AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂರಿಯಾಸಿಟಿ ಹುಟ್ಟಿಸಿದ ಹೊಂಬಾಳೆ ಫಿಲಮ್ಸ್, ಇಂದು ಮಧ್ಯಾಹ್ನ ಬಯಲಾಗುತ್ತೆ ಪ್ಯಾನ್ ಇಂಡಿಯಾ ಸೀಕ್ರೆಟ್

ಸ್ಯಾಂಡಲ್​ವುಡ್​ ನಲ್ಲಿ ಸದ್ಯಕ್ಕೆ ನಡೀತಿರೋ ಪ್ರಯತ್ನಗಳು ಪರಭಾಷಾ ಸಿನಿಮಾ ಮಂದಿಯನ್ನ ಬೆರಗು ಗಣ್ಣಿನಿಂದ ನೋಡುವಂತೆ ಮಾಡ್ತಿವೆ. ಅಂದ ಹಾಗೆ ಸದ್ಯ ಹೊಂಬಾಳೆ ಫಿಲಮ್ಸ್ ಹುಟ್ಟಿಸಿರೋ ಕ್ಯೂರಿಯಾಸಿಟಿಗೆ ಸ್ಯಾಂಡಲ್​ವುಡ್​ ನಲ್ಲಿ ಸಂಚಲನ ಶುರುವಾಗಿದೆ. ಹಾಗಾದ್ರೆ ಸದ್ದಿಲ್ಲದೇ ತೆರೆಮರೆಯಲ್ಲಿ ನಡೆದಿರೋ ಪ್ಯಾನ್ ಇಂಡಿಯಾ ಸಿನಿಮಾ ಪ್ಲಾನ್ ಎಂತಹದ್ದು. ಒಂದೇ ಒಂದು ಸಂದೇಶ ಸೃಷ್ಟಿಸಿರೋ ಸಂಚಲನ ಹೇಗಿದೆ ಅನ್ನೊದರ ಡಿಟೇಲ್ಸ್ ಇಲ್ಲಿದೆ ಓದಿ.

ಕ್ಯೂರಿಯಾಸಿಟಿ ಹುಟ್ಟಿಸಿದ ಹೊಂಬಾಳೆ ಫಿಲಮ್ಸ್, ಇಂದು ಮಧ್ಯಾಹ್ನ ಬಯಲಾಗುತ್ತೆ ಪ್ಯಾನ್ ಇಂಡಿಯಾ ಸೀಕ್ರೆಟ್
ಹೊಂಬಾಳೆ ಫಿಲಮ್ಸ್
ಆಯೇಷಾ ಬಾನು
ಆಯೇಷಾ ಬಾನು|

Updated on: Dec 02, 2020 | 6:37 AM

Share

ಗಾಂಧಿನಗರದ ಗಲ್ಲಿ ಗಲ್ಲಿಯಲ್ಲೂ ಸದ್ಯ ಪ್ಯಾನ್ ಇಂಡಿಯಾ ಸಿನಿಮಾದ ಬಗ್ಗೆಯೇ ಚರ್ಚೆ ಜೋರಾಗಿದೆ. ಅಂದ ಹಾಗೆ ಇಂತಹದ್ದೊಂದು ಬಿಸಿ ಬಿಸಿ ಚರ್ಚೆ ಶುರುವಾಗಿರೋದಕ್ಕೆ ಕಾರಣ ಹೊಂಬಾಳೆ ಫಿಲಮ್ಸ್ ಬಿಟ್ಟಿರೋ ಒಂದೇ ಒಂದು ಪೋಸ್ಟರ್. ಸದ್ಯ ಡಿಸೆಂಬರ್ 2ರಂದು ಒಂದು ಮಹತ್ವದ ಸುದ್ದಿ ಹೊರ ಹಾಕ್ತಿವಿ ಅಂತ ಹೇಳಿರೋ ವಿಚಾರ ಈಗ ಸಾಕಷ್ಟು ಸದ್ದು ಮಾಡ್ತಿದೆ.

