AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ರಿಲೀಸ್ ದಿನವೇ ಅಭಿಮಾನಿಗಳಿಗೆ ಸಿಕ್ತು ಎರಡೆರಡು ಸರ್​ಪ್ರೈಸ್

‘ಮೆಹಬೂಬಾ..’ ಹಾಡು ರಾಕಿ ಹಾಗೂ ರೀನಾ ಪಾತ್ರಗಳ ಮಧ್ಯೆ ಬರುವ ಲವ್ ಸಾಂಗ್. ಈ ಹಾಡಿಗೆ ಥಿಯೇಟರ್​ನಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಸಿನಿಮಾ ರಿಲೀಸ್ ದಿನವೇ ಈ ಹಾಡು ರಿಲೀಸ್ ಆಗಿದೆ.

‘ಕೆಜಿಎಫ್ 2’ ರಿಲೀಸ್ ದಿನವೇ ಅಭಿಮಾನಿಗಳಿಗೆ ಸಿಕ್ತು ಎರಡೆರಡು ಸರ್​ಪ್ರೈಸ್
ಸಲಾರ್-ಕೆಜಿಎಫ್ 2
TV9 Web
| Edited By: |

Updated on: Apr 14, 2022 | 6:59 PM

Share

‘ಕೆಜಿಎಫ್ ಚಾಪ್ಟರ್ 2’ (KGF Chapter 2) ಸಿನಿಮಾ ತೆರೆಗೆ ಬಂದಿದೆ. ಚಿತ್ರದ ಅಬ್ಬರ ಜೋರಾಗಿದೆ. ಮೊದಲ ದಿನ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬ ಲೆಕ್ಕಾಚಾರವೂ ಜೋರಾಗಿದೆ. ಈ ಮಧ್ಯೆ, ‘ಕೆಜಿಎಫ್ 2’ ನಿರ್ಮಾಣ ಸಂಸ್ಥೆ ಹೊಂಬಾಳೆ ಕಡೆಯಿಂದ ಸರ್​ಪ್ರೈಸ್ ಒಂದು ಸಿಕ್ಕಿದೆ. ಈ ಚಿತ್ರದ ‘ಮೆಹಬೂಬಾ..’ ಹಾಡಿನ (Mehabooba Song) ಆಡಿಯೋ ಟ್ರ್ಯಾಕ್​ಅನ್ನು ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಜತೆಗೆ ‘ಸಲಾರ್’ ಸಿನಿಮಾದ (Salar Movie) ಕುರಿತು ಹೊಸ ಅಪ್​ಡೇಟ್ ಒಂದು ಸಿಕ್ಕಿದೆ.

‘ಮೆಹಬೂಬಾ..’ ಹಾಡು ರಾಕಿ ಹಾಗೂ ರೀನಾ ಪಾತ್ರಗಳ ಮಧ್ಯೆ ಬರುವ ಲವ್ ಸಾಂಗ್. ಈ ಹಾಡಿಗೆ ಥಿಯೇಟರ್​ನಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಸಿನಿಮಾ ರಿಲೀಸ್ ದಿನವೇ ಈ ಹಾಡು ರಿಲೀಸ್ ಆಗಿದೆ. ಸಂಜೆ ವೇಳೆಗೆ ಚಿತ್ರದ ಆಡಿಯೋ ಟ್ರ್ಯಾಕ್ ರಿಲೀಸ್ ಆಗಿದ್ದು, ಅಭಿಮಾನಿಗಳು ಫುಲ್​ ಖುಷ್ ಆಗಿದ್ದಾರೆ. ‘ಕೆಜಿಎಫ್ 2’ ಟೀಂನಿಂದ ಬಿಡುಗಡೆ ಆಗುತ್ತಿರುವ ನಾಲ್ಕನೇ ಹಾಡು ಇದಾಗಿದೆ. ‘ತೂಫಾನ್​..’,‘ಗಗನ ನೀ..’, ‘ಸುಲ್ತಾನ್​..’ ಹಾಡುಗಳು ಈ ಮೊದಲು ಬಿಡುಗಡೆ ಆಗಿ ಧೂಳೆಬ್ಬಿಸಿದ್ದವು.

‘ಸಲಾರ್​’ ಸಿನಿಮಾದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ಈ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈವರೆಗೆ ಚಿತ್ರದ ಪೋಸ್ಟರ್​ಗಳು ಮಾತ್ರ ರಿಲೀಸ್ ಆಗಿದ್ದವು. ಈಗ ಸಿನಿಮಾದ ಟೀಸರ್ ರಿಲೀಸ್ ಬಗ್ಗೆ ಅಪ್​​ಡೇಟ್​ ನೀಡಿದ್ದಾರೆ ಬಾಲಿವುಡ್ ಟ್ರೇಡ್ ಅನಾಲಿಸ್ಟ್ ತರಣ್ ಆದರ್ಶ್. ಮೇ ಕೊನೆಯ ವಾರದಲ್ಲಿ ‘ಸಲಾರ್’ ಸಿನಿಮಾದ ಟೀಸರ್ ರಿಲೀಸ್ ಆಗುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: KGF Chapter 2 Review: ಕೆಜಿಎಫ್​ ಚಾಪ್ಟರ್​ 2 ವಿಮರ್ಶೆ; ಪ್ರಶಾಂತ್ ನೀಲ್ ಕೈಚಳಕ, ಯಶ್ ಫ್ಯಾನ್ಸ್​ಗೆ ಧಮಾಕ

ಐಎಂಡಿಬಿ, ಬುಕ್​ ಮೈ ಶೋ ರೇಟಿಂಗ್​ನಲ್ಲಿ ‘ಕೆಜಿಎಫ್​ 2’ನದ್ದೇ ಪಾರುಪತ್ಯ; ಈ ಚಿತ್ರವನ್ನು ತಡೆಯೋರೆ ಇಲ್ಲ

Follow Us
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು