AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ರಿಲೀಸ್ ದಿನವೇ ಅಭಿಮಾನಿಗಳಿಗೆ ಸಿಕ್ತು ಎರಡೆರಡು ಸರ್​ಪ್ರೈಸ್

‘ಮೆಹಬೂಬಾ..’ ಹಾಡು ರಾಕಿ ಹಾಗೂ ರೀನಾ ಪಾತ್ರಗಳ ಮಧ್ಯೆ ಬರುವ ಲವ್ ಸಾಂಗ್. ಈ ಹಾಡಿಗೆ ಥಿಯೇಟರ್​ನಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಸಿನಿಮಾ ರಿಲೀಸ್ ದಿನವೇ ಈ ಹಾಡು ರಿಲೀಸ್ ಆಗಿದೆ.

‘ಕೆಜಿಎಫ್ 2’ ರಿಲೀಸ್ ದಿನವೇ ಅಭಿಮಾನಿಗಳಿಗೆ ಸಿಕ್ತು ಎರಡೆರಡು ಸರ್​ಪ್ರೈಸ್
ಸಲಾರ್-ಕೆಜಿಎಫ್ 2
TV9 Web
| Edited By: |

Updated on: Apr 14, 2022 | 6:59 PM

Share

‘ಕೆಜಿಎಫ್ ಚಾಪ್ಟರ್ 2’ (KGF Chapter 2) ಸಿನಿಮಾ ತೆರೆಗೆ ಬಂದಿದೆ. ಚಿತ್ರದ ಅಬ್ಬರ ಜೋರಾಗಿದೆ. ಮೊದಲ ದಿನ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬ ಲೆಕ್ಕಾಚಾರವೂ ಜೋರಾಗಿದೆ. ಈ ಮಧ್ಯೆ, ‘ಕೆಜಿಎಫ್ 2’ ನಿರ್ಮಾಣ ಸಂಸ್ಥೆ ಹೊಂಬಾಳೆ ಕಡೆಯಿಂದ ಸರ್​ಪ್ರೈಸ್ ಒಂದು ಸಿಕ್ಕಿದೆ. ಈ ಚಿತ್ರದ ‘ಮೆಹಬೂಬಾ..’ ಹಾಡಿನ (Mehabooba Song) ಆಡಿಯೋ ಟ್ರ್ಯಾಕ್​ಅನ್ನು ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಜತೆಗೆ ‘ಸಲಾರ್’ ಸಿನಿಮಾದ (Salar Movie) ಕುರಿತು ಹೊಸ ಅಪ್​ಡೇಟ್ ಒಂದು ಸಿಕ್ಕಿದೆ.

‘ಮೆಹಬೂಬಾ..’ ಹಾಡು ರಾಕಿ ಹಾಗೂ ರೀನಾ ಪಾತ್ರಗಳ ಮಧ್ಯೆ ಬರುವ ಲವ್ ಸಾಂಗ್. ಈ ಹಾಡಿಗೆ ಥಿಯೇಟರ್​ನಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಸಿನಿಮಾ ರಿಲೀಸ್ ದಿನವೇ ಈ ಹಾಡು ರಿಲೀಸ್ ಆಗಿದೆ. ಸಂಜೆ ವೇಳೆಗೆ ಚಿತ್ರದ ಆಡಿಯೋ ಟ್ರ್ಯಾಕ್ ರಿಲೀಸ್ ಆಗಿದ್ದು, ಅಭಿಮಾನಿಗಳು ಫುಲ್​ ಖುಷ್ ಆಗಿದ್ದಾರೆ. ‘ಕೆಜಿಎಫ್ 2’ ಟೀಂನಿಂದ ಬಿಡುಗಡೆ ಆಗುತ್ತಿರುವ ನಾಲ್ಕನೇ ಹಾಡು ಇದಾಗಿದೆ. ‘ತೂಫಾನ್​..’,‘ಗಗನ ನೀ..’, ‘ಸುಲ್ತಾನ್​..’ ಹಾಡುಗಳು ಈ ಮೊದಲು ಬಿಡುಗಡೆ ಆಗಿ ಧೂಳೆಬ್ಬಿಸಿದ್ದವು.

‘ಸಲಾರ್​’ ಸಿನಿಮಾದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ಈ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈವರೆಗೆ ಚಿತ್ರದ ಪೋಸ್ಟರ್​ಗಳು ಮಾತ್ರ ರಿಲೀಸ್ ಆಗಿದ್ದವು. ಈಗ ಸಿನಿಮಾದ ಟೀಸರ್ ರಿಲೀಸ್ ಬಗ್ಗೆ ಅಪ್​​ಡೇಟ್​ ನೀಡಿದ್ದಾರೆ ಬಾಲಿವುಡ್ ಟ್ರೇಡ್ ಅನಾಲಿಸ್ಟ್ ತರಣ್ ಆದರ್ಶ್. ಮೇ ಕೊನೆಯ ವಾರದಲ್ಲಿ ‘ಸಲಾರ್’ ಸಿನಿಮಾದ ಟೀಸರ್ ರಿಲೀಸ್ ಆಗುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: KGF Chapter 2 Review: ಕೆಜಿಎಫ್​ ಚಾಪ್ಟರ್​ 2 ವಿಮರ್ಶೆ; ಪ್ರಶಾಂತ್ ನೀಲ್ ಕೈಚಳಕ, ಯಶ್ ಫ್ಯಾನ್ಸ್​ಗೆ ಧಮಾಕ

ಐಎಂಡಿಬಿ, ಬುಕ್​ ಮೈ ಶೋ ರೇಟಿಂಗ್​ನಲ್ಲಿ ‘ಕೆಜಿಎಫ್​ 2’ನದ್ದೇ ಪಾರುಪತ್ಯ; ಈ ಚಿತ್ರವನ್ನು ತಡೆಯೋರೆ ಇಲ್ಲ

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?