ಈ ಸುದ್ದಿ ತಿಳಿದ ಗಾಂಧಿನಗರದ ಮಂದಿ ಅಭಿಮಾನಿಗಳು ಒಳ ಒಳಗೆ ದೊಡ್ಡ ಲೆಕ್ಕಾಚಾರ ಹಾಕ್ತಿದ್ದಾರೆ. ಒಂದು ಪ್ಯಾನ್ ಇಂಡಿಯಾ ಸಿನಿಮಾ ಮಾಡೋ ಪ್ಲಾನ್ ಮಾಡಿರೋ ಕ್ಯೂರಿಯಾಸಿಟಿ ಒಂದಾದ್ರೆ ಈ ಸಿನಿಮಾಗೆ ಆಯ್ಕೆ ಆಗೋ ನಟ ಯಾರು ಅನ್ನೋದು ದೊಡ್ಡ ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ಹರಿದಾಡ್ತಿರೋ ಮಾಹಿತಿ ಪ್ರಕಾರ ಕೆಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾ ಕೊಟ್ಟು ಹಲವು ಭಾಷೆಯ ಸಿನಿಮಾ ಮಂದಿ ಬೆರಗಾಗಿ ನೋಡುವಂತೆ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ ಇಂದು ಅನೌನ್ಸ್ ಆಗಲಿರೋ ಪ್ಯಾನ್ ಇಂಡಿಯಾ ಸಿನಿಮಾಗೆ ಆಕ್ಷನ್ ಕಟ್ ಹೇಳ್ತಾರೆ ಎನ್ನಲಾಗಿದೆ.

ಪ್ಯಾನ್ ಇಂಡಿಯಾ ಸೀಕ್ರೆಟ್​ಗೆ ಇಂದು ತೆರೆ: ಆದ್ರೆ ಕುತೂಹಲದ ಕಣ್ಣುಗಳಿಂದ ಇಂದಿನ ಅಪ್ ಡೇಟ್ಸ್​ಗೆ ಕಾಯ್ತಿರೋದಕ್ಕೆ ಕಾರಣ ಇತ್ತಿಚೆಗಷ್ಟೇ ಪ್ರಶಾಂತ್ ನೀಲ್ ಸದ್ದಿಲ್ಲದೇ ಪ್ರಭಾಸ್ ಹಾಗೂ ಜ್ಯೂ ಎನ್.ಟಿ.ಆರ್. ಅವರನ್ನ ಭೇಟಿ ಮಾಡಿದ್ದಾರೆ ಅನ್ನೋ ಸುದ್ದಿ. ಹೀಗಾಗಿ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳೋದು ಬಾಹುಬಲಿ ಖ್ಯಾತಿಯ ಪ್ರಬಾಸ್​ಗೆ ಅನ್ನೋ ಮಾತು ಹರಿದಾಡ್ತಿದೆ. ಹಾಗಾದ್ರೆ ಇಂದು ಅದಕ್ಕೆ ಅಧಿಕೃತ ಮುದ್ರೆ ಬೀಳುತ್ತಾ ಅಥವಾ ಇದೆಲ್ಲವನ್ನೂ ಬಿಟ್ಟು ಕನ್ನಡದ ನಟನಿಗೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಾ ಅನ್ನೋದಕ್ಕೆ ಉತ್ತರ ಸಿಗುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಇಂದು ಮಧ್ಯಾಹ್ನ ಇಂಡಿಯನ್ ಸಿನಿಮಾ. ಪ್ಯಾನ್ ಇಂಡಿಯಾ ಸಿನಿಮಾ ಅಂತ ದೊಡ್ಡ ಕ್ಯೂರಿಯಾಸಿಟಿ ಹುಟ್ಟಿಸಿರೋ ಹೊಂಬಾಳೆ ಫಿಲಮ್ಸ್ ಅದ್ಯಾವ ರೀತಿ ಉತ್ತರ ಕೊಟ್ಟು ಅಭಿಮಾನಿಗಳ ಕ್ಯೂರಿಯಾಸಿಟಿ ಇಮ್ಮಡಿಗೊಳಿಸುತ್ತೆ ಅಥವಾ ಅಂದಕೊಂಡ ನಿರೀಕ್ಷೆಯನ್ನೆಲ್ಲಾ ಉಲ್ಟಾ ಮಾಡಿ ಉಹಾಪೋಹಕ್ಕೆ ಬ್ರೇಕ್ ಹಾಕುತ್ತೆ ಅನ್ನೋ ಕುತೂಹಲಕ್ಕೆ ಬ್ರೇಕ್ ಬೀಳಲಿದೆ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು