಿಗಳಿಗೆ ಸಿಕ್ತು ಎರಡೆರಡು ಸರ್​ಪ್ರೈಸ್
ಸಲಾರ್-ಕೆಜಿಎಫ್ 2
TV9 Web
| Edited By: |

Updated on: Apr 14, 2022 | 6:59 PM

Share

‘ಕೆಜಿಎಫ್ ಚಾಪ್ಟರ್ 2’ (KGF Chapter 2) ಸಿನಿಮಾ ತೆರೆಗೆ ಬಂದಿದೆ. ಚಿತ್ರದ ಅಬ್ಬರ ಜೋರಾಗಿದೆ. ಮೊದಲ ದಿನ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬ ಲೆಕ್ಕಾಚಾರವೂ ಜೋರಾಗಿದೆ. ಈ ಮಧ್ಯೆ, ‘ಕೆಜಿಎಫ್ 2’ ನಿರ್ಮಾಣ ಸಂಸ್ಥೆ ಹೊಂಬಾಳೆ ಕಡೆಯಿಂದ ಸರ್​ಪ್ರೈಸ್ ಒಂದು ಸಿಕ್ಕಿದೆ. ಈ ಚಿತ್ರದ ‘ಮೆಹಬೂಬಾ..’ ಹಾಡಿನ (Mehabooba Song) ಆಡಿಯೋ ಟ್ರ್ಯಾಕ್​ಅನ್ನು ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಜತೆಗೆ ‘ಸಲಾರ್’ ಸಿನಿಮಾದ (Salar Movie) ಕುರಿತು ಹೊಸ ಅಪ್​ಡೇಟ್ ಒಂದು ಸಿಕ್ಕಿದೆ.

‘ಮೆಹಬೂಬಾ..’ ಹಾಡು ರಾಕಿ ಹಾಗೂ ರೀನಾ ಪಾತ್ರಗಳ ಮಧ್ಯೆ ಬರುವ ಲವ್ ಸಾಂಗ್. ಈ ಹಾಡಿಗೆ ಥಿಯೇಟರ್​ನಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಸಿನಿಮಾ ರಿಲೀಸ್ ದಿನವೇ ಈ ಹಾಡು ರಿಲೀಸ್ ಆಗಿದೆ. ಸಂಜೆ ವೇಳೆಗೆ ಚಿತ್ರದ ಆಡಿಯೋ ಟ್ರ್ಯಾಕ್ ರಿಲೀಸ್ ಆಗಿದ್ದು, ಅಭಿಮಾನಿಗಳು ಫುಲ್​ ಖುಷ್ ಆಗಿದ್ದಾರೆ. ‘ಕೆಜಿಎಫ್ 2’ ಟೀಂನಿಂದ ಬಿಡುಗಡೆ ಆಗುತ್ತಿರುವ ನಾಲ್ಕನೇ ಹಾಡು ಇದಾಗಿದೆ. ‘ತೂಫಾನ್​..’,‘ಗಗನ ನೀ..’, ‘ಸುಲ್ತಾನ್​..’ ಹಾಡುಗಳು ಈ ಮೊದಲು ಬಿಡುಗಡೆ ಆಗಿ ಧೂಳೆಬ್ಬಿಸಿದ್ದವು.

‘ಸಲಾರ್​’ ಸಿನಿಮಾದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ಈ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈವರೆಗೆ ಚಿತ್ರದ ಪೋಸ್ಟರ್​ಗಳು ಮಾತ್ರ ರಿಲೀಸ್ ಆಗಿದ್ದವು. ಈಗ ಸಿನಿಮಾದ ಟೀಸರ್ ರಿಲೀಸ್ ಬಗ್ಗೆ ಅಪ್​​ಡೇಟ್​ ನೀಡಿದ್ದಾರೆ ಬಾಲಿವುಡ್ ಟ್ರೇಡ್ ಅನಾಲಿಸ್ಟ್ ತರಣ್ ಆದರ್ಶ್. ಮೇ ಕೊನೆಯ ವಾರದಲ್ಲಿ ‘ಸಲಾರ್’ ಸಿನಿಮಾದ ಟೀಸರ್ ರಿಲೀಸ್ ಆಗುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: KGF Chapter 2 Review: ಕೆಜಿಎಫ್​ ಚಾಪ್ಟರ್​ 2 ವಿಮರ್ಶೆ; ಪ್ರಶಾಂತ್ ನೀಲ್ ಕೈಚಳಕ, ಯಶ್ ಫ್ಯಾನ್ಸ್​ಗೆ ಧಮಾಕ

ಐಎಂಡಿಬಿ, ಬುಕ್​ ಮೈ ಶೋ ರೇಟಿಂಗ್​ನಲ್ಲಿ ‘ಕೆಜಿಎಫ್​ 2’ನದ್ದೇ ಪಾರುಪತ್ಯ; ಈ ಚಿತ್ರವನ್ನು ತಡೆಯೋರೆ ಇಲ್ಲ

Follow Us
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